<p><strong>ಮಂಗಳೂರು</strong>: ವಿಧಾನಸಭೆ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆಯೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯ ಹುಟ್ಟುಹಾಕುವುದು ಇಷ್ಟವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ಹೇಳಿದರು.</p><p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹದಿನಾರನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚಿಸಲು ಅವಕಾಶ ನೀಡಿಲ್ಲ ಎಂಬ ಆರೋಪಕ್ಕೆ ಪ್ರತ್ಯುತ್ತರ ನೀಡಿದರು.</p><p>ಮುಡಾ ಹಗರಣದ ಸಂಬಂಧ ಶಾಸಕರು ಮಂಡಿಸಿದ ನಿಲುವಳಿ ಸೂಚನೆಗೆ, ನಿಯಮಗಳ ಪ್ರಕಾರ ಚರ್ಚೆಗೆ ಅವಕಾಶ ನೀಡಲಾಗಲ್ಲ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 62(7)ರ ಪ್ರಕಾರ ‘ನಿಲುವಳಿ ಸೂಚನೆಯು ಭಾರತದ ಯಾವುದೇ ಭಾಗದಲ್ಲಿ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವ ಯಾವುದೇ ವಿಷಯಕ್ಕೆ ಸಂಬಂಧಿಸಿ ಇರಬಾರದು’ಎಂದು ಹೇಳುತ್ತದೆ. </p><p>ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 63ರ ಪ್ರಕಾರ ‘ನ್ಯಾಯಾಧೀಕರಣಗಳು, ಆಯೋಗಗಳು ಮುಂತಾದವುಗಳ ಮುಂದಿರುವ ವಿಷಯಗಳ ಕುರಿತು ಚರ್ಚಿಸಲು ನಿಲುವಳಿ ಸೂಚನೆ ತರುವುದು, ಯಾವುದೇ ನ್ಯಾಯಿಕ ಅಥವಾ ನ್ಯಾಯಿಕ ಸ್ವರೂಪದ ಪ್ರಕಾರಗಳನ್ನು ನಿರ್ವಹಿಸುತ್ತಿರುವ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನ ಪ್ರಾಧಿಕಾರದ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ, ತನಿಖೆ ನಡೆಸಲು ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಬಾಕಿ ಇರುವ ವಿಷಯದ ಕುರಿತು ಚರ್ಚಿಸಲು ಸೂಚನೆಯನ್ನು ತರಲು ಅವಕಾಶವನ್ನು ಕೊಡಬಾರದು‘ ಎಂದಿದೆ. ಸರ್ಕಾರ ಚರ್ಚೆಗೆ ಸಿದ್ದವಿದ್ದರೂ, ಸಿದ್ದವಿಲ್ಲದಿದ್ದರೂ ನಿಯಮಾವಳಿಗಳನ್ನು ಮುರಿಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. </p><p>ಮುಡಾ ಹಗರಣದ ತನಿಖೆಗೆ ಈಗಾಗಲೇ ನಿವೃತ್ತ ನ್ಯಾಯಾಧೀಶರ ಆಯೋಗವನ್ನು ರಚನೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಸ್ಪೀಕರ್ ಪೀಠಕ್ಕೆ ನೀಡಿದೆ. ಸದನದಲ್ಲಿ ವಿಷಯ ಚರ್ಚೆಯಾದರೆ ನ್ಯಾಯಾಧಿಕರಣ, ಆಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ಸಮರ್ಥಿಸಿಕೊಂಡರು.</p><p>ಸದನದ ಎಲ್ಲ ಸದಸ್ಯರಿಗೂ ಕಲಾಪದಲ್ಲಿ ಮಾತನಾಡುವ ಮುಕ್ತ ಅವಕಾಶ ಇದೆ. ಕಾನೂನು ರಚಿಸುವ ಹುದ್ದೆಯಲ್ಲಿರುವ ವಿಧಾನಸಭಾ ಸದಸ್ಯರು ನಿಯಮ ಮೀರಿ ಚರ್ಚಿಸುವ ಕೆಟ್ಟ ಪರಂಪರೆ ಹುಟ್ಟು ಹಾಕಬಾರದು. ಯಾವುದೇ ನ್ಯಾಯ ಪ್ರಕ್ರಿಯೆ ಕಾನೂನು, ನಿಯಮ ಬದ್ಧವಾಗಿಯೇ ನಡೆಯಬೇಕು. ಜನರು ಬಯಸುತ್ತಾರೆ ಎಂದೋ, ಬಹುಮತ ಇದೆಯೆಂದೋ ನಿಯಮಾವಳಿ, ಕಾನೂನು ಮೀರಬಾರದು ಎಂಬ ಪ್ರಜ್ಞೆ ನಮಗಿರಬೇಕು. ಮುಕ್ತ ಮಾತುಕತೆಗೆ ಸದನದಲ್ಲಿ ಬಿಎಸಿ (ಬ್ಯುಸಿನೆಸ್ ಅಡ್ವೈಸರಿ ಕಮಿಟಿ) ಇದೆ. ಆ ಸಮಿತಿಯಲ್ಲಿ ಪ್ರತಿಪಕ್ಷದ ನಾಯಕರು, ಎಲ್ಲ ಪಕ್ಷಗಳ ಶಾಸಕಾಂಗ ನಾಯಕರೂ, ಮುಖ್ಯಮಂತ್ರಿ, ಸಚಿವರು ಇರುತ್ತಾರೆ. ಬಿಎಸಿ ಸಮಿತಿಯಲ್ಲಿ ಈ ವಿಷಯವನ್ನು ಚರ್ಚಿಸಿ ನಿಯಮಾವಳಿಗಳಂತೆ ಬೇರೊಂದು ನಿಯಮ ಸಂಖ್ಯೆಯಡಿಯಲ್ಲಿ ಚರ್ಚಿಸುವ ಅವಕಾಶವನ್ನು ಸರ್ವಾನುಮತದ ನಿರ್ಧಾರಕ್ಕೆ ಬರುವ 'ಮಾದರಿ' ಅವಕಾಶ ಇದ್ದೇ ಇದೆ.</p><p>ವಿಧಾನಸಭಾ ಅಧ್ಯಕ್ಷರ ಪೀಠವು ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳಲ್ಲಿ ಒಂದು. ಇಂತಹ ಪೀಠವು ಜನಪ್ರಿಯ ಮಾದರಿಯ ಗೋಜಲಿಗೆ ಸಿಲುಕದೆ ನಿಯಮದಂತೆ ಕೆಲಸ ಮಾಡಬೇಕಾಗುತ್ತದೆ. ನಿಯಮ ಮೀರುವುದು ಮುಂದಿನ ಪೀಳಿಗೆಗೆ ಕೆಟ್ಟ ಪರಂಪರೆ ಹಾಕಿಕೊಟ್ಟಂತಾಗುತ್ತದೆ ಎಂದು ಹೇಳಿದರು.</p><p><strong>ವಿಷಾದ ಇದೆ:</strong> ಎಂಟು ದಿನ ಅಧಿವೇಶನ ನಡೆದಿದೆ. ಅತಿವೃಷ್ಟಿ, ಜನರ ಸಮಸ್ಯೆ ಬಗ್ಗೆ ಚರ್ಚೆಗಳು ನಡೆದಿವೆ. 36 ಗಂಟೆ , 51 ನಿಮಿಷ ಕಾರ್ಯ ಕಲಾಪ ನಡೆದಿದೆ. ಮೂರು ತಿಂಗಳಿಗೊಮ್ಮೆ ನಡೆಯುವ ಅಧಿವೇಶನದಲ್ಲಿ ಜನರ ಸಮಸ್ಯೆ ಹೆಚ್ಚು ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬೇಕು. ಆದರೆ, ಈ ಬಾರಿ ಜನರ ಸಮಸ್ಯೆ ಹೆಚ್ಚು ಚರ್ಚಿಸಲು ಆಗಿಲ್ಲ ಎಂಬ ವಿಷಾದ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ವಿಧಾನಸಭೆ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆಯೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯ ಹುಟ್ಟುಹಾಕುವುದು ಇಷ್ಟವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ಹೇಳಿದರು.</p><p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹದಿನಾರನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚಿಸಲು ಅವಕಾಶ ನೀಡಿಲ್ಲ ಎಂಬ ಆರೋಪಕ್ಕೆ ಪ್ರತ್ಯುತ್ತರ ನೀಡಿದರು.</p><p>ಮುಡಾ ಹಗರಣದ ಸಂಬಂಧ ಶಾಸಕರು ಮಂಡಿಸಿದ ನಿಲುವಳಿ ಸೂಚನೆಗೆ, ನಿಯಮಗಳ ಪ್ರಕಾರ ಚರ್ಚೆಗೆ ಅವಕಾಶ ನೀಡಲಾಗಲ್ಲ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 62(7)ರ ಪ್ರಕಾರ ‘ನಿಲುವಳಿ ಸೂಚನೆಯು ಭಾರತದ ಯಾವುದೇ ಭಾಗದಲ್ಲಿ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವ ಯಾವುದೇ ವಿಷಯಕ್ಕೆ ಸಂಬಂಧಿಸಿ ಇರಬಾರದು’ಎಂದು ಹೇಳುತ್ತದೆ. </p><p>ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 63ರ ಪ್ರಕಾರ ‘ನ್ಯಾಯಾಧೀಕರಣಗಳು, ಆಯೋಗಗಳು ಮುಂತಾದವುಗಳ ಮುಂದಿರುವ ವಿಷಯಗಳ ಕುರಿತು ಚರ್ಚಿಸಲು ನಿಲುವಳಿ ಸೂಚನೆ ತರುವುದು, ಯಾವುದೇ ನ್ಯಾಯಿಕ ಅಥವಾ ನ್ಯಾಯಿಕ ಸ್ವರೂಪದ ಪ್ರಕಾರಗಳನ್ನು ನಿರ್ವಹಿಸುತ್ತಿರುವ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನ ಪ್ರಾಧಿಕಾರದ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ, ತನಿಖೆ ನಡೆಸಲು ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಬಾಕಿ ಇರುವ ವಿಷಯದ ಕುರಿತು ಚರ್ಚಿಸಲು ಸೂಚನೆಯನ್ನು ತರಲು ಅವಕಾಶವನ್ನು ಕೊಡಬಾರದು‘ ಎಂದಿದೆ. ಸರ್ಕಾರ ಚರ್ಚೆಗೆ ಸಿದ್ದವಿದ್ದರೂ, ಸಿದ್ದವಿಲ್ಲದಿದ್ದರೂ ನಿಯಮಾವಳಿಗಳನ್ನು ಮುರಿಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. </p><p>ಮುಡಾ ಹಗರಣದ ತನಿಖೆಗೆ ಈಗಾಗಲೇ ನಿವೃತ್ತ ನ್ಯಾಯಾಧೀಶರ ಆಯೋಗವನ್ನು ರಚನೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಸ್ಪೀಕರ್ ಪೀಠಕ್ಕೆ ನೀಡಿದೆ. ಸದನದಲ್ಲಿ ವಿಷಯ ಚರ್ಚೆಯಾದರೆ ನ್ಯಾಯಾಧಿಕರಣ, ಆಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ಸಮರ್ಥಿಸಿಕೊಂಡರು.</p><p>ಸದನದ ಎಲ್ಲ ಸದಸ್ಯರಿಗೂ ಕಲಾಪದಲ್ಲಿ ಮಾತನಾಡುವ ಮುಕ್ತ ಅವಕಾಶ ಇದೆ. ಕಾನೂನು ರಚಿಸುವ ಹುದ್ದೆಯಲ್ಲಿರುವ ವಿಧಾನಸಭಾ ಸದಸ್ಯರು ನಿಯಮ ಮೀರಿ ಚರ್ಚಿಸುವ ಕೆಟ್ಟ ಪರಂಪರೆ ಹುಟ್ಟು ಹಾಕಬಾರದು. ಯಾವುದೇ ನ್ಯಾಯ ಪ್ರಕ್ರಿಯೆ ಕಾನೂನು, ನಿಯಮ ಬದ್ಧವಾಗಿಯೇ ನಡೆಯಬೇಕು. ಜನರು ಬಯಸುತ್ತಾರೆ ಎಂದೋ, ಬಹುಮತ ಇದೆಯೆಂದೋ ನಿಯಮಾವಳಿ, ಕಾನೂನು ಮೀರಬಾರದು ಎಂಬ ಪ್ರಜ್ಞೆ ನಮಗಿರಬೇಕು. ಮುಕ್ತ ಮಾತುಕತೆಗೆ ಸದನದಲ್ಲಿ ಬಿಎಸಿ (ಬ್ಯುಸಿನೆಸ್ ಅಡ್ವೈಸರಿ ಕಮಿಟಿ) ಇದೆ. ಆ ಸಮಿತಿಯಲ್ಲಿ ಪ್ರತಿಪಕ್ಷದ ನಾಯಕರು, ಎಲ್ಲ ಪಕ್ಷಗಳ ಶಾಸಕಾಂಗ ನಾಯಕರೂ, ಮುಖ್ಯಮಂತ್ರಿ, ಸಚಿವರು ಇರುತ್ತಾರೆ. ಬಿಎಸಿ ಸಮಿತಿಯಲ್ಲಿ ಈ ವಿಷಯವನ್ನು ಚರ್ಚಿಸಿ ನಿಯಮಾವಳಿಗಳಂತೆ ಬೇರೊಂದು ನಿಯಮ ಸಂಖ್ಯೆಯಡಿಯಲ್ಲಿ ಚರ್ಚಿಸುವ ಅವಕಾಶವನ್ನು ಸರ್ವಾನುಮತದ ನಿರ್ಧಾರಕ್ಕೆ ಬರುವ 'ಮಾದರಿ' ಅವಕಾಶ ಇದ್ದೇ ಇದೆ.</p><p>ವಿಧಾನಸಭಾ ಅಧ್ಯಕ್ಷರ ಪೀಠವು ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳಲ್ಲಿ ಒಂದು. ಇಂತಹ ಪೀಠವು ಜನಪ್ರಿಯ ಮಾದರಿಯ ಗೋಜಲಿಗೆ ಸಿಲುಕದೆ ನಿಯಮದಂತೆ ಕೆಲಸ ಮಾಡಬೇಕಾಗುತ್ತದೆ. ನಿಯಮ ಮೀರುವುದು ಮುಂದಿನ ಪೀಳಿಗೆಗೆ ಕೆಟ್ಟ ಪರಂಪರೆ ಹಾಕಿಕೊಟ್ಟಂತಾಗುತ್ತದೆ ಎಂದು ಹೇಳಿದರು.</p><p><strong>ವಿಷಾದ ಇದೆ:</strong> ಎಂಟು ದಿನ ಅಧಿವೇಶನ ನಡೆದಿದೆ. ಅತಿವೃಷ್ಟಿ, ಜನರ ಸಮಸ್ಯೆ ಬಗ್ಗೆ ಚರ್ಚೆಗಳು ನಡೆದಿವೆ. 36 ಗಂಟೆ , 51 ನಿಮಿಷ ಕಾರ್ಯ ಕಲಾಪ ನಡೆದಿದೆ. ಮೂರು ತಿಂಗಳಿಗೊಮ್ಮೆ ನಡೆಯುವ ಅಧಿವೇಶನದಲ್ಲಿ ಜನರ ಸಮಸ್ಯೆ ಹೆಚ್ಚು ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬೇಕು. ಆದರೆ, ಈ ಬಾರಿ ಜನರ ಸಮಸ್ಯೆ ಹೆಚ್ಚು ಚರ್ಚಿಸಲು ಆಗಿಲ್ಲ ಎಂಬ ವಿಷಾದ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>