<p><strong>ಮುಡಿಪು</strong>: ಕಾರವಾರ ಮೂಲದ ಮಹಿಳೆಯೊಬ್ಬರು ಅನಾರೋಗ್ಯದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರ ಶವವನ್ನು ತವರೂರಿಗೆ ಸಾಗಿಸಲು ಹಣವಿಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ನೆರವಾಗಿದ್ದಾರೆ.</p>.<p>ಅಸೈಗೋಳಿಯ ಕೆಎಸ್ಆರ್ಪಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಕಾರವಾರ ಬಾವಲ್ ಗ್ರಾಮದ ಮೂಲದ ಗೋವಿಂದ ಟಿ.ಸಾಲಿ ಎಂಬುವರ ಪುತ್ರಿ ವಿದ್ಯಾ ವಿಕ್ರಮ್ ಅಂಬಿಗ್ (33) ಎಂಬುವರು ಕಾಮಾಲೆ ರೋಗಕ್ಕೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಮೃತಪಟ್ಟಿದ್ದರು.</p>.<p>ಶವವನ್ನು ಊರಿಗೆ ಸಾಗಿಸಲು ಪರದಾಡುತ್ತಿದ್ದ ಕುಟುಂಬದ ಬಗ್ಗೆ ಕೊಣಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಝರ್ ಷಾ ಅವರು ಯು.ಟಿ.ಖಾದರ್ ಅವರಿಗೆ ತಿಳಿಸಿದ್ದು, ಆಸ್ಪತ್ರೆಗೆ ಪಾವತಿಸಿದ್ದ ಮೊತ್ತವನ್ನು ವಾಪಸ್ ಕೊಡಿಸಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ಶವ ಕೊಂಡೊಯ್ಯಲು ಸಹಕರಿಸಿದ್ದಾರೆ.</p>.<p>ಗೋವಿಂದ ಅವರು ಕೆಎಸ್ಆರ್ಪಿ ಬೆಟಾಲಿಯನ್ನಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದಾಗಿ ಕೆಲಸಕ್ಕೆ ತೆರಳಲಾಗದೆ 5 ವರ್ಷಗಳಿಂದ ಕೊಣಾಜೆಯ ಕುಂಟಾಲಗುಳಿ ಬಳಿ ಸಣ್ಣ ಬಾಡಿಗೆ ಮನೆಯಲ್ಲಿ ನಾಲ್ವರು ಪುತ್ರಿಯರೊಂದಿಗೆ ವಾಸವಾಗಿದ್ದರು. ಈ ಪೈಕಿ ಇಬ್ಬರು ಪುತ್ರಿಯರಿಗೆ ವಿವಾಹವಾಗಿದ್ದರೂ, ತಂದೆಯ ಜತೆಗೆ ವಾಸವಾಗಿದ್ದರು. ಹಿರಿಯ ಈಗ ಮೃತಪಟ್ಟಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು</strong>: ಕಾರವಾರ ಮೂಲದ ಮಹಿಳೆಯೊಬ್ಬರು ಅನಾರೋಗ್ಯದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರ ಶವವನ್ನು ತವರೂರಿಗೆ ಸಾಗಿಸಲು ಹಣವಿಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ನೆರವಾಗಿದ್ದಾರೆ.</p>.<p>ಅಸೈಗೋಳಿಯ ಕೆಎಸ್ಆರ್ಪಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಕಾರವಾರ ಬಾವಲ್ ಗ್ರಾಮದ ಮೂಲದ ಗೋವಿಂದ ಟಿ.ಸಾಲಿ ಎಂಬುವರ ಪುತ್ರಿ ವಿದ್ಯಾ ವಿಕ್ರಮ್ ಅಂಬಿಗ್ (33) ಎಂಬುವರು ಕಾಮಾಲೆ ರೋಗಕ್ಕೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಮೃತಪಟ್ಟಿದ್ದರು.</p>.<p>ಶವವನ್ನು ಊರಿಗೆ ಸಾಗಿಸಲು ಪರದಾಡುತ್ತಿದ್ದ ಕುಟುಂಬದ ಬಗ್ಗೆ ಕೊಣಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಝರ್ ಷಾ ಅವರು ಯು.ಟಿ.ಖಾದರ್ ಅವರಿಗೆ ತಿಳಿಸಿದ್ದು, ಆಸ್ಪತ್ರೆಗೆ ಪಾವತಿಸಿದ್ದ ಮೊತ್ತವನ್ನು ವಾಪಸ್ ಕೊಡಿಸಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ಶವ ಕೊಂಡೊಯ್ಯಲು ಸಹಕರಿಸಿದ್ದಾರೆ.</p>.<p>ಗೋವಿಂದ ಅವರು ಕೆಎಸ್ಆರ್ಪಿ ಬೆಟಾಲಿಯನ್ನಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದಾಗಿ ಕೆಲಸಕ್ಕೆ ತೆರಳಲಾಗದೆ 5 ವರ್ಷಗಳಿಂದ ಕೊಣಾಜೆಯ ಕುಂಟಾಲಗುಳಿ ಬಳಿ ಸಣ್ಣ ಬಾಡಿಗೆ ಮನೆಯಲ್ಲಿ ನಾಲ್ವರು ಪುತ್ರಿಯರೊಂದಿಗೆ ವಾಸವಾಗಿದ್ದರು. ಈ ಪೈಕಿ ಇಬ್ಬರು ಪುತ್ರಿಯರಿಗೆ ವಿವಾಹವಾಗಿದ್ದರೂ, ತಂದೆಯ ಜತೆಗೆ ವಾಸವಾಗಿದ್ದರು. ಹಿರಿಯ ಈಗ ಮೃತಪಟ್ಟಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>