<p><strong>ಬೆಳಗಾವಿ/ಹೊಸಪೇಟೆ(ವಿಜಯನಗರ): ರಾಜ್ಯದ ಬಹುತೇಕ ಕಡೆ ಶುಕ್ರವಾರ ಮಳೆ ಸುರಿಯಿತು. ಬೆಳಗಾವಿಯ ಖಡೇಬಜಾರ್ ಮಾರುಕಟ್ಟೆಗೆ ಹೊಂದಿಕೊಂಡ ತೆಂಗಿನಕೇರಿ ಗಲ್ಲಿಯಲ್ಲಿ ನೆಲ ಮಾಳಿಗೆ ಮಳಿಗೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ನಾಲ್ಕು ಅಂಗಡಿಗಳ ವ್ಯಾಪಾರಸ್ಥರು ಪರದಾಡುವಂತಾಯಿತು.</strong></p>.<p>ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಕೃಷ್ಣಾ ನದಿಗೆ 2.16 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದ 6 ಗೇಟ್ಗಳ ಮೂಲಕ 40 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ರಾಧಾನಗರಿ ಜಲಾಶಯದಿಂದ 10 ಸಾವಿರ ಕ್ಯುಸೆಕ್, ವಾರಣಾ ಜಲಾಶಯದಿಂದ 16 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.</p>.<p>ಘಟಪ್ರಭಾ ನದಿಯಲ್ಲೂ ನೀರಿನ ಪ್ರಮಾಣ ಏರಿದ್ದು ಮೂಡಲಗಿ ತಾಲ್ಲೂಕಿನ ಮಸಗುಪ್ಪಿಯ ಮಹಾಲಕ್ಷ್ಮಿ ದೇವಸ್ಥಾನವು ಶುಕ್ರವಾರ ಜಲಾವೃತಗೊಂಡಿದೆ. ಇದೇ ಗ್ರಾಮದ ಎಸ್ಸಿ ಕಾಲೊನಿಯಲ್ಲಿ ನದಿ ನೀರು ನುಗ್ಗಿದ್ದು, ಅಲ್ಲಿನ ನಿವಾಸಿಗಳಿಗೆ ಸರ್ಕಾರಿ ಪ್ರೌಢಶಾಲೆಯ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಸುಣಧೋಳಿ ಮಠದಲ್ಲಿ ಸಹ ನದಿಯ ನೀರು ಹೊಕ್ಕಿದ್ದು, ಜಲಾವೃತವಾಗಿದೆ. ಮಠಾಧೀಶರು ಮಠದ ಎತ್ತರ ಸ್ಥಳದಲ್ಲಿರುವ ಕೊಠಡಿಯಲ್ಲಿ ಆಶ್ರಯ ಪಡೆದಿದ್ದಾರೆ.</p>.<p> ನ,ಜಾನುವಾರು ಸ್ಥಳಾಂತರ(ಬಾಗಲಕೋಟೆ ವರದಿ): ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮುತ್ತೂರು ಗ್ರಾಮ ಮತ್ತು ಮುಧೋಳ ತಾಲ್ಲೂಕಿನ ಮಿರ್ಜಿ ಗ್ರಾಮ ನಡುಗಡ್ಡೆಯಾಗಿವೆ. ಮುತ್ತೂರು ಗ್ರಾಮದ 17 ಕುಟುಂಬಗಳ 108 ಜನರು ಮತ್ತು 86 ಜಾನುವಾರುಗಳನ್ನು ಹಾಗೂ ಮಿರ್ಜಿ ಗ್ರಾಮದ 8 ಕುಟುಂಬಗಳ 32 ಜನರು ಮತ್ತು 8 ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಿರ್ಜಿಯಲ್ಲಿನ ಕಾಳಜಿ ಕೇಂದ್ರದಲ್ಲಿ 32 ಗ್ರಾಮಸ್ಥರು ಉಳಿದಿದ್ದರೆ, ಮುತ್ತೂರು ಕೇಂದ್ರದಲ್ಲಿ ಯಾರೂ ಉಳಿದುಕೊಂಡಿಲ್ಲ.</p>.<p>ಬಹುತೇಕ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದಿಂದ 1.07 ಲಕ್ಷ ಕ್ಯುಸೆಕ್ ನೀರನ್ನು 30 ಕ್ರಸ್ಟ್ಗೇಟ್ಗಳ ಮೂಲಕ ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಹಂಪಿಯಲ್ಲಿ ಪುರಂದರ ಮಂಟಪ ಪೂರ್ಣ ಮುಳುಗಿದ್ದು, ಧ್ವಜ ಮಾತ್ರ ಕಾಣಿಸುತ್ತಿದೆ. ಹಂಪಿ ವಿರೂಪಾಕ್ಷ ದೇವಸ್ಥಾನದ ಬಳಿ ಸ್ನಾನಘಟ್ಟವೂ ಸಂಪೂರ್ಣ ಮುಳುಗಿದೆ. ಚಕ್ರತೀರ್ಥ ಸಮೀಪದ ಕೋದಂಡರಾಮ, ಯಂತ್ರೋದ್ಧಾರಕ ಆಂಜನೇಯ ದೇವಸ್ಥಾನಕ್ಕೆ ಹೋಗುವ ಕಾಲುದಾರಿ ನೀರಲ್ಲಿ ಮುಳುಗಿದ್ದು, ಬದಲಿ ದಾರಿಯಲ್ಲಿ ಭಕ್ತರು ತೆರಳುತ್ತಿದ್ದಾರೆ.</p>.<p>ಪ್ರವಾಹದಲ್ಲಿ ಚಾಲನೆ: ಜೀಪ್ ವಶ</p>.<p>ಕಳಸ (ಚಿಕ್ಕಮಗಳೂರು): ಧಾರಾಕಾರ ಮಳೆಯಿಂದ ಕಳಸ– ಹೊರನಾಡು ರಸ್ತೆಯ ಹೆಬ್ಬೊಳೆ ಸೇತುವೆ ಮೇಲೆ ಭದ್ರಾ ನದಿ ನೀರು ಉಕ್ಕಿ ಹರಿಯುತ್ತಿದ್ದಾಗ, ಅಪಾಯ ಲೆಕ್ಕಿಸದೆ ಸೇತುವೆ ಮೇಲೆ ಜೀಪ್ ಚಲಾಯಿಸಿದ ಚಾಲಕ ಪವನ್ ಕುಮಾರ್ ವಿರುದ್ಧ ಕಳಸ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೀಪ್ ವಶಪಡಿಸಿಕೊಳ್ಳಲಾಗಿದೆ.</p>.<p> ಮುಳುಗಿದ ಸೇತುವೆ (ಕಲಬುರಗಿ ವರದಿ): ನಾರಾಯಣಪುರದ ಬಸವಸಾಗರ ಜಲಾಶಯದಿಂದ 3 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸುತ್ತಿರುವುದರಿಂದ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಯಾದಗಿರಿ ಜಿಲ್ಲೆಯ ಶಹಾಪುರದಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.</p>.<p>ಮುಂಜಾಗೃತಾ ಕ್ರಮವಾಗಿ ಗುರುವಾರ ರಾತ್ರಿಯಿಂದಲೇ ಪೊಲೀಸರು ಸೇತುವೆ ಮೇಲೆ ವಾಹನಗಳ ಸಂಚಾರ ನಿರ್ಬಂಧಿಸಿದ್ದರು. ಶುಕ್ರವಾರ ಮಧ್ಯಾಹ್ನದಿಂದಲೇ ನೀರು ಸೇತುವೆಯನ್ನು ಆವರಿಸಿಕೊಂಡಿತು. </p>.<p>ಶಹಾಪುರ ತಾಲ್ಲೂಕಿನ ಕೊಳ್ಳುರು (ಎಂ) ಗ್ರಾಮದಿಂದ ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಮಧ್ಯದ ಸಂಪರ್ಕ ಕಡಿತವಾಗಿದೆ.</p>.<p>‘ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ’ ಎಂದು ಶಹಾಪುರ ತಹಶೀಲ್ದಾರ್ ಉಮಾಕಾಂತ ಹಳ್ಳೆ ಮಾಹಿತಿ ನೀಡಿದ್ದಾರೆ.</p>.<p>ಸೇತುವೆಯ ಅರ್ಧ ಕಿ.ಮೀ ದೂರದಿಂದಲೇ ಸಾರ್ವಜನಿಕರ ಓಡಾಟ ನಿರ್ಬಂಧಿಸಲಾಗಿದ್ದು, ಹತ್ತಿಗೂಡುರು ಬಳಿ ಸೇತುವೆ ಸಂಚಾರ ಬಂದ್ ಆಗಿರುವ ಬಗ್ಗೆ ಬ್ಯಾರಿಕೇಡ್ ಅಳವಡಿಸಲಾಗಿದೆ.</p>.<p>ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. 5 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬಂದಿದರೆ ಮತ್ತಷ್ಟು ಜಮೀನುಗಳಿಗೆ ನೀರು ನುಗ್ಗಲಿದೆ.</p>.<p>ಸೇತುವೆ ಮುಳುಗಡೆಯಿಂದಾಗಿ ದೇವದುರ್ಗದ ಮೂಲಕ ಶಹಾಪುರ, ಕಲಬುರಗಿ ಮತ್ತು ಬೀದರ್ ಕಡೆಗೆ ತೆರಳುವ ವಾಹನಗಳು ತಿಂಥಣಿ ಬ್ರಿಜ್ ಮಾರ್ಗವಾಗಿ ಸಂಚರಿಸುತ್ತಿವೆ. ಲಿಂಗಸುಗೂರು ತಾಲ್ಲೂಕಿನಲ್ಲಿ ನಾಲ್ಕು ದಿನಗಳಿಂದ ಮೂರು ಗ್ರಾಮಗಳು ಜಲಾವೃತಗೊಂಡಿವೆ. ನದಿ ತಟದ ಹೊಲಗಳಿಗೆ ನೀರು ನುಗ್ಗಿದೆ.</p>.<p>ತುಂಗಭದ್ರಾ ಜಲಾಶಯದಿಂದ ಸುಮಾರು 90 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗಿದ್ದು, ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರವಾಹ ಭೀತಿ ಇರುವ 11 ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.</p>.<p>ಮೈಸೂರು ಭಾಗದಲ್ಲಿ ರಸ್ತೆ ಕೊಚ್ಚಿಹೋಗುವ ಭೀತಿ<br><br>ಮೈಸೂರು: ಮೈಸೂರು ಭಾಗದ ಮೈಸೂರು, ಕೊಡಗು, ಹಾಸನ ಮತ್ತು ಚಾಮರಾಜನಗರದಲ್ಲಿ ಮಳೆ–ನೆರೆ ಹಾವಳಿ ಮುಂದುವರಿದಿದೆ.</p>.<p>ಹಾಸನ ಜಿಲ್ಲೆಯ ಸಕಲೇಶಪುರದ ಆಜಾದ್ ನಗರ ಜಲಾವೃತವಾಗಿದ್ದು, ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಜನಾಪುರ– ವನಗೂರು ರಾಜ್ಯ ಹೆದ್ದಾರಿ 107ರಲ್ಲಿ ಭೂಕುಸಿತವಾಗಿದ್ದು, ಕೆಲವು ಅಡಿ ಕುಸಿದರೆ, ರಸ್ತೆಯೇ ಕೊಚ್ಚಿ ಹೋಗಲಿದ್ದು, ಸಕಲೇಶಪುರ–ಹೆತ್ತೂರು ನಡುವಿನ ಸಂಪರ್ಕ ಕಡಿತವಾಗಲಿದೆ.</p>.