<p><strong>ಉಪ್ಪಿನಂಗಡಿ:</strong> ನಿರಂತರವಾಗಿ ಸುರಿದ ಮಳೆಯಿಂದಾಗಿ ಅಪಾಯದ ಮಟ್ಟದಲ್ಲಿ ಉಪ್ಪಿನಂಗಡಿಯಲ್ಲಿ ಹರಿಯುತ್ತಿದ್ದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ನೀರಿನ ಮಟ್ಟ ಗಮನಾರ್ಹವಾಗಿ ಇಳಿಕೆಯಾಗಿದೆ.</p>.<p>ಭಾನುವಾರ ಸಂಜೆ ವೇಳೆಗೆ ದೇವಸ್ಥಾನ ಸ್ನಾನಘಟ್ಟದ 36 ಮೆಟ್ಟಿಲುಗಳ ಪೈಕಿ 14 ಮೆಟ್ಟಿಲು ಕಾಣುತ್ತಿತ್ತು. ನದಿ ನೀರಿನ ಮಟ್ಟ 27.5 ಮೀಟರ್ ಎತ್ತರದಲ್ಲಿ ಇತ್ತು.</p>.<p>ಗ್ರಾಮದ ಕೆಲವಡೆ ಅಪಾಯಕಾರಿ ಮರಗಳ ತೆರವು ಕಾರ್ಯ ನಡೆದಿಲ್ಲ ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು ಅವರು ಉಪ್ಪಿನಂಗಡಿಗೆ ಶುಕ್ರವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಲ್ಲಿ ದೂರಿದ್ದರು. ಈ ಬಗ್ಗೆ ಸ್ಥಳದಲ್ಲಿಯೇ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದ ಜಿಲ್ಲಾಧಿಕಾರಿ ತೆರವು ಕಾರ್ಯಚರಣೆಯ ವರದಿಯನ್ನು ಶನಿವಾರ ಒಪ್ಪಿಸಬೇಕೆಂದು ನಿರ್ದೇಶನ ನೀಡಿದ್ದರು. ಅದರಂತೆ ಪಂಚಾಯಿತಿ ಆಡಳಿತ ಸೂಚಿಸಿದ್ದ ಮರಗಳನ್ನು ಮತ್ತು ಅವುಗಳ ಗೆಲ್ಲುಗಳನ್ನು ಅರಣ್ಯ ಇಲಾಖೆ ವತಿಯಿಂದ ತೆರವು ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ನಿರಂತರವಾಗಿ ಸುರಿದ ಮಳೆಯಿಂದಾಗಿ ಅಪಾಯದ ಮಟ್ಟದಲ್ಲಿ ಉಪ್ಪಿನಂಗಡಿಯಲ್ಲಿ ಹರಿಯುತ್ತಿದ್ದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ನೀರಿನ ಮಟ್