<p>ಸುಬ್ರಹ್ಮಣ್ಯ: ನಿರಂತರ ಮಳೆಯಿಂದಾಗಿ ಹಳಿಯ ಕೆಳಭಾಗದಲ್ಲಿ ಮಣ್ಣು ಕುಸಿತ ಉಂಟಾದ ಪರಿಣಾಮ ಮಂಗಳೂರು–ಬೆಂಗಳೂರು ನಡುವಿನ ರೈಲು ಶುಕ್ರವಾರ ಸಂಜೆ ಸ್ವಲ್ಪ ಹೊತ್ತು ಸ್ಥಗಿತೊಂಡಿತು. ನಂತರ ಬದಲಿ ಮಾರ್ಗದ ಮೂಲಕ ಸಾಗಿದವು. </p>.<p>ರೈಲು ಹಳಿಯ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಮಣ್ಣು ಕುಸಿದಿದೆ. ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್ಪ್ರೆಸ್ ಈ ಘಟನೆಯಿಂದಾಗಿ ವಾಪಸಾಯಿತು. ನಂತರ ಕಾರವಾರ, ಮಡಗಾಂವ್ ಜಂಕ್ಷನ್, ಕುಳೆಮ್, ಕ್ಯಾಸಲ್ರಾಕ್, ಲೋಂಡ ಜಂಕ್ಷನ್ ಮೂಲಕ ಹುಬ್ಬಳ್ಳಿಗೆ ತೆರಳಿತು. ಕಾರವಾರ, ಕಣ್ಣೂರು, ಮುರುಡೇಶ್ವರಕ್ಕೆ ಬೆಂಗಳೂರಿನಿಂದ ಹೊರಟ ರೈಲುಗಳ ಮಾರ್ಗವನ್ನೂ ಬದಲಿಸಲಾಯಿತು.</p>.<p>ಹಿರಿಯ ಅಧಿಕಾರಿಗಳು ಮತ್ತು ಎಂಜಿನಿಯರ್ಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ದುರಸ್ತಿ ಕಾರ್ಯ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.</p>.<p>ಗೊಂದಲಕ್ಕೀಡಾದ ಪ್ರಯಾಣಿಕರು: ದಿಢೀರ್ ಆಗಿ ರೈಲು ಸ್ಥಗಿತಗೊಂಡ ಮಾಹಿತಿ ಲಭಿಸುತ್ತಿದ್ದಂತೆ ಪ್ರಯಾಣಿಕರು ಗೊಂದಲಕ್ಕೀಡಾದರು. ಸ್ಪಷ್ಟ ಮಾಹಿತಿಗಾಗಿ ಪರದಾಡಿದರು. ಕೆಲವರು ನಿಲ್ದಾಣದಲ್ಲೇ ಉಳಿದರು. ಕೆಲವರು ಬದಲಿ ವ್ಯವಸ್ಥೆ ಮಾಡಿ ಪ್ರಯಾಣ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಬ್ರಹ್ಮಣ್ಯ: ನಿರಂತರ ಮಳೆಯಿಂದಾಗಿ ಹಳಿಯ ಕೆಳಭಾಗದಲ್ಲಿ ಮಣ್ಣು ಕುಸಿತ ಉಂಟಾದ ಪರಿಣಾಮ ಮಂಗಳೂರು–ಬೆಂಗಳೂರು ನಡುವಿನ ರೈಲು ಶುಕ್ರವಾರ ಸಂಜೆ ಸ್ವಲ್ಪ ಹೊತ್ತು ಸ್ಥಗಿತೊಂಡಿತು. ನಂತರ ಬದಲಿ ಮಾರ್ಗದ ಮೂಲಕ ಸಾಗಿದವು. </p>.<p>ರೈಲು ಹಳಿಯ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಮಣ್ಣು ಕುಸಿದಿದೆ. ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್ಪ್ರೆಸ್ ಈ ಘಟನೆಯಿಂದಾಗಿ ವಾಪಸಾಯಿತು. ನಂತರ ಕಾರವಾರ, ಮಡಗಾಂವ್ ಜಂಕ್ಷನ್, ಕುಳೆಮ್, ಕ್ಯಾಸಲ್ರಾಕ್, ಲೋಂಡ ಜಂಕ್ಷನ್ ಮೂಲಕ ಹುಬ್ಬಳ್ಳಿಗೆ ತೆರಳಿತು. ಕಾರವಾರ, ಕಣ್ಣೂರು, ಮುರುಡೇಶ್ವರಕ್ಕೆ ಬೆಂಗಳೂರಿನಿಂದ ಹೊರಟ ರೈಲುಗಳ ಮಾರ್ಗವನ್ನೂ ಬದಲಿಸಲಾಯಿತು.</p>.<p>ಹಿರಿಯ ಅಧಿಕಾರಿಗಳು ಮತ್ತು ಎಂಜಿನಿಯರ್ಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ದುರಸ್ತಿ ಕಾರ್ಯ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.</p>.<p>ಗೊಂದಲಕ್ಕೀಡಾದ ಪ್ರಯಾಣಿಕರು: ದಿಢೀರ್ ಆಗಿ ರೈಲು ಸ್ಥಗಿತಗೊಂಡ ಮಾಹಿತಿ ಲಭಿಸುತ್ತಿದ್ದಂತೆ ಪ್ರಯಾಣಿಕರು ಗೊಂದಲಕ್ಕೀಡಾದರು. ಸ್ಪಷ್ಟ ಮಾಹಿತಿಗಾಗಿ ಪರದಾಡಿದರು. ಕೆಲವರು ನಿಲ್ದಾಣದಲ್ಲೇ ಉಳಿದರು. ಕೆಲವರು ಬದಲಿ ವ್ಯವಸ್ಥೆ ಮಾಡಿ ಪ್ರಯಾಣ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>