<p><strong>ಮಂಗಳೂರು:</strong> ‘ಜಗತ್ತಿನಲ್ಲಿ ಭಾರತ ನಂಬರ್ ವನ್ ಸ್ಥಾನಕ್ಕೇರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಬರಬೇಕಿದೆ’ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ವಕ್ತಾರ ಶಿವಶಂಕರ್ ಹೇಳಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಜನ್ಧನ್, ಉಜ್ವಲಾದಂತಹ ಯೋಜನೆಗಳಿಂದ ಬಡಜನರ ಜೀವನಮಟ್ಟ ಸುಧಾರಿಸಿದೆ. ಕೇಂದ್ರ ಪೂರೈಸುವ ಅಕ್ಕಿಯನ್ನು ಹಂಚುತ್ತಿರುವ ರಾಜ್ಯ ಸರ್ಕಾರ ಅನ್ನಭಾಗ್ಯ ತನ್ನದೇ ಯೋಜನೆ ಎನ್ನುತ್ತಿದೆ. ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ₹11,500 ಕೋಟಿ ಅನುದಾನವನ್ನು ವಿನಿಯೋಗಿಸಿದೆ’ ಎಂದರು.</p>.<p>‘ಪಕ್ಷವು ಮೈಸೂರಿನ ರಾಜವಂಶಸ್ಥರಿಂದ ಹಿಡಿದು ಸರಳ ಸಜ್ಜನ ಕೋಟ ಶ್ರೀನಿವಾಸ ಪೂಜಾರಿ ಅವರಂತಹವರಿಗೂ ಟಿಕೆಟ್ ನೀಡಿದೆ. ಚಿತ್ರದುರ್ಗ ಮೀಸಲು ಕ್ಷೇತ್ರದ ಟಿಕೆಟ್ ಹಂಚಿಕೆ ಬಿಕ್ಕಟ್ಟು ಶೀಘ್ರವೇ ಬಗೆಹರಿಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p>.<p>ಬಿಜೆಪಿ ನಾಯಕರಾಗಿದ್ದ ದಿ. ಕೆ.ಶಿವರಾಂ ಅವರಿಗೆ ಚಾಮರಾಜನಗರ ಕ್ಷೇತ್ರದ ಟಿಕೆಟ್ ನಿರಾಕರಿಸಿ ರಾಜಕೀಯವಾಗಿ ವಂಚಿಸಲಾಗಿತ್ತು ಎಂದು ಅವರ ಪತ್ನಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಶಂಕರ್, ‘ಗೆಲ್ಲುವ ಅವಕಾಶ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ. ಹಾಗಾಗಿ ಅವರಿಗೆ ಟಿಕೆಟ್ ತಪ್ಪಿರಬಹುದು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಬೆಳುವಾಯಿ, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಟ್ಯಾನ್, ಚಂದ್ರಕಲಾ ಸಿ.ಕೆ, ಉಪಾಧ್ಯಕ್ಷ ಸದಾಶಿವ ನೆಲ್ಲಿಕಾರು ಹಾಗೂ ಕಾರ್ಯದರ್ಶಿ ವಿನಯ್ ಸಾಲ್ಯಾನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಜಗತ್ತಿನಲ್ಲಿ ಭಾರತ ನಂಬರ್ ವನ್ ಸ್ಥಾನಕ್ಕೇರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಬರಬೇಕಿದೆ’ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ವಕ್ತಾರ ಶಿವಶಂಕರ್ ಹೇಳಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಜನ್ಧನ್, ಉಜ್ವಲಾದಂತಹ ಯೋಜನೆಗಳಿಂದ ಬಡಜನರ ಜೀವನಮಟ್ಟ ಸುಧಾರಿಸಿದೆ. ಕೇಂದ್ರ ಪೂರೈಸುವ ಅಕ್ಕಿಯನ್ನು ಹಂಚುತ್ತಿರುವ ರಾಜ್ಯ ಸರ್ಕಾರ ಅನ್ನಭಾಗ್ಯ ತನ್ನದೇ ಯೋಜನೆ ಎನ್ನುತ್ತಿದೆ. ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ₹11,500 ಕೋಟಿ ಅನುದಾನವನ್ನು ವಿನಿಯೋಗಿಸಿದೆ’ ಎಂದರು.</p>.<p>‘ಪಕ್ಷವು ಮೈಸೂರಿನ ರಾಜವಂಶಸ್ಥರಿಂದ ಹಿಡಿದು ಸರಳ ಸಜ್ಜನ ಕೋಟ ಶ್ರೀನಿವಾಸ ಪೂಜಾರಿ ಅವರಂತಹವರಿಗೂ ಟಿಕೆಟ್ ನೀಡಿದೆ. ಚಿತ್ರದುರ್ಗ ಮೀಸಲು ಕ್ಷೇತ್ರದ ಟಿಕೆಟ್ ಹಂಚಿಕೆ ಬಿಕ್ಕಟ್ಟು ಶೀಘ್ರವೇ ಬಗೆಹರಿಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p>.<p>ಬಿಜೆಪಿ ನಾಯಕರಾಗಿದ್ದ ದಿ. ಕೆ.ಶಿವರಾಂ ಅವರಿಗೆ ಚಾಮರಾಜನಗರ ಕ್ಷೇತ್ರದ ಟಿಕೆಟ್ ನಿರಾಕರಿಸಿ ರಾಜಕೀಯವಾಗಿ ವಂಚಿಸಲಾಗಿತ್ತು ಎಂದು ಅವರ ಪತ್ನಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಶಂಕರ್, ‘ಗೆಲ್ಲುವ ಅವಕಾಶ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ. ಹಾಗಾಗಿ ಅವರಿಗೆ ಟಿಕೆಟ್ ತಪ್ಪಿರಬಹುದು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಬೆಳುವಾಯಿ, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಟ್ಯಾನ್, ಚಂದ್ರಕಲಾ ಸಿ.ಕೆ, ಉಪಾಧ್ಯಕ್ಷ ಸದಾಶಿವ ನೆಲ್ಲಿಕಾರು ಹಾಗೂ ಕಾರ್ಯದರ್ಶಿ ವಿನಯ್ ಸಾಲ್ಯಾನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>