<p><strong>ಮಂಗಳೂರು:</strong> ಜನರ ನಡುವೆ ಬೆಳೆದು ಬಂದ ಜನಪದ ಸಂಸ್ಕೃತಿಯ ಚರಿತ್ರೆ ದಾಖಲೀಕರಣ ಮಹತ್ವದ್ದಾಗಿದೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಅಧ್ಯಕ್ಷ ತುಕಾರಾಮ ಪೂಜಾರಿ ಅಭಿಪ್ರಾಯಪಟ್ಟರು.</p>.<p>ಗುರುವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬರಹಗಾರ ರಘುನಾಥ ಎಂ. ವರ್ಕಾಡಿ ಅವರ ‘ಸೂರ್ಯೆ ಚಂದ್ರೆ ಸಿರಿ’ ತುಳು ಕಥೆಗಳ ಸಂಗ್ರಹವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಕೃಷಿ ನಂಟಿನೊಂದಿಗೆ ಬದುಕು ರೂಪಿತವಾಗಿದ್ದ ತುಳುನಾಡಿನಲ್ಲಿ ಕೃಷಿ ಸಂಸ್ಕೃತಿ ದೂರವಾಗುತ್ತಿದೆ. ತುಳುನಾಡಿನ ಕೃಷಿ ನಂಬಿಕೆ, ಆರಾಧನಾ ಕ್ರಮಗಳು ಯುವ ಪೀಳಿಗೆಗೆ ಅಷ್ಟಾಗಿ ಗೊತ್ತಿಲ್ಲ. ಈ ಕಾಲಘಟ್ಟದಲ್ಲಿ ತಮ್ಮ ಅಮ್ಮನಿಂದ ಕೇಳಿ ತಿಳಿದ ನೆಲದ ಸಂಸ್ಕೃತಿಯ ಅನೇಕ ಅಚ್ಚರಿಗಳನ್ನು ಪುಸ್ತಕದಲ್ಲಿ ದಾಖಲಿಸಿರುವ ವರ್ಕಾಡಿ ಅವರ ಶ್ರಮ ಶ್ಲಾಘನೀಯ’ ಎಂದರು.</p>.<p>ಶಾಸನ ಆಧಾರಿತ ಚರಿತ್ರೆಗಳು ರಾಜರ ಆಳ್ವಿಕೆ ಅಥವಾ ಇನ್ನಿತರ ಸಂದರ್ಭಗಳಲ್ಲಿ ದಾಖಲಾಗುತ್ತವೆ. ಆದರೆ, ಜನಪದ ಸಂಸ್ಕೃತಿಯ ಚರಿತ್ರೆಗಳು ನೆಲದ ಸಂಸ್ಕೃತಿಯ ಸೊಗಡನ್ನು ಹೊಂದಿರುತ್ತವೆ. ಬಹುಸಂಖ್ಯಾತ ಜನರ ಬದುಕಿನ ಕ್ರಮವಾದ ಜನಪದ ಸಂಸ್ಕೃತಿಯ ದಾಖಲೀಕರಣ ಹೆಚ್ಚು ಮೌಲ್ಯ ಪಡೆದುಕೊಳ್ಳುತ್ತದೆ ಎಂದರು. </p>.<p>ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಂ.ಎಸ್. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ನಿಲಯ ಎಂ. ಅಗರಿ, ‘ನಮ್ಮ ಕುಡ್ಲ’ ಚಾನೆಲ್ನ ನಿರ್ದೇಶಕ ಸುರೇಶ್ ಬಿ. ಕರ್ಕೇರ ಮುಖ್ಯ ಅತಿಥಿಗಳಾಗಿದ್ದರು. ಕೃತಿಕಾರ ರಘುನಾಥ ಎಂ. ವರ್ಕಾಡಿ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಜನರ ನಡುವೆ ಬೆಳೆದು ಬಂದ ಜನಪದ ಸಂಸ್ಕೃತಿಯ ಚರಿತ್ರೆ ದಾಖಲೀಕರಣ ಮಹತ್ವದ್ದಾಗಿದೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಅಧ್ಯಕ್ಷ ತುಕಾರಾಮ ಪೂಜಾರಿ ಅಭಿಪ್ರಾಯಪಟ್ಟರು.</p>.<p>ಗುರುವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬರಹಗಾರ ರಘುನಾಥ ಎಂ. ವರ್ಕಾಡಿ ಅವರ ‘ಸೂರ್ಯೆ ಚಂದ್ರೆ ಸಿರಿ’ ತುಳು ಕಥೆಗಳ ಸಂಗ್ರಹವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಕೃಷಿ ನಂಟಿನೊಂದಿಗೆ ಬದುಕು ರೂಪಿತವಾಗಿದ್ದ ತುಳುನಾಡಿನಲ್ಲಿ ಕೃಷಿ ಸಂಸ್ಕೃತಿ ದೂರವಾಗುತ್ತಿದೆ. ತುಳುನಾಡಿನ ಕೃಷಿ ನಂಬಿಕೆ, ಆರಾಧನಾ ಕ್ರಮಗಳು ಯುವ ಪೀಳಿಗೆಗೆ ಅಷ್ಟಾಗಿ ಗೊತ್ತಿಲ್ಲ. ಈ ಕಾಲಘಟ್ಟದಲ್ಲಿ ತಮ್ಮ ಅಮ್ಮನಿಂದ ಕೇಳಿ ತಿಳಿದ ನೆಲದ ಸಂಸ್ಕೃತಿಯ ಅನೇಕ ಅಚ್ಚರಿಗಳನ್ನು ಪುಸ್ತಕದಲ್ಲಿ ದಾಖಲಿಸಿರುವ ವರ್ಕಾಡಿ ಅವರ ಶ್ರಮ ಶ್ಲಾಘನೀಯ’ ಎಂದರು.</p>.<p>ಶಾಸನ ಆಧಾರಿತ ಚರಿತ್ರೆಗಳು ರಾಜರ ಆಳ್ವಿಕೆ ಅಥವಾ ಇನ್ನಿತರ ಸಂದರ್ಭಗಳಲ್ಲಿ ದಾಖಲಾಗುತ್ತವೆ. ಆದರೆ, ಜನಪದ ಸಂಸ್ಕೃತಿಯ ಚರಿತ್ರೆಗಳು ನೆಲದ ಸಂಸ್ಕೃತಿಯ ಸೊಗಡನ್ನು ಹೊಂದಿರುತ್ತವೆ. ಬಹುಸಂಖ್ಯಾತ ಜನರ ಬದುಕಿನ ಕ್ರಮವಾದ ಜನಪದ ಸಂಸ್ಕೃತಿಯ ದಾಖಲೀಕರಣ ಹೆಚ್ಚು ಮೌಲ್ಯ ಪಡೆದುಕೊಳ್ಳುತ್ತದೆ ಎಂದರು. </p>.<p>ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಂ.ಎಸ್. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ನಿಲಯ ಎಂ. ಅಗರಿ, ‘ನಮ್ಮ ಕುಡ್ಲ’ ಚಾನೆಲ್ನ ನಿರ್ದೇಶಕ ಸುರೇಶ್ ಬಿ. ಕರ್ಕೇರ ಮುಖ್ಯ ಅತಿಥಿಗಳಾಗಿದ್ದರು. ಕೃತಿಕಾರ ರಘುನಾಥ ಎಂ. ವರ್ಕಾಡಿ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>