<p><strong>ಮಂಗಳೂರು</strong>: ಜಿಲ್ಲೆಯ ಬ್ಲೂ ಫ್ಲ್ಯಾಗ್ ಬೀಚ್ ಬಗ್ಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿಯ ಕೊರತೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.</p>.<p>ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಇಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಈಗಾಗಲೇ ಸ್ಮಾರ್ಟ್ಸಿಟಿ ಆಗಿ ರೂಪುಗೊಳ್ಳುತ್ತಿರುವ ಮಂಗಳೂರಿನಲ್ಲಿ ಪ್ರವಾಸೋದ್ಯಮವು ಮುಖ್ಯವಾದ ಭಾಗವಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಹಲವಾರು ಕೆಲಸಗಳು ನಡೆಯುತ್ತಿದ್ದು, ಇವುಗಳಲ್ಲಿ ಬೀಚ್ ಪ್ರವಾಸೋದ್ಯಮ ಮಹತ್ವದ್ದಾಗಿದೆ ಎಂದರು.</p>.<p>ತಣ್ಣೀರುಬಾವಿ ಕಡಲತೀರ ಬ್ಲೂ ಫ್ಲ್ಯಾಗ್ ಬೀಚ್ ಆಗಿ ರೂಪುಗೊಂಡಿದೆ. ಆದರೆ ಇದರ ಬಗ್ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಮಾಹಿತಿ ಇಲ್ಲದಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಬೀಚ್ ಮುಖ್ಯದ್ವಾರ ಹಾಗೂ ನಗರದ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಆಕರ್ಷಕ ನಾಮಫಲಕ ಅಳವಡಿಸಬೇಕು. ಸಾಮಾಜಿಕ ಜಾಲತಾಣಗಳು, ವೆಬ್ಸೈಟ್ಗಳಲ್ಲಿ ಆಕರ್ಷಕವಾಗಿ ವಿನ್ಯಾಸಗೊಳಿಸಬೇಕು ಎಂದು ಸೂಚಿಸಿದರು.</p>.<p>ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳು ನಿಧಾನ ಗತಿಯಲ್ಲಿ ನಡೆಯುತ್ತಿವೆ. ಈಗ ಮಾಲ್ಡೀವ್ಸ್, ಲಕ್ಷದ್ವೀಪದ ಕಡಲತೀರಗಳು ಚರ್ಚೆಯಲ್ಲಿದ್ದು, ಸ್ಥಳೀಯ ಬೀಚ್ಗಳ ಹೆಸರು ಚಾಲ್ತಿಗೆ ಬರುತ್ತಿದೆ. ಆದಷ್ಟು ಬೇಗ ಇವುಗಳ ತಾಣಗಳ ಅಭಿವೃದ್ಧಿ ಆಗಬೇಕು. ಪ್ರವಾಸಿಗರನ್ನು ಕರಾವಳಿಯತ್ತ ಸೆಳೆಯುವಂತಾಗಬೇಕು ಎಂದು ಹೇಳಿದರು.</p>.<p>ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಜಿಲ್ಲೆಯ ಬ್ಲೂ ಫ್ಲ್ಯಾಗ್ ಬೀಚ್ ಬಗ್ಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿಯ ಕೊರತೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.</p>.<p>ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಇಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಈಗಾಗಲೇ ಸ್ಮಾರ್ಟ್ಸಿಟಿ ಆಗಿ ರೂಪುಗೊಳ್ಳುತ್ತಿರುವ ಮಂಗಳೂರಿನಲ್ಲಿ ಪ್ರವಾಸೋದ್ಯಮವು ಮುಖ್ಯವಾದ ಭಾಗವಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಹಲವಾರು ಕೆಲಸಗಳು ನಡೆಯುತ್ತಿದ್ದು, ಇವುಗಳಲ್ಲಿ ಬೀಚ್ ಪ್ರವಾಸೋದ್ಯಮ ಮಹತ್ವದ್ದಾಗಿದೆ ಎಂದರು.</p>.<p>ತಣ್ಣೀರುಬಾವಿ ಕಡಲತೀರ ಬ್ಲೂ ಫ್ಲ್ಯಾಗ್ ಬೀಚ್ ಆಗಿ ರೂಪುಗೊಂಡಿದೆ. ಆದರೆ ಇದರ ಬಗ್ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಮಾಹಿತಿ ಇಲ್ಲದಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಬೀಚ್ ಮುಖ್ಯದ್ವಾರ ಹಾಗೂ ನಗರದ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಆಕರ್ಷಕ ನಾಮಫಲಕ ಅಳವಡಿಸಬೇಕು. ಸಾಮಾಜಿಕ ಜಾಲತಾಣಗಳು, ವೆಬ್ಸೈಟ್ಗಳಲ್ಲಿ ಆಕರ್ಷಕವಾಗಿ ವಿನ್ಯಾಸಗೊಳಿಸಬೇಕು ಎಂದು ಸೂಚಿಸಿದರು.</p>.<p>ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳು ನಿಧಾನ ಗತಿಯಲ್ಲಿ ನಡೆಯುತ್ತಿವೆ. ಈಗ ಮಾಲ್ಡೀವ್ಸ್, ಲಕ್ಷದ್ವೀಪದ ಕಡಲತೀರಗಳು ಚರ್ಚೆಯಲ್ಲಿದ್ದು, ಸ್ಥಳೀಯ ಬೀಚ್ಗಳ ಹೆಸರು ಚಾಲ್ತಿಗೆ ಬರುತ್ತಿದೆ. ಆದಷ್ಟು ಬೇಗ ಇವುಗಳ ತಾಣಗಳ ಅಭಿವೃದ್ಧಿ ಆಗಬೇಕು. ಪ್ರವಾಸಿಗರನ್ನು ಕರಾವಳಿಯತ್ತ ಸೆಳೆಯುವಂತಾಗಬೇಕು ಎಂದು ಹೇಳಿದರು.</p>.<p>ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>