<p><strong>ಮಂಗಳೂರು</strong>: ನಿರಂತರ ಮಳೆಯಿಂದ ಜಲಾವೃತಗೊಂಡಿರುವ ಅದ್ಯಪಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರವ್ ಭೇಟಿ ನೀಡಿದರು.</p><p>ಫಾಲ್ಗುಣಿ ನದಿಗೆ ಪ್ರವಾಹ ಬಂದಾಗ ಅದ್ಯಪಾಡಿಯ ಹಲವಾರು ಮನೆಗಳ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಇದು ಪ್ರತಿ ವರ್ಷದ ಗೋಳು. ಗದ್ದೆಗಳು ಮುಳುಗಡೆಯಾಗುತ್ತವೆ ಎಂದು ಸ್ಥಳೀಯರಾದ ಶಿವರಾಮ್ ಹೇಳಿದರು.</p><p> ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು. </p><p>ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಲ್ಲಿ ಪ್ರವಾಹ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ವರದಿ ಪಡೆದು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.</p><p>ನೆರೆ ಪರಿಹಾರ ಪಡೆಯಲು ಅದ್ಯಪಾಡಿ ನಿವಾಸಿಗಳು ನಿರಾಕರಿಸಿದರು.</p><p>ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಿ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹಾರ ಪಡೆಯಿರಿ. ನೆರೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಒದಗಿಸುವ ಜವಾಬ್ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಸಚಿವರು ರೈತರಲ್ಲಿ ಮನವಿ ಮಾಡಿದರು. </p><p>ಸಚಿವರ ಮನವಿಗೆ ರೈತರು ಒಪ್ಪಿದರು. </p><p>ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ 11 ವರ್ಷಗಳಿಂದ ಗ್ರಾಮಸ್ಥರು ನೆರೆ ಪರಿಹಾರ ತಿರಸ್ಕರಿಸುತ್ತ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಿರಂತರ ಮಳೆಯಿಂದ ಜಲಾವೃತಗೊಂಡಿರುವ ಅದ್ಯಪಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರವ್ ಭೇಟಿ ನೀಡಿದರು.</p><p>ಫಾಲ್ಗುಣಿ ನದಿಗೆ ಪ್ರವಾಹ ಬಂದಾಗ ಅದ್ಯಪಾಡಿಯ ಹಲವಾರು ಮನೆಗಳ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಇದು ಪ್ರತಿ ವರ್ಷದ ಗೋಳು. ಗದ್ದೆಗಳು ಮುಳುಗಡೆಯಾಗುತ್ತವೆ ಎಂದು ಸ್ಥಳೀಯರಾದ ಶಿವರಾಮ್ ಹೇಳಿದರು.</p><p> ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು. </p><p>ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಲ್ಲಿ ಪ್ರವಾಹ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ವರದಿ ಪಡೆದು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.</p><p>ನೆರೆ ಪರಿಹಾರ ಪಡೆಯಲು ಅದ್ಯಪಾಡಿ ನಿವಾಸಿಗಳು ನಿರಾಕರಿಸಿದರು.</p><p>ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಿ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹಾರ ಪಡೆಯಿರಿ. ನೆರೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಒದಗಿಸುವ ಜವಾಬ್ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಸಚಿವರು ರೈತರಲ್ಲಿ ಮನವಿ ಮಾಡಿದರು. </p><p>ಸಚಿವರ ಮನವಿಗೆ ರೈತರು ಒಪ್ಪಿದರು. </p><p>ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ 11 ವರ್ಷಗಳಿಂದ ಗ್ರಾಮಸ್ಥರು ನೆರೆ ಪರಿಹಾರ ತಿರಸ್ಕರಿಸುತ್ತ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>