<p><strong>ಮೂಲ್ಕಿ</strong>: ತಾಲ್ಲೂಕು ವ್ಯಾಪ್ತಿಯ ಕಿನ್ನಿಗೋಳಿ, ಪಡುಪಣಂಬೂರು, ಹಳೆಯಂಗಡಿಯಲ್ಲಿ ಭಾರಿ ಮಳೆ ಆಗಿದೆ. ಮೂಲ್ಕಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆ.ಎಸ್.ರಾವ್ ನಗರದ ಲಿಂಗಪ್ಪಯ್ಯಕಾಡು ವಿಜಯಪುರ ಕಾಲೊನಿಯ ಕಾಶಿಂಬಿಬಂದಗಿ ಸಾಬ್ ಎಂಬುವರ ಮನೆ ಕುಸಿದಿದೆ. ಮನೆಯಲ್ಲಿದ್ದ ಆರು ಮಂದಿಯನ್ನು ಸ್ಥಳಾಂತರಿಸಲಾಗಿದೆ.</p>.<p>ಮೂಲ್ಕಿ ಉಪ ತಹಶೀಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಕಿನ್ನಿಗೋಳಿ ಬಳಿಯ ಸಂಕಲಕರಿಯದಲ್ಲಿ ಏಳಿಂಜೆಯ ಶಾಂಭವಿ ನದಿ ಉಕ್ಕಿ ಹರಿದಿದ್ದು, ಸಂಕಲಕರಿಯ ಉಗ್ಗೆದಬೆಟ್ಟು ಸಂಪರ್ಕ ಹಾಗೂ ಪಟ್ಟೆ-ಏಳಿಂಜೆ ಸಂಪರ್ಕ ಕಡಿತಗೊಂಡಿದೆ. ಕೃಷಿ ಕೆಲಸಕ್ಕೆ ಬಂದಿದ್ದ ಶಿವಮೊಗ್ಗ ಮೂಲದ ಟ್ರಾಕ್ಟರ್ ಮಾಲೀಕ ಮಾಲತೇಶ್ ಅವರ ಕೊಠಡಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ದವಸ–ಧಾನ್ಯ, ಬಟ್ಟೆ ನೀರು ಪಾಲಾಗಿದೆ. ಪಟ್ಟೆ ಕ್ರಾಸ್ನಲ್ಲಿ ಕೋಳಿ ಅಂಗಡಿ ಮುಳುಗಡೆಯಾಗಿ ಕೋಳಿಗಳು ಸತ್ತು ನೀರಿನಲ್ಲಿ ತೇಲುತ್ತಿದ್ದವು.</p>.<p>ಮುಂಡ್ಕೂರು ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್ ಶೆಟ್ಟಿ, ಸುರೇಶ್ ಶೆಟ್ಟಿ, ಭಾಸ್ಕರ ಶೆಟ್ಟಿ ಅವರ ಮನೆ, ಹಟ್ಟಿ ಮುಳುಗಡೆಯಾಗಿದೆ. ಅವರು ಸಂಗ್ರಹಿಸಿದ್ದ ತೆಂಗಿನಕಾಯಿ, ಗೊಬ್ಬರದ ಚೀಲಗಳು ನೀರು ಪಾಲಾಗಿವೆ. ಮುಂಡ್ಕೂರು ದೊಡ್ಡಮನೆಯ ಕಲ್ಲಾಡಿ ನಾಗಬನವೂ ಮುಳಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ</strong>: ತಾಲ್ಲೂಕು ವ್ಯಾಪ್ತಿಯ ಕಿನ್ನಿಗೋಳಿ, ಪಡುಪಣಂಬೂರು, ಹಳೆಯಂಗಡಿಯಲ್ಲಿ ಭಾರಿ ಮಳೆ ಆಗಿದೆ. ಮೂಲ್ಕಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆ.ಎಸ್.ರಾವ್ ನಗರದ ಲಿಂಗಪ್ಪಯ್ಯಕಾಡು ವಿಜಯಪುರ ಕಾಲೊನಿಯ ಕಾಶಿಂಬಿಬಂದಗಿ ಸಾಬ್ ಎಂಬುವರ ಮನೆ ಕುಸಿದಿದೆ. ಮನೆಯಲ್ಲಿದ್ದ ಆರು ಮಂದಿಯನ್ನು ಸ್ಥಳಾಂತರಿಸಲಾಗಿದೆ.</p>.<p>ಮೂಲ್ಕಿ ಉಪ ತಹಶೀಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಕಿನ್ನಿಗೋಳಿ ಬಳಿಯ ಸಂಕಲಕರಿಯದಲ್ಲಿ ಏಳಿಂಜೆಯ ಶಾಂಭವಿ ನದಿ ಉಕ್ಕಿ ಹರಿದಿದ್ದು, ಸಂಕಲಕರಿಯ ಉಗ್ಗೆದಬೆಟ್ಟು ಸಂಪರ್ಕ ಹಾಗೂ ಪಟ್ಟೆ-ಏಳಿಂಜೆ ಸಂಪರ್ಕ ಕಡಿತಗೊಂಡಿದೆ. ಕೃಷಿ ಕೆಲಸಕ್ಕೆ ಬಂದಿದ್ದ ಶಿವಮೊಗ್ಗ ಮೂಲದ ಟ್ರಾಕ್ಟರ್ ಮಾಲೀಕ ಮಾಲತೇಶ್ ಅವರ ಕೊಠಡಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ದವಸ–ಧಾನ್ಯ, ಬಟ್ಟೆ ನೀರು ಪಾಲಾಗಿದೆ. ಪಟ್ಟೆ ಕ್ರಾಸ್ನಲ್ಲಿ ಕೋಳಿ ಅಂಗಡಿ ಮುಳುಗಡೆಯಾಗಿ ಕೋಳಿಗಳು ಸತ್ತು ನೀರಿನಲ್ಲಿ ತೇಲುತ್ತಿದ್ದವು.</p>.<p>ಮುಂಡ್ಕೂರು ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್ ಶೆಟ್ಟಿ, ಸುರೇಶ್ ಶೆಟ್ಟಿ, ಭಾಸ್ಕರ ಶೆಟ್ಟಿ ಅವರ ಮನೆ, ಹಟ್ಟಿ ಮುಳುಗಡೆಯಾಗಿದೆ. ಅವರು ಸಂಗ್ರಹಿಸಿದ್ದ ತೆಂಗಿನಕಾಯಿ, ಗೊಬ್ಬರದ ಚೀಲಗಳು ನೀರು ಪಾಲಾಗಿವೆ. ಮುಂಡ್ಕೂರು ದೊಡ್ಡಮನೆಯ ಕಲ್ಲಾಡಿ ನಾಗಬನವೂ ಮುಳಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>