<p><strong>ಮಂಗಳೂರು:</strong> ‘ಮತಾಂತರ, ‘ಲವ್ ಜಿಹಾದ್’, ಭಯೋತ್ಪಾದನೆ, ಡ್ರಗ್ಸ್ ಹಾವಳಿ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇದನ್ನು ಖಂಡಿಸಿ ತಾಲ್ಲೂಕು ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲು ಪೊಲೀಸ್ ಇಲಾಖೆಯ ಅನುಮತಿ ಕೋರಿದ್ದೆವು. ಅನುಮತಿ ನಿರಾಕರಿಸುವ ಮೂಲಕ ಪ್ರತಿಭಟಿಸುವ ಹಕ್ಕಿಗೆ ನಗರ ಪೊಲೀಸ್ ಕಮಿಷನರ್ ಚ್ಯುತಿ ತಂದಿದ್ದಾರೆ’ ಎಂದು ಹಿಂದೂ ಮಹಿಳಾ ಸುರಕ್ಷಾ ಸಮಿತಿ ಆಕ್ರೋಶ ವ್ಯಕ್ತಪಡಿಸಿತು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಸಮಿತಿಯ ವಕೀಲ ಹರೀಶ್ ಕುಮಾರ್, ‘ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲು ಅನುಮತಿ ಕೋರಿ ಪೊಲೀಸ್ ಇಲಾಖೆಗೆ ಶುಕ್ರವಾರವೇ ಅರ್ಜಿ ಸಲ್ಲಿಸಿದ್ದೆವು. ಆದರೆ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ‘ನಾನು ಅನುಮತಿ ಕೊಡುವುದಿಲ್ಲ. ನಿಮಗೆ ತೋಚಿದ್ದನ್ನು ನೀವು ಮಾಡಿ’ ಎಂದು ಖಡಾಖಂಡಿತವಾಗಿ ಹೇಳಿದರು. ನಮ್ಮ ಮಾತನ್ನು ಆಲಿಸುವ ಸೌಜನ್ಯವನ್ನೂ ತೋರಲಿಲ್ಲ. ಈ ನಡೆಯನ್ನು ಬಲವಾಗಿ ಖಂಡಿಸುತ್ತೇವೆ’ ಎಂದರು. </p>.<p>‘‘ಲವ್ಜಿಹಾದ್’ ಹೆಸರಿನಲ್ಲಿ ನೀವು ನಿರ್ದಿಷ್ಟ ಸಮುದಾಯವನ್ನು ಗುರಿಯನ್ನಾಗಿಸಿ ಪ್ರತಿಭಟನೆ ನಡೆಸುತ್ತೀರಿ‘ ಎಂದು ಕಮಿಷನರ್ ಹೇಳಿದರು. ನಮ್ಮ ಪ್ರತಿಭಟನೆ ಯಾವ ಸಮುದಾಯದ ವಿರುದ್ಧವೂ ಅಲ್ಲ. ಹಿಂದು ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ’ ಎಂದು ಸ್ಪಷ್ಟಪಡಿಸಿದರು.</p>.<p>ಸಮಿತಿಯ ಶ್ರೀಲಕ್ಷ್ಮೀ ಮಠದಮೂಲೆ, ‘ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ‘ಲವ್ ಜಿಹಾದ್’ ಪ್ರಕರಣಗಳು ಮರುಕಳಿಸುತ್ತಿವೆ. ಇದನ್ನು ಪ್ರತಿಭಟಿಸುವದರ ಜೊತೆ ಜನಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ಇದಕ್ಕೆ ಪೊಲೀಸರು ಏಕೆ ಅವಕಾಶ ನೀಡಲಿಲ್ಲ ಎಂದು ಗೊತ್ತಿಲ್ಲ. ಮಹಿಳೆಯರ ಧ್ವನಿಯನ್ನು ಪೊಲೀಸ್ ಇಲಾಖೆ ಹತ್ತಿಕ್ಕುತ್ತಿದೆ’ ಎಂದರು.</p>.<p>ಸಮಿತಿಯ ರೂಪಾ ಡಿ.ಬಂಗೇರ, ‘ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ‘ಲವ್ ಜಿಹಾದ್’, ಮತಾಂತರ ನಡೆಯುತ್ತಿಲ್ಲ ಎನ್ನುವ ಪೊಲೀಸರು ನಾಳೆ ಭಯೋತ್ಪಾದನೆಯೂ ನಡೆಯುತ್ತಿಲ್ಲ ಎನ್ನಬಹುದು. ಪ್ರತಿಭಟಿಸುವ ಸಂವಿಧಾನ ಬದ್ಧ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಕಾಣದ ಕೈಗಳ ಒತ್ತಡಕ್ಕೆ ಸಿಲುಕಿ ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದು ಸರಿಯಲ್ಲ’ ಎಂದರು.</p>.<p>ಸುರಕ್ಷಾ ಸಂಕುಲ ಸಂಘಟನೆಯ ಪ್ರಮುಖರಾದ ಪುನೀತ್ ಅತ್ತಾವರ, ಹಿಂದೂ ಮಹಿಳಾ ಸುರಕ್ಷಾ ಸಮಿತಿಯ ಪ್ರಮುಖರಾದ ಸುಕನ್ಯಾ ರಾವ್, ಶ್ವೇತಾ ಆದ್ಯಪಾಡಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಮತಾಂತರ, ‘ಲವ್ ಜಿಹಾದ್’, ಭಯೋತ್ಪಾದನೆ, ಡ್ರಗ್ಸ್ ಹಾವಳಿ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇದನ್ನು ಖಂಡಿಸಿ ತಾಲ್ಲೂಕು ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲು ಪೊಲೀಸ್ ಇಲಾಖೆಯ ಅನುಮತಿ ಕೋರಿದ್ದೆವು. ಅನುಮತಿ ನಿರಾಕರಿಸುವ ಮೂಲಕ ಪ್ರತಿಭಟಿಸುವ ಹಕ್ಕಿಗೆ ನಗರ ಪೊಲೀಸ್ ಕಮಿಷನರ್ ಚ್ಯುತಿ ತಂದಿದ್ದಾರೆ’ ಎಂದು ಹಿಂದೂ ಮಹಿಳಾ ಸುರಕ್ಷಾ ಸಮಿತಿ ಆಕ್ರೋಶ ವ್ಯಕ್ತಪಡಿಸಿತು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಸಮಿತಿಯ ವಕೀಲ ಹರೀಶ್ ಕುಮಾರ್, ‘ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲು ಅನುಮತಿ ಕೋರಿ ಪೊಲೀಸ್ ಇಲಾಖೆಗೆ ಶುಕ್ರವಾರವೇ ಅರ್ಜಿ ಸಲ್ಲಿಸಿದ್ದೆವು. ಆದರೆ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ‘ನಾನು ಅನುಮತಿ ಕೊಡುವುದಿಲ್ಲ. ನಿಮಗೆ ತೋಚಿದ್ದನ್ನು ನೀವು ಮಾಡಿ’ ಎಂದು ಖಡಾಖಂಡಿತವಾಗಿ ಹೇಳಿದರು. ನಮ್ಮ ಮಾತನ್ನು ಆಲಿಸುವ ಸೌಜನ್ಯವನ್ನೂ ತೋರಲಿಲ್ಲ. ಈ ನಡೆಯನ್ನು ಬಲವಾಗಿ ಖಂಡಿಸುತ್ತೇವೆ’ ಎಂದರು. </p>.<p>‘‘ಲವ್ಜಿಹಾದ್’ ಹೆಸರಿನಲ್ಲಿ ನೀವು ನಿರ್ದಿಷ್ಟ ಸಮುದಾಯವನ್ನು ಗುರಿಯನ್ನಾಗಿಸಿ ಪ್ರತಿಭಟನೆ ನಡೆಸುತ್ತೀರಿ‘ ಎಂದು ಕಮಿಷನರ್ ಹೇಳಿದರು. ನಮ್ಮ ಪ್ರತಿಭಟನೆ ಯಾವ ಸಮುದಾಯದ ವಿರುದ್ಧವೂ ಅಲ್ಲ. ಹಿಂದು ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ’ ಎಂದು ಸ್ಪಷ್ಟಪಡಿಸಿದರು.</p>.<p>ಸಮಿತಿಯ ಶ್ರೀಲಕ್ಷ್ಮೀ ಮಠದಮೂಲೆ, ‘ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ‘ಲವ್ ಜಿಹಾದ್’ ಪ್ರಕರಣಗಳು ಮರುಕಳಿಸುತ್ತಿವೆ. ಇದನ್ನು ಪ್ರತಿಭಟಿಸುವದರ ಜೊತೆ ಜನಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ಇದಕ್ಕೆ ಪೊಲೀಸರು ಏಕೆ ಅವಕಾಶ ನೀಡಲಿಲ್ಲ ಎಂದು ಗೊತ್ತಿಲ್ಲ. ಮಹಿಳೆಯರ ಧ್ವನಿಯನ್ನು ಪೊಲೀಸ್ ಇಲಾಖೆ ಹತ್ತಿಕ್ಕುತ್ತಿದೆ’ ಎಂದರು.</p>.<p>ಸಮಿತಿಯ ರೂಪಾ ಡಿ.ಬಂಗೇರ, ‘ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ‘ಲವ್ ಜಿಹಾದ್’, ಮತಾಂತರ ನಡೆಯುತ್ತಿಲ್ಲ ಎನ್ನುವ ಪೊಲೀಸರು ನಾಳೆ ಭಯೋತ್ಪಾದನೆಯೂ ನಡೆಯುತ್ತಿಲ್ಲ ಎನ್ನಬಹುದು. ಪ್ರತಿಭಟಿಸುವ ಸಂವಿಧಾನ ಬದ್ಧ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಕಾಣದ ಕೈಗಳ ಒತ್ತಡಕ್ಕೆ ಸಿಲುಕಿ ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದು ಸರಿಯಲ್ಲ’ ಎಂದರು.</p>.<p>ಸುರಕ್ಷಾ ಸಂಕುಲ ಸಂಘಟನೆಯ ಪ್ರಮುಖರಾದ ಪುನೀತ್ ಅತ್ತಾವರ, ಹಿಂದೂ ಮಹಿಳಾ ಸುರಕ್ಷಾ ಸಮಿತಿಯ ಪ್ರಮುಖರಾದ ಸುಕನ್ಯಾ ರಾವ್, ಶ್ವೇತಾ ಆದ್ಯಪಾಡಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>