<p>ಬೇಲೂರು ತಾಲ್ಲೂಕಿನ ಬಿರಡಹಳ್ಳಿಯಲ್ಲಿ ಸೇತುವೆ, ಸಕಲೇಶಪುರ ತಾಲ್ಲೂಕಿನ ಮುಗಲಿ, ಹೆಬ್ಬನಹಳ್ಳಿ ಸೇತುವೆ ಮುಳುಗಡೆಯಾಗಿವೆ. ಹೊಳೆಮಲ್ಲೇಶ್ವರ ದೇವಸ್ಥಾನದ ಗರ್ಭಗುಡಿಗೆ, ಹೊಳೆನರಸೀಪುರದ ಅಗ್ನಿಶಾಮಕ ಠಾಣೆ ಹಾಗೂ ಖಾಸಗಿ ಶಾಲೆಗೆ ನೀರು ನುಗ್ಗಿದೆ. ಚನ್ನರಾಯಪಟ್ಟಣ–ಹೊಳೆನರಸೀಪುರ ರಸ್ತೆ ಜಲಾವೃತವಾಗಿದೆ.</p>.<p>ಗುರುವಾರ ರಾತ್ರಿ ಹೇಮಾವತಿ ಜಲಾಯಶದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡಲಾಗಿತ್ತು. ಆಲೂರು ತಾಲ್ಲೂಕಿನ ವಾಟೆಹೊಳೆ ಜಲಾಶಯ ಭರ್ತಿಯಾಗಿದ್ದು, 6 ಸಾವಿರ ಕ್ಯೂಸೆಕ್ ನೀರನ್ನು ಯಗಚಿ ನದಿಗೆ ಬಿಡಲಾಗುತ್ತಿದೆ. ಗೊರೂರು ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ಗೂ ಅಧಿಕ ನೀರನ್ನು ನದಿಗೆ ಹರಿಸುತ್ತಿದ್ದು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ನದಿಗಳೆಲ್ಲವೂ ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಭಾಗಮಂಡಲದ ತ್ರಿವೇಣ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 27ರಂದು ರಜೆ ಘೋಷಿಸಿದೆ. ಹಲವು ಗ್ರಾಮಗಳು ಕಗ್ಗತ್ತಲಲ್ಲಿ ಮುಳುಗಿವೆ. ಸೋಮವಾರಪೇಟೆ ಪಟ್ಟಣದಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಶಾಂತಳ್ಳಿ ಸಮೀಪ ಜೇಡಿಗುಂಡಿ ಬಳಿಯಲ್ಲಿ ಗುರುವಾರ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿದಿದ್ದ ಜಾಗದಲ್ಲೇ ಶುಕ್ರವಾರವೂ ಕೆಸರುಮಿಶ್ರಿತ ಮಣ್ಣು ಜಾರುತ್ತಲೇ ಇದ್ದು, ಶಾಂತಳ್ಳಿ –ಸುಬ್ರಹ್ಮಣ್ಯ ರಸ್ತೆ ಬಂದ್ ಆಗಿದೆ.</p>.<p>ಕೇರಳ– ಕುಟ್ಟ –ಶ್ರೀಮಂಗಲ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಶ್ರೀಮಂಗಲದ ಸಮೀಪ ಖಾಸಗಿ ಬಸ್ ಮಣ್ಣಿನಲ್ಲಿ ಸಿಲುಕಿದ್ದು, ಸಂಚಾರ ಸ್ಥಗಿತಗೊಂಡಿದೆ. ಮಡಿಕೇರಿ– ಮೈಸೂರು ರಸ್ತೆಯಲ್ಲಿ ಸಿಂಕೋನಾ ಸಮೀಪ ಮರವೊಂದು ಉರುಳಿ ತಾಸುಗಟ್ಟಲೆ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಕಿ.ಮೀಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಮರ ಬಿದ್ದು ಹಾನಿಯಾಗಿದೆ. ಹಾರಂಗಿ ಜಲಾಶಯದಿಂದ 20 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.</p>.<p>ಕಬಿನಿ ಹಾಗೂ ಕಾವೇರಿ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನು ನದಿಗಳಿಗೆ ಹರಿಸುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹಳೆ ಹಂಪಾಪುರ ಗ್ರಾಮದ ನೂರಾರು ಎಕರೆ ಕೃಷಿಭೂಮಿ ಜಲಾವೃತಗೊಂಡಿದೆ.</p>.<p>ಮೈಸೂರಿನ ತಲಕಾಡಿನಲ್ಲಿ ಪ್ರವಾಹ ತುರ್ತುಸ್ಥಿತಿ ಎದುರಿಸಲು ಮಾಲಂಗಿ ಗ್ರಾಮದ ಸರ್ಕಾರಿ ಶಾಲೆಯ ಎರಡು ಕೊಠಡಿಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ನಿಸರ್ಗಧಾಮಕ್ಕೆ ಹಾಗೂ ಮಂಡ್ಯ ಜಿಲ್ಲೆಯ ಮುತ್ತತ್ತಿಗೆ ಪ್ರವೇಶ ನಿಷೇಧಿಸಲಾಗಿದೆ.</p>.