<p><strong>ಮಂಗಳೂರು</strong>: ಬೀದಿಬದಿ ವ್ಯಾಪಾರಸ್ಥರದ ವಿರೋಧದ ನಡುವೆಯೂ ಮಹಾನಗರ ಪಾಲಿಕೆ ಕೈಗೆತ್ತಿಕೊಂಡಿರುವ ‘ಟೈಗರ್’ ಕಾರ್ಯಾಚರಣೆ ಮಂಗಳವಾರವೂ ಮುಂದುವರಿಯಿತು.</p>.<p>ನಗರದ ಕಂಕನಾಡಿ ಮತ್ತು ಪಂಪ್ವೆಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹಾಕಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿ, ಮಾರಾಟದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಯಿತು. ಇದನ್ನು ವಿರೋಧಿಸಿ, ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ನೇತೃತ್ವದಲ್ಲಿ ಮಹಾನಗರ ಪಾಲಿಕೆಯಲ್ಲಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.</p>.<p>ಪಾಲಿಕೆಯ ಮಂಗಳಾ ಸಭಾಭವನದ ಎದುರು ಕುಳಿತು ಪ್ರತಿಭಟನೆ ಆರಂಭಿಸಿದ ಬೀದಿಬದಿ ವ್ಯಾಪಾರಿಗಳು, ನಂತರ ಪಾಲಿಕೆ ಆಯುಕ್ತರ ಕೊಠಡಿ ಎದುರು ಕುಳಿತು, ಕಾರ್ಯಾಚರಣೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್, ‘ಟೈಗರ್ ಕಾರ್ಯಾಚರಣೆ ಹೆಸರಿನಲ್ಲಿ ಬುಲ್ಡೋಜರ್ ಹಿಡಿದು ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ದಾಳಿ ನಡೆಸಿರುವುದು ಅವರ ಬದುಕುವ ಹಕ್ಕಿನ ಮೇಲಿನ ದಾಳಿಯಾಗಿದೆ. ಇದು, ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯ, ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ 2014 ಮತ್ತು ಕರ್ನಾಟಕ ಬೀದಿಬದಿ ವ್ಯಾಪಾರದ ಅಧಿನಿಯಮ 2019ರ ಉಲ್ಲಂಘನೆಯಾಗಿದೆ. ಪಟ್ಟಣ ವ್ಯಾಪಾರ ಸಮಿತಿ ಸಭೆ ಕರೆಯದೆ ಏಕಾಏಕಿ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ’ ಎಂದು ದೂರಿದರು.</p>.<p>‘ಮೇಯರ್ ಅವರೇ, ನಗರದಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ, ಇವುಗಳ ಮೇಲೆ ಬುಲ್ಡೋಜರ್ ಕ್ರಮ ಕೈಗೊಳ್ಳುವ ಧೈರ್ಯ ಯಾಕಿಲ್ಲ ನಿಮಗೆ? ಬಡವರ ಮೇಲೆ ಮಾತ್ರ ಯಾಕೆ ಈ ಪ್ರಯೋಗ ಮಾಡುತ್ತಿದ್ದೀರಿ. ವೆಂಡರ್ ಝೋನ್ ಮಾಡುವುದಾಗಿ ಹೇಳಿದ್ದರೂ, ಅಲ್ಲಿ 135 ಜನರಿಗೆ ಮಾತ್ರ ಅವಕಾಶ ಕಲ್ಪಿಸಬಹುದು. ಅಲ್ಲದೆ, ವೆಂಡರ್ ಝೋನ್ ಇನ್ನೂ ಸಿದ್ಧವಾಗಿಲ್ಲ. ಈ ಅಮಾನುಷ ದಾಳಿ ಕಾನೂನು ಬಾಹಿರವಾಗಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಬೇಕು. ಎಲ್ಲ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬೀದಿಬದಿ ವ್ಯಾಪಾರಸ್ಥರದ ವಿರೋಧದ ನಡುವೆಯೂ ಮಹಾನಗರ ಪಾಲಿಕೆ ಕೈಗೆತ್ತಿಕೊಂಡಿರುವ ‘ಟೈಗರ್’ ಕಾರ್ಯಾಚರಣೆ ಮಂಗಳವಾರವೂ ಮುಂದುವರಿಯಿತು.</p>.<p>ನಗರದ ಕಂಕನಾಡಿ ಮತ್ತು ಪಂಪ್ವೆಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹಾಕಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿ, ಮಾರಾಟದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಯಿತು. ಇದನ್ನು ವಿರೋಧಿಸಿ, ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ನೇತೃತ್ವದಲ್ಲಿ ಮಹಾನಗರ ಪಾಲಿಕೆಯಲ್ಲಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.</p>.<p>ಪಾಲಿಕೆಯ ಮಂಗಳಾ ಸಭಾಭವನದ ಎದುರು ಕುಳಿತು ಪ್ರತಿಭಟನೆ ಆರಂಭಿಸಿದ ಬೀದಿಬದಿ ವ್ಯಾಪಾರಿಗಳು, ನಂತರ ಪಾಲಿಕೆ ಆಯುಕ್ತರ ಕೊಠಡಿ ಎದುರು ಕುಳಿತು, ಕಾರ್ಯಾಚರಣೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್, ‘ಟೈಗರ್ ಕಾರ್ಯಾಚರಣೆ ಹೆಸರಿನಲ್ಲಿ ಬುಲ್ಡೋಜರ್ ಹಿಡಿದು ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ದಾಳಿ ನಡೆಸಿರುವುದು ಅವರ ಬದುಕುವ ಹಕ್ಕಿನ ಮೇಲಿನ ದಾಳಿಯಾಗಿದೆ. ಇದು, ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯ, ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ 2014 ಮತ್ತು ಕರ್ನಾಟಕ ಬೀದಿಬದಿ ವ್ಯಾಪಾರದ ಅಧಿನಿಯಮ 2019ರ ಉಲ್ಲಂಘನೆಯಾಗಿದೆ. ಪಟ್ಟಣ ವ್ಯಾಪಾರ ಸಮಿತಿ ಸಭೆ ಕರೆಯದೆ ಏಕಾಏಕಿ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ’ ಎಂದು ದೂರಿದರು.</p>.<p>‘ಮೇಯರ್ ಅವರೇ, ನಗರದಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ, ಇವುಗಳ ಮೇಲೆ ಬುಲ್ಡೋಜರ್ ಕ್ರಮ ಕೈಗೊಳ್ಳುವ ಧೈರ್ಯ ಯಾಕಿಲ್ಲ ನಿಮಗೆ? ಬಡವರ ಮೇಲೆ ಮಾತ್ರ ಯಾಕೆ ಈ ಪ್ರಯೋಗ ಮಾಡುತ್ತಿದ್ದೀರಿ. ವೆಂಡರ್ ಝೋನ್ ಮಾಡುವುದಾಗಿ ಹೇಳಿದ್ದರೂ, ಅಲ್ಲಿ 135 ಜನರಿಗೆ ಮಾತ್ರ ಅವಕಾಶ ಕಲ್ಪಿಸಬಹುದು. ಅಲ್ಲದೆ, ವೆಂಡರ್ ಝೋನ್ ಇನ್ನೂ ಸಿದ್ಧವಾಗಿಲ್ಲ. ಈ ಅಮಾನುಷ ದಾಳಿ ಕಾನೂನು ಬಾಹಿರವಾಗಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಬೇಕು. ಎಲ್ಲ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>