ಶಂಖಪಾಲ ಬೆಟ್ಟದಲ್ಲಿ ಮೊದಲ ಹಂತದ ಕಾಮಗಾರಿ ಭಾಗವಾಗಿ ಸಭಾಭವನ ನಿರ್ಮಾಣ, ಪ್ರಾಜ್ಯ ವಸ್ತು ಸಂಗ್ರಹಾಲಯ, ಗ್ರಂಥಾಲಯ, ಶೌಚಾಲಯ, ಬೆಟ್ಟಕ್ಕೆ ಏರಲು ಎರಡು ಬದಿಗಳಿಂದ ಮೆಟ್ಟಿಲು ಹಾಗೂ ಹಸಿರು ಪಾರ್ಕ್ ವ್ಯವಸ್ಥೆ, ನೀರಿನ ವ್ಯವಸ್ಥೆ, ಮಾಹಿತಿ ಫಲಕಗಳ ಅಳವಡಿಕೆ ಮತ್ತಿತರರ ಕಾಮಗಾರಿಗಳನ್ನು ಉದ್ದೇಶಿಸಲಾಗಿತ್ತು. ಇದಕ್ಕಾಗಿ ಅಂದಾಜು ₹2.75 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿತ್ತು. ಆಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಇದಕ್ಕಾಗಿ ಶಂಕುಸ್ಥಾಪನೆಯನ್ನೂ ನೆರವೇರಿಸಲಾಗಿತ್ತು. ಆದರೆ, ಕಳೆದೊಂದು ದಶಕದಲ್ಲಿ ಪ್ರವಾಸಿ ತಾಣ ಅಭಿವೃದ್ಧಿ ನಿಟ್ಟಿನಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ.