<p><strong>ಮೂಡುಬಿದಿರೆ</strong>: ಪರಿಸರದಲ್ಲಿ ಸೋಮವಾರವೂ ಭಾತಿ ಗಾಳಿ ಮಳೆ ಆಗಿದ್ದು, ಹಲವು ಮನೆಗಳ ಮೇಲೆ ಮರಗಳು ಉರುಳಿವೆ.</p>.<p>ಸುಮಾರು 20 ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೂಡುಬಿದಿರೆ ಪಟ್ಟಣ ಸೇರಿದಂತೆ ಕೆಲವು ಗ್ರಾಮಗಳಿಗೆ ರಾತ್ರಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿತ್ತು.</p>.<p>ಅಲಂಗಾರು, ಚಂದ್ರಾಪುರ, ಪಳಕಳ, ಆಶ್ರಯ ಕಾಲೊನಿ ಪರಿಸರದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿವೆ. 10ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಅಲಂಗಾರ್ ಚರ್ಚ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು ಕಾರಿಗೆ ಹಾನಿಯಾಗಿದೆ. ಕಾರು ಚಾಲಕ ವಿಶುಕುಮಾರ್ ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ.</p>.<p>ಚಂದ್ರಾಪುರದಲ್ಲಿ ನಾರಾಯಣ, ಶಾಂತಿ ರಾಡ್ರಿಗಸ್, ಸರಸ್ವತಿ ಶೆಟ್ಟಿಗಾರ್, ಜೂಲಿಯಾನ ಡಿಸೋಜ, ಆಶ್ರಯ ಕಾಲೊನಿಯಲ್ಲಿ ಸತೀಶ್ ಸಾಲ್ಯಾನ್ ಅವರ ಮನೆಗೆ ಭಾಗಶಃ ಹಾನಿಯಾಗಿದೆ. ಪಡುಕೊಣಾಜೆಯಲ್ಲಿ ಮರ ಬಿದ್ದು ಬ್ಯಾಂಕ್ಗೆ ಹಾನಿಯಾಗಿದೆ.</p>.<p>ಅಲಂಗಾರ್ ರಿಕ್ಷಾ ಜಂಕ್ಷನ್ನಲ್ಲಿ ದೊಡ್ಡ ಮರ ಉರುಳಿದೆ. ಅಲ್ಲಿ ಆ ಸಂದರ್ಭ ಯಾವುದೇ ವಾಹನಗಳಿರಲಿಲ್ಲ.</p>.<p>ಪಡುಕೊಣಾಜೆ ವ್ಯಾಪ್ತಿಯಲ್ಲಿ ರಬ್ಬರ್ ಪ್ಲಾಂಟೇಶನ್ನಲ್ಲಿ ಹಲವು ಮರಗಳು ಉರುಳಿ ಬಿದ್ದಿವೆ. ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ವಾರ್ಡ್ ಸದಸ್ಯ ಪಿ.ಕೆ.ಥಾಮಸ್, ಕಂದಾಯ, ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ಪರಿಸರದಲ್ಲಿ ಸೋಮವಾರವೂ ಭಾತಿ ಗಾಳಿ ಮಳೆ ಆಗಿದ್ದು, ಹಲವು ಮನೆಗಳ ಮೇಲೆ ಮರಗಳು ಉರುಳಿವೆ.</p>.<p>ಸುಮಾರು 20 ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೂಡುಬಿದಿರೆ ಪಟ್ಟಣ ಸೇರಿದಂತೆ ಕೆಲವು ಗ್ರಾಮಗಳಿಗೆ ರಾತ್ರಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿತ್ತು.</p>.<p>ಅಲಂಗಾರು, ಚಂದ್ರಾಪುರ, ಪಳಕಳ, ಆಶ್ರಯ ಕಾಲೊನಿ ಪರಿಸರದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿವೆ. 10ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಅಲಂಗಾರ್ ಚರ್ಚ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು ಕಾರಿಗೆ ಹಾನಿಯಾಗಿದೆ. ಕಾರು ಚಾಲಕ ವಿಶುಕುಮಾರ್ ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ.</p>.<p>ಚಂದ್ರಾಪುರದಲ್ಲಿ ನಾರಾಯಣ, ಶಾಂತಿ ರಾಡ್ರಿಗಸ್, ಸರಸ್ವತಿ ಶೆಟ್ಟಿಗಾರ್, ಜೂಲಿಯಾನ ಡಿಸೋಜ, ಆಶ್ರಯ ಕಾಲೊನಿಯಲ್ಲಿ ಸತೀಶ್ ಸಾಲ್ಯಾನ್ ಅವರ ಮನೆಗೆ ಭಾಗಶಃ ಹಾನಿಯಾಗಿದೆ. ಪಡುಕೊಣಾಜೆಯಲ್ಲಿ ಮರ ಬಿದ್ದು ಬ್ಯಾಂಕ್ಗೆ ಹಾನಿಯಾಗಿದೆ.</p>.<p>ಅಲಂಗಾರ್ ರಿಕ್ಷಾ ಜಂಕ್ಷನ್ನಲ್ಲಿ ದೊಡ್ಡ ಮರ ಉರುಳಿದೆ. ಅಲ್ಲಿ ಆ ಸಂದರ್ಭ ಯಾವುದೇ ವಾಹನಗಳಿರಲಿಲ್ಲ.</p>.<p>ಪಡುಕೊಣಾಜೆ ವ್ಯಾಪ್ತಿಯಲ್ಲಿ ರಬ್ಬರ್ ಪ್ಲಾಂಟೇಶನ್ನಲ್ಲಿ ಹಲವು ಮರಗಳು ಉರುಳಿ ಬಿದ್ದಿವೆ. ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ವಾರ್ಡ್ ಸದಸ್ಯ ಪಿ.ಕೆ.ಥಾಮಸ್, ಕಂದಾಯ, ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>