<p><strong>ಧಾರಾಕಾರ ಮಳೆ</strong>: ಕಗ್ಗತ್ತಲಲ್ಲಿ ಮಲೆನಾಡು ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಹಲವೆಡೆ ವಿದ್ಯುತ್ ಕಂಬ ಮತ್ತು ಮರಗಳು ಉರುಳಿ ಬಿದ್ದಿವೆ. ಮಲೆನಾಡಿನ ಗ್ರಾಮೀಣ ಭಾಗ ಕಗ್ಗತ್ತಲಲ್ಲಿ ಮುಳುಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಜತೆಗೆ ವೇಗವಾಗಿ ಗಾಳಿಯೂ ಬೀಸುತ್ತಿದ್ದು, ಇದುವರೆಗೆ 2,443 ವಿದ್ಯುತ್ ಕಂಬಗಳು ಉರಳಿವೆ ಎಂದು ಮೆಸ್ಕಾಂ ಅಧಿಕಾರಿಗಳು ಅಂದಾಜಿಸಿದ್ದಾರೆ. ಮಳೆ ನಡುವೆಯೂ ದುರಸ್ತಿ ಕಾರ್ಯವನ್ನು ಸಿಬ್ಬಂದಿ ಮುಂದುವರಿಸಿದ್ದಾರೆ. ಆದರೂ, ಬಾಳೆಹೊನ್ನೂರು, ಜಯಪುರ, ಕಳಸ, ಕೊಟ್ಟಿಗೆಹಾರ, ಮಾಗುಂಡಿ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಸುತ್ತಮುತ್ತಲ ಹಳ್ಳಿಗಳಲ್ಲಿ 10 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲವಾಗಿದೆ. ಸಮೀಪದ ಪಟ್ಟಣಗಳಿಗೆ ತೆರಳಿ ಮೊಬೈಲ್ ಫೋನ್ ಚಾರ್ಜ್ ಮಾಡಿಕೊಳ್ಳುತ್ತಿದ್ದೇವೆ ಎಂದು ಅಲ್ಲಿಯ ಕೆಲವರು ಹೇಳಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಬ್ಬಾಳೆ ಸೇತುವೆಯ ಮೇಲೆ ನೀರು ಹರಿಯುತ್ತಿದ್ದು, ಕಳಸ–ಹೊರನಾಡು ಸಂಪರ್ಕ ಕಡಿತವಾಗಿದೆ. ಕಳಸ- ಕಾರ್ಕಳ ರಾಜ್ಯ ಹೆದ್ದಾರಿಯ ಕುದುರೆಮುಖ ಬಳಿ ಭೂಕುಸಿತದಿಂದ ರಸ್ತೆಗೆ ಹಾನಿ ಆಗಿದೆ. ಹಳೆಯ ಸೇತುವೆ ಪಕ್ಕದಲ್ಲೇ ಕುಸಿತ ಉಂಟಾಗಿದ್ದು, ದುರಸ್ತಿಯಾಗದಿದ್ದರೆ ಕಳಸ–ಕಾರ್ಕಳ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ಕಡೂರು ತಾಲ್ಲೂಕಿನ ಐತಿಹಾಸಿಕ ಮಧಗದ ಕೆರೆ ಮತ್ತು ತರೀಕೆರೆಯ ದೊಡ್ಡ ಕೆರೆಗಳು ಭರ್ತಿಯಾಗಿ ಕೊಡಿಯಲ್ಲಿ ನೀರು ಹರಿಯುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಆಲ್ದೂರು ಸಮೀಪದ ಬನ್ನೂರು ಗ್ರಾಮದ ಬಳಿ ಚಿಕ್ಕಮಗಳೂರು– ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಕಾರಿನಲ್ಲಿ ಪಯಣಿಸುತ್ತಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕರಾವಳಿಯಲ್ಲೂ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಇಡೀದಿನ ಆಗಾಗ ಧಾರಾಕಾರ ಮಳೆ ಸುರಿಯಿತು. ಮಳೆಯ ಜೊತೆ ಗಾಳಿ ಅಬ್ಬರ ಜೋರಾಗಿದ್ದರಿಂದ ವಿವಿಧೆಡೆ ಹಾನಿ ಸಂಭವಿಸಿದೆ. ಬಜಪೆ ಸಮೀಪದ ಪದ್ರೆಂಗಿಯಲ್ಲಿ ರತ್ನಾಕರ್ ಎಂಬುವರ ಮನೆಯ ಮೇಲೆ ಮರ ಮುರಿದು ಬಿದ್ದು, ಕೋಣೆಯಲ್ಲಿ ಮಲಗಿದ್ದ ಆಯುಷ್ (6) ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ರತ್ನಾಕರ್ ಅವರ ಸಹೋದರ ಮತ್ತು ಅವರ ಪತ್ನಿಗೂ ಗಾಯಗಳಾಗಿವೆ. ಉಡುಪಿ ಜಿಲ್ಲೆಯ ಕೆಲವೆಡೆ ಭಾರಿ ಗಾಳಿ ಸಹಿತ ಮಳೆಯಾಗಿದ್ದು, ಹಲವು ಮರಗಳು ನೆಲಕ್ಕುರುಳಿವೆ. ಉಡುಪಿ ಶ್ರೀಕೃಷ್ಣ ಮಠದ ಬೃಂದಾವನ ಹಂಚು ಹಾಗೂ ಹತ್ತಿರದ ಹೊಟೇಲ್ನ ತಗಡಿನ ಚಾವಣಿ ಹಾರಿ ಹೋಗಿದೆ. </p>.<div><blockquote>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ತುಂಗಭದ್ರಾಕ್ಕೆ ಬಾಗಿನ ಅರ್ಪಿಸುವರು. ಹಂಪಿಗೆ ಬರಲು ಪ್ರವಾಸಿಗರಿಗೆ ನಿರ್ಬಂಧ ಇಲ್ಲ. ಆದರೆ ಜಾಗ್ರತೆ ವಹಿಸಬೇಕು.</blockquote><span class="attribution"> –ಎಂ.ಎಸ್.ದಿವಾಕರ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ/ಹೊಸಪೇಟೆ(ವಿಜಯನಗರ): ರಾಜ್ಯದ ಬಹುತೇಕ ಕಡೆ ಶುಕ್ರವಾರ ಮಳೆ ಸುರಿಯಿತು. ಬೆಳಗಾವಿಯ ಖಡೇಬಜಾರ್ ಮಾರುಕಟ್ಟೆಗೆ ಹೊಂದಿಕೊಂಡ ತೆಂಗಿನಕೇರಿ ಗಲ್ಲಿಯಲ್ಲಿ ನೆಲ ಮಾಳಿಗೆ ಮಳಿಗೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ನಾಲ್ಕು ಅಂಗಡಿಗಳ ವ್ಯಾಪಾರಸ್ಥರು ಪರದಾಡುವಂತಾಯಿತು.</strong></p>.<p>ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಕೃಷ್ಣಾ ನದಿಗೆ 2.16 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದ 6 ಗೇಟ್ಗಳ ಮೂಲಕ 40 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ರಾಧಾನಗರಿ ಜಲಾಶಯದಿಂದ 10 ಸಾವಿರ ಕ್ಯುಸೆಕ್, ವಾರಣಾ ಜಲಾಶಯದಿಂದ 16 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.</p>.<p>ಘಟಪ್ರಭಾ ನದಿಯಲ್ಲೂ ನೀರಿನ ಪ್ರಮಾಣ ಏರಿದ್ದು ಮೂಡಲಗಿ ತಾಲ್ಲೂಕಿನ ಮಸಗುಪ್ಪಿಯ ಮಹಾಲಕ್ಷ್ಮಿ ದೇವಸ್ಥಾನವು ಶುಕ್ರವಾರ ಜಲಾವೃತಗೊಂಡಿದೆ. ಇದೇ ಗ್ರಾಮದ ಎಸ್ಸಿ ಕಾಲೊನಿಯಲ್ಲಿ ನದಿ ನೀರು ನುಗ್ಗಿದ್ದು, ಅಲ್ಲಿನ ನಿವಾಸಿಗಳಿಗೆ ಸರ್ಕಾರಿ ಪ್ರೌಢಶಾಲೆಯ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಸುಣಧೋಳಿ ಮಠದಲ್ಲಿ ಸಹ ನದಿಯ ನೀರು ಹೊಕ್ಕಿದ್ದು, ಜಲಾವೃತವಾಗಿದೆ. ಮಠಾಧೀಶರು ಮಠದ ಎತ್ತರ ಸ್ಥಳದಲ್ಲಿರುವ ಕೊಠಡಿಯಲ್ಲಿ ಆಶ್ರಯ ಪಡೆದಿದ್ದಾರೆ.</p>.<p> ನ,ಜಾನುವಾರು ಸ್ಥಳಾಂತರ(ಬಾಗಲಕೋಟೆ ವರದಿ): ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮುತ್ತೂರು ಗ್ರಾಮ ಮತ್ತು ಮುಧೋಳ ತಾಲ್ಲೂಕಿನ ಮಿರ್ಜಿ ಗ್ರಾಮ ನಡುಗಡ್ಡೆಯಾಗಿವೆ. ಮುತ್ತೂರು ಗ್ರಾಮದ 17 ಕುಟುಂಬಗಳ 108 ಜನರು ಮತ್ತು 86 ಜಾನುವಾರುಗಳನ್ನು ಹಾಗೂ ಮಿರ್ಜಿ ಗ್ರಾಮದ 8 ಕುಟುಂಬಗಳ 32 ಜನರು ಮತ್ತು 8 ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಿರ್ಜಿಯಲ್ಲಿನ ಕಾಳಜಿ ಕೇಂದ್ರದಲ್ಲಿ 32 ಗ್ರಾಮಸ್ಥರು ಉಳಿದಿದ್ದರೆ, ಮುತ್ತೂರು ಕೇಂದ್ರದಲ್ಲಿ ಯಾರೂ ಉಳಿದುಕೊಂಡಿಲ್ಲ.</p>.<p>ಬಹುತೇಕ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದಿಂದ 1.07 ಲಕ್ಷ ಕ್ಯುಸೆಕ್ ನೀರನ್ನು 30 ಕ್ರಸ್ಟ್ಗೇಟ್ಗಳ ಮೂಲಕ ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಹಂಪಿಯಲ್ಲಿ ಪುರಂದರ ಮಂಟಪ ಪೂರ್ಣ ಮುಳುಗಿದ್ದು, ಧ್ವಜ ಮಾತ್ರ ಕಾಣಿಸುತ್ತಿದೆ. ಹಂಪಿ ವಿರೂಪಾಕ್ಷ ದೇವಸ್ಥಾನದ ಬಳಿ ಸ್ನಾನಘಟ್ಟವೂ ಸಂಪೂರ್ಣ ಮುಳುಗಿದೆ. ಚಕ್ರತೀರ್ಥ ಸಮೀಪದ ಕೋದಂಡರಾಮ, ಯಂತ್ರೋದ್ಧಾರಕ ಆಂಜನೇಯ ದೇವಸ್ಥಾನಕ್ಕೆ ಹೋಗುವ ಕಾಲುದಾರಿ ನೀರಲ್ಲಿ ಮುಳುಗಿದ್ದು, ಬದಲಿ ದಾರಿಯಲ್ಲಿ ಭಕ್ತರು ತೆರಳುತ್ತಿದ್ದಾರೆ.</p>.<p>ಪ್ರವಾಹದಲ್ಲಿ ಚಾಲನೆ: ಜೀಪ್ ವಶ</p>.<p>ಕಳಸ (ಚಿಕ್ಕಮಗಳೂರು): ಧಾರಾಕಾರ ಮಳೆಯಿಂದ ಕಳಸ– ಹೊರನಾಡು ರಸ್ತೆಯ ಹೆಬ್ಬೊಳೆ ಸೇತುವೆ ಮೇಲೆ ಭದ್ರಾ ನದಿ ನೀರು ಉಕ್ಕಿ ಹರಿಯುತ್ತಿದ್ದಾಗ, ಅಪಾಯ ಲೆಕ್ಕಿಸದೆ ಸೇತುವೆ ಮೇಲೆ ಜೀಪ್ ಚಲಾಯಿಸಿದ ಚಾಲಕ ಪವನ್ ಕುಮಾರ್ ವಿರುದ್ಧ ಕಳಸ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೀಪ್ ವಶಪಡಿಸಿಕೊಳ್ಳಲಾಗಿದೆ.</p>.<p> ಮುಳುಗಿದ ಸೇತುವೆ (ಕಲಬುರಗಿ ವರದಿ): ನಾರಾಯಣಪುರದ ಬಸವಸಾಗರ ಜಲಾಶಯದಿಂದ 3 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸುತ್ತಿರುವುದರಿಂದ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಯಾದಗಿರಿ ಜಿಲ್ಲೆಯ ಶಹಾಪುರದಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.</p>.<p>ಮುಂಜಾಗೃತಾ ಕ್ರಮವಾಗಿ ಗುರುವಾರ ರಾತ್ರಿಯಿಂದಲೇ ಪೊಲೀಸರು ಸೇತುವೆ ಮೇಲೆ ವಾಹನಗಳ ಸಂಚಾರ ನಿರ್ಬಂಧಿಸಿದ್ದರು. ಶುಕ್ರವಾರ ಮಧ್ಯಾಹ್ನದಿಂದಲೇ ನೀರು ಸೇತುವೆಯನ್ನು ಆವರಿಸಿಕೊಂಡಿತು. </p>.<p>ಶಹಾಪುರ ತಾಲ್ಲೂಕಿನ ಕೊಳ್ಳುರು (ಎಂ) ಗ್ರಾಮದಿಂದ ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಮಧ್ಯದ ಸಂಪರ್ಕ ಕಡಿತವಾಗಿದೆ.</p>.<p>‘ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ’ ಎಂದು ಶಹಾಪುರ ತಹಶೀಲ್ದಾರ್ ಉಮಾಕಾಂತ ಹಳ್ಳೆ ಮಾಹಿತಿ ನೀಡಿದ್ದಾರೆ.</p>.<p>ಸೇತುವೆಯ ಅರ್ಧ ಕಿ.ಮೀ ದೂರದಿಂದಲೇ ಸಾರ್ವಜನಿಕರ ಓಡಾಟ ನಿರ್ಬಂಧಿಸಲಾಗಿದ್ದು, ಹತ್ತಿಗೂಡುರು ಬಳಿ ಸೇತುವೆ ಸಂಚಾರ ಬಂದ್ ಆಗಿರುವ ಬಗ್ಗೆ ಬ್ಯಾರಿಕೇಡ್ ಅಳವಡಿಸಲಾಗಿದೆ.</p>.<p>ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. 5 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬಂದಿದರೆ ಮತ್ತಷ್ಟು ಜಮೀನುಗಳಿಗೆ ನೀರು ನುಗ್ಗಲಿದೆ.</p>.<p>ಸೇತುವೆ ಮುಳುಗಡೆಯಿಂದಾಗಿ ದೇವದುರ್ಗದ ಮೂಲಕ ಶಹಾಪುರ, ಕಲಬುರಗಿ ಮತ್ತು ಬೀದರ್ ಕಡೆಗೆ ತೆರಳುವ ವಾಹನಗಳು ತಿಂಥಣಿ ಬ್ರಿಜ್ ಮಾರ್ಗವಾಗಿ ಸಂಚರಿಸುತ್ತಿವೆ. ಲಿಂಗಸುಗೂರು ತಾಲ್ಲೂಕಿನಲ್ಲಿ ನಾಲ್ಕು ದಿನಗಳಿಂದ ಮೂರು ಗ್ರಾಮಗಳು ಜಲಾವೃತಗೊಂಡಿವೆ. ನದಿ ತಟದ ಹೊಲಗಳಿಗೆ ನೀರು ನುಗ್ಗಿದೆ.</p>.<p>ತುಂಗಭದ್ರಾ ಜಲಾಶಯದಿಂದ ಸುಮಾರು 90 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗಿದ್ದು, ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರವಾಹ ಭೀತಿ ಇರುವ 11 ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.</p>.<p>ಮೈಸೂರು ಭಾಗದಲ್ಲಿ ರಸ್ತೆ ಕೊಚ್ಚಿಹೋಗುವ ಭೀತಿ<br><br>ಮೈಸೂರು: ಮೈಸೂರು ಭಾಗದ ಮೈಸೂರು, ಕೊಡಗು, ಹಾಸನ ಮತ್ತು ಚಾಮರಾಜನಗರದಲ್ಲಿ ಮಳೆ–ನೆರೆ ಹಾವಳಿ ಮುಂದುವರಿದಿದೆ.</p>.<p>ಹಾಸನ ಜಿಲ್ಲೆಯ ಸಕಲೇಶಪುರದ ಆಜಾದ್ ನಗರ ಜಲಾವೃತವಾಗಿದ್ದು, ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಜನಾಪುರ– ವನಗೂರು ರಾಜ್ಯ ಹೆದ್ದಾರಿ 107ರಲ್ಲಿ ಭೂಕುಸಿತವಾಗಿದ್ದು, ಕೆಲವು ಅಡಿ ಕುಸಿದರೆ, ರಸ್ತೆಯೇ ಕೊಚ್ಚಿ ಹೋಗಲಿದ್ದು, ಸಕಲೇಶಪುರ–ಹೆತ್ತೂರು ನಡುವಿನ ಸಂಪರ್ಕ ಕಡಿತವಾಗಲಿದೆ.</p>.<p>ಬೇಲೂರು ತಾಲ್ಲೂಕಿನ ಬಿರಡಹಳ್ಳಿಯಲ್ಲಿ ಸೇತುವೆ, ಸಕಲೇಶಪುರ ತಾಲ್ಲೂಕಿನ ಮುಗಲಿ, ಹೆಬ್ಬನಹಳ್ಳಿ ಸೇತುವೆ ಮುಳುಗಡೆಯಾಗಿವೆ. ಹೊಳೆಮಲ್ಲೇಶ್ವರ ದೇವಸ್ಥಾನದ ಗರ್ಭಗುಡಿಗೆ, ಹೊಳೆನರಸೀಪುರದ ಅಗ್ನಿಶಾಮಕ ಠಾಣೆ ಹಾಗೂ ಖಾಸಗಿ ಶಾಲೆಗೆ ನೀರು ನುಗ್ಗಿದೆ. ಚನ್ನರಾಯಪಟ್ಟಣ–ಹೊಳೆನರಸೀಪುರ ರಸ್ತೆ ಜಲಾವೃತವಾಗಿದೆ.</p>.<p>ಗುರುವಾರ ರಾತ್ರಿ ಹೇಮಾವತಿ ಜಲಾಯಶದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡಲಾಗಿತ್ತು. ಆಲೂರು ತಾಲ್ಲೂಕಿನ ವಾಟೆಹೊಳೆ ಜಲಾಶಯ ಭರ್ತಿಯಾಗಿದ್ದು, 6 ಸಾವಿರ ಕ್ಯೂಸೆಕ್ ನೀರನ್ನು ಯಗಚಿ ನದಿಗೆ ಬಿಡಲಾಗುತ್ತಿದೆ. ಗೊರೂರು ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ಗೂ ಅಧಿಕ ನೀರನ್ನು ನದಿಗೆ ಹರಿಸುತ್ತಿದ್ದು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ನದಿಗಳೆಲ್ಲವೂ ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಭಾಗಮಂಡಲದ ತ್ರಿವೇಣ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 27ರಂದು ರಜೆ ಘೋಷಿಸಿದೆ. ಹಲವು ಗ್ರಾಮಗಳು ಕಗ್ಗತ್ತಲಲ್ಲಿ ಮುಳುಗಿವೆ. ಸೋಮವಾರಪೇಟೆ ಪಟ್ಟಣದಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಶಾಂತಳ್ಳಿ ಸಮೀಪ ಜೇಡಿಗುಂಡಿ ಬಳಿಯಲ್ಲಿ ಗುರುವಾರ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿದಿದ್ದ ಜಾಗದಲ್ಲೇ ಶುಕ್ರವಾರವೂ ಕೆಸರುಮಿಶ್ರಿತ ಮಣ್ಣು ಜಾರುತ್ತಲೇ ಇದ್ದು, ಶಾಂತಳ್ಳಿ –ಸುಬ್ರಹ್ಮಣ್ಯ ರಸ್ತೆ ಬಂದ್ ಆಗಿದೆ.</p>.<p>ಕೇರಳ– ಕುಟ್ಟ –ಶ್ರೀಮಂಗಲ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಶ್ರೀಮಂಗಲದ ಸಮೀಪ ಖಾಸಗಿ ಬಸ್ ಮಣ್ಣಿನಲ್ಲಿ ಸಿಲುಕಿದ್ದು, ಸಂಚಾರ ಸ್ಥಗಿತಗೊಂಡಿದೆ. ಮಡಿಕೇರಿ– ಮೈಸೂರು ರಸ್ತೆಯಲ್ಲಿ ಸಿಂಕೋನಾ ಸಮೀಪ ಮರವೊಂದು ಉರುಳಿ ತಾಸುಗಟ್ಟಲೆ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಕಿ.ಮೀಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಮರ ಬಿದ್ದು ಹಾನಿಯಾಗಿದೆ. ಹಾರಂಗಿ ಜಲಾಶಯದಿಂದ 20 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.</p>.<p>ಕಬಿನಿ ಹಾಗೂ ಕಾವೇರಿ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನು ನದಿಗಳಿಗೆ ಹರಿಸುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹಳೆ ಹಂಪಾಪುರ ಗ್ರಾಮದ ನೂರಾರು ಎಕರೆ ಕೃಷಿಭೂಮಿ ಜಲಾವೃತಗೊಂಡಿದೆ.</p>.<p>ಮೈಸೂರಿನ ತಲಕಾಡಿನಲ್ಲಿ ಪ್ರವಾಹ ತುರ್ತುಸ್ಥಿತಿ ಎದುರಿಸಲು ಮಾಲಂಗಿ ಗ್ರಾಮದ ಸರ್ಕಾರಿ ಶಾಲೆಯ ಎರಡು ಕೊಠಡಿಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ನಿಸರ್ಗಧಾಮಕ್ಕೆ ಹಾಗೂ ಮಂಡ್ಯ ಜಿಲ್ಲೆಯ ಮುತ್ತತ್ತಿಗೆ ಪ್ರವೇಶ ನಿಷೇಧಿಸಲಾಗಿದೆ.</p>.<p><strong>ಧಾರಾಕಾರ ಮಳೆ</strong>: ಕಗ್ಗತ್ತಲಲ್ಲಿ ಮಲೆನಾಡು ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಹಲವೆಡೆ ವಿದ್ಯುತ್ ಕಂಬ ಮತ್ತು ಮರಗಳು ಉರುಳಿ ಬಿದ್ದಿವೆ. ಮಲೆನಾಡಿನ ಗ್ರಾಮೀಣ ಭಾಗ ಕಗ್ಗತ್ತಲಲ್ಲಿ ಮುಳುಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಜತೆಗೆ ವೇಗವಾಗಿ ಗಾಳಿಯೂ ಬೀಸುತ್ತಿದ್ದು, ಇದುವರೆಗೆ 2,443 ವಿದ್ಯುತ್ ಕಂಬಗಳು ಉರಳಿವೆ ಎಂದು ಮೆಸ್ಕಾಂ ಅಧಿಕಾರಿಗಳು ಅಂದಾಜಿಸಿದ್ದಾರೆ. ಮಳೆ ನಡುವೆಯೂ ದುರಸ್ತಿ ಕಾರ್ಯವನ್ನು ಸಿಬ್ಬಂದಿ ಮುಂದುವರಿಸಿದ್ದಾರೆ. ಆದರೂ, ಬಾಳೆಹೊನ್ನೂರು, ಜಯಪುರ, ಕಳಸ, ಕೊಟ್ಟಿಗೆಹಾರ, ಮಾಗುಂಡಿ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಸುತ್ತಮುತ್ತಲ ಹಳ್ಳಿಗಳಲ್ಲಿ 10 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲವಾಗಿದೆ. ಸಮೀಪದ ಪಟ್ಟಣಗಳಿಗೆ ತೆರಳಿ ಮೊಬೈಲ್ ಫೋನ್ ಚಾರ್ಜ್ ಮಾಡಿಕೊಳ್ಳುತ್ತಿದ್ದೇವೆ ಎಂದು ಅಲ್ಲಿಯ ಕೆಲವರು ಹೇಳಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಬ್ಬಾಳೆ ಸೇತುವೆಯ ಮೇಲೆ ನೀರು ಹರಿಯುತ್ತಿದ್ದು, ಕಳಸ–ಹೊರನಾಡು ಸಂಪರ್ಕ ಕಡಿತವಾಗಿದೆ. ಕಳಸ- ಕಾರ್ಕಳ ರಾಜ್ಯ ಹೆದ್ದಾರಿಯ ಕುದುರೆಮುಖ ಬಳಿ ಭೂಕುಸಿತದಿಂದ ರಸ್ತೆಗೆ ಹಾನಿ ಆಗಿದೆ. ಹಳೆಯ ಸೇತುವೆ ಪಕ್ಕದಲ್ಲೇ ಕುಸಿತ ಉಂಟಾಗಿದ್ದು, ದುರಸ್ತಿಯಾಗದಿದ್ದರೆ ಕಳಸ–ಕಾರ್ಕಳ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ಕಡೂರು ತಾಲ್ಲೂಕಿನ ಐತಿಹಾಸಿಕ ಮಧಗದ ಕೆರೆ ಮತ್ತು ತರೀಕೆರೆಯ ದೊಡ್ಡ ಕೆರೆಗಳು ಭರ್ತಿಯಾಗಿ ಕೊಡಿಯಲ್ಲಿ ನೀರು ಹರಿಯುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಆಲ್ದೂರು ಸಮೀಪದ ಬನ್ನೂರು ಗ್ರಾಮದ ಬಳಿ ಚಿಕ್ಕಮಗಳೂರು– ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಕಾರಿನಲ್ಲಿ ಪಯಣಿಸುತ್ತಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕರಾವಳಿಯಲ್ಲೂ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಇಡೀದಿನ ಆಗಾಗ ಧಾರಾಕಾರ ಮಳೆ ಸುರಿಯಿತು. ಮಳೆಯ ಜೊತೆ ಗಾಳಿ ಅಬ್ಬರ ಜೋರಾಗಿದ್ದರಿಂದ ವಿವಿಧೆಡೆ ಹಾನಿ ಸಂಭವಿಸಿದೆ. ಬಜಪೆ ಸಮೀಪದ ಪದ್ರೆಂಗಿಯಲ್ಲಿ ರತ್ನಾಕರ್ ಎಂಬುವರ ಮನೆಯ ಮೇಲೆ ಮರ ಮುರಿದು ಬಿದ್ದು, ಕೋಣೆಯಲ್ಲಿ ಮಲಗಿದ್ದ ಆಯುಷ್ (6) ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ರತ್ನಾಕರ್ ಅವರ ಸಹೋದರ ಮತ್ತು ಅವರ ಪತ್ನಿಗೂ ಗಾಯಗಳಾಗಿವೆ. ಉಡುಪಿ ಜಿಲ್ಲೆಯ ಕೆಲವೆಡೆ ಭಾರಿ ಗಾಳಿ ಸಹಿತ ಮಳೆಯಾಗಿದ್ದು, ಹಲವು ಮರಗಳು ನೆಲಕ್ಕುರುಳಿವೆ. ಉಡುಪಿ ಶ್ರೀಕೃಷ್ಣ ಮಠದ ಬೃಂದಾವನ ಹಂಚು ಹಾಗೂ ಹತ್ತಿರದ ಹೊಟೇಲ್ನ ತಗಡಿನ ಚಾವಣಿ ಹಾರಿ ಹೋಗಿದೆ. </p>.<div><blockquote>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ತುಂಗಭದ್ರಾಕ್ಕೆ ಬಾಗಿನ ಅರ್ಪಿಸುವರು. ಹಂಪಿಗೆ ಬರಲು ಪ್ರವಾಸಿಗರಿಗೆ ನಿರ್ಬಂಧ ಇಲ್ಲ. ಆದರೆ ಜಾಗ್ರತೆ ವಹಿಸಬೇಕು.</blockquote><span class="attribution"> –ಎಂ.ಎಸ್.ದಿವಾಕರ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>