<p><strong>ಬಜಪೆ</strong>: ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಕುಸಿದು ಬಿದ್ದ ಮನೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಆರ್ಥಿಕವಾಗಿ ಹಿಂದುಳಿದ ಧನಲಕ್ಷ್ಮಿ ಅವರಿಗೆ ಸರ್ಕಾರದಿಂದ ಲಭ್ಯವಿರುವ ಮಳೆಹಾನಿ ನಿಧಿಯಿಂದ ಪರಿಹಾರ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು. ದಾನಿಗಳ ನೆರವು ಪಡೆದು ಹಾಗೂ ವೈಯಕ್ತಿಕ ನೆಲೆಯಲ್ಲಿ ಅವರ ಪುತ್ರನ ಕಾಲೇಜು ವಿದ್ಯಾಭ್ಯಾಸ ಮುಂದುವರಿಸಲು ಸಹಕರಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಗುರುಪುರ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜೇಶ್ ಸುವರ್ಣ, ಹರೀಶ್ ಬಳ್ಳಿ, ಚಂದ್ರಾವತಿ, ಬಿಜೆಪಿ ಪ್ರಮುಖ ಚಿದಾನಂದ ನಂದ್ಯ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಜಪೆ</strong>: ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಕುಸಿದು ಬಿದ್ದ ಮನೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಆರ್ಥಿಕವಾಗಿ ಹಿಂದುಳಿದ ಧನಲಕ್ಷ್ಮಿ ಅವರಿಗೆ ಸರ್ಕಾರದಿಂದ ಲಭ್ಯವಿರುವ ಮಳೆಹಾನಿ ನಿಧಿಯಿಂದ ಪರಿಹಾರ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು. ದಾನಿಗಳ ನೆರವು ಪಡೆದು ಹಾಗೂ ವೈಯಕ್ತಿಕ ನೆಲೆಯಲ್ಲಿ ಅವರ ಪುತ್ರನ ಕಾಲೇಜು ವಿದ್ಯಾಭ್ಯಾಸ ಮುಂದುವರಿಸಲು ಸಹಕರಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಗುರುಪುರ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜೇಶ್ ಸುವರ್ಣ, ಹರೀಶ್ ಬಳ್ಳಿ, ಚಂದ್ರಾವತಿ, ಬಿಜೆಪಿ ಪ್ರಮುಖ ಚಿದಾನಂದ ನಂದ್ಯ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>