<p><strong>ಮಂಗಳೂರು</strong>: ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಪ್ರಯುಕ್ತ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜುಲೈ 28ರಂದು ಸಂಜೆ 5ರಿಂದ ರಾತ್ರಿ 10 ಗಂಟೆವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಮುದುಕನ ಮದುವೆ’ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ‘ಯುಗಪುರುಷ’ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ, ದಿ.ಪಿ.ಬಿ. ರೈ ನೆನಪಿನಲ್ಲಿ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕ ‘ಮುದುಕನ ಮದುವೆ’ ಉಚಿತ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹಿಂದೆ ಈ ನಾಟಕ ಜನರ ಮನಸ್ಸನ್ನು ಗೆದ್ದಿದ್ದು, ಈಗ ಮತ್ತೊಮ್ಮೆ ಜನರನ್ನು ಸೆಳೆಯಲಿದೆ’ ಎಂದರು. </p>.<p> ‘ಮುದುಕನ ಮದುವೆ ನಾಟಕದಲ್ಲಿ ಈ ಹಿಂದೆ ಅಭಿನಯಿಸಿದ್ದ ಬಹುತೇಕ ಕಲಾವಿದರು ಪುನಃ ಬಣ್ಣ ಹಚ್ಚಲಿದ್ದಾರೆ. ದೀಪಕ್ ರೈ ಪಾಣಾಜೆ, ರಾಘವೇಂದ್ರ ರೈ, ಕವಿತಾ ಚನ್ನಪಟ್ಟಣ ಪ್ರಮುಖ ಪಾತ್ರದಲ್ಲಿ ಇರಲಿದ್ದಾರೆ’ ಎಂದು ಶೋಭಾ ರೈ ಹೇಳಿದರು.</p>.<p>ರಾಘವೇಂದ್ರ ರೈ, ಶಿಲ್ಪಾ, ಶರತ್ ಶೆಟ್ಟಿ ಕಿನ್ನಿಗೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಪ್ರಯುಕ್ತ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜುಲೈ 28ರಂದು ಸಂಜೆ 5ರಿಂದ ರಾತ್ರಿ 10 ಗಂಟೆವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಮುದುಕನ ಮದುವೆ’ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ‘ಯುಗಪುರುಷ’ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ, ದಿ.ಪಿ.ಬಿ. ರೈ ನೆನಪಿನಲ್ಲಿ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕ ‘ಮುದುಕನ ಮದುವೆ’ ಉಚಿತ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹಿಂದೆ ಈ ನಾಟಕ ಜನರ ಮನಸ್ಸನ್ನು ಗೆದ್ದಿದ್ದು, ಈಗ ಮತ್ತೊಮ್ಮೆ ಜನರನ್ನು ಸೆಳೆಯಲಿದೆ’ ಎಂದರು. </p>.<p> ‘ಮುದುಕನ ಮದುವೆ ನಾಟಕದಲ್ಲಿ ಈ ಹಿಂದೆ ಅಭಿನಯಿಸಿದ್ದ ಬಹುತೇಕ ಕಲಾವಿದರು ಪುನಃ ಬಣ್ಣ ಹಚ್ಚಲಿದ್ದಾರೆ. ದೀಪಕ್ ರೈ ಪಾಣಾಜೆ, ರಾಘವೇಂದ್ರ ರೈ, ಕವಿತಾ ಚನ್ನಪಟ್ಟಣ ಪ್ರಮುಖ ಪಾತ್ರದಲ್ಲಿ ಇರಲಿದ್ದಾರೆ’ ಎಂದು ಶೋಭಾ ರೈ ಹೇಳಿದರು.</p>.<p>ರಾಘವೇಂದ್ರ ರೈ, ಶಿಲ್ಪಾ, ಶರತ್ ಶೆಟ್ಟಿ ಕಿನ್ನಿಗೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>