ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಕಾರಿ ಸಿ.ಬಿ.ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎನ್.ಯತೀಶ್ ಅವರನ್ನು ವರ್ಗಾಯಿಸಲಾಗಿದೆ.
ಯತೀಶ್ ಅವರು ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ. ರಿಷ್ಯಂತ್ ಅವರನ್ನು ಬೆಂಗಳೂರು ಜಿಲ್ಲೆಯ ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯ ಹೊಣೆ ವಹಿಸಲಾಗಿದೆ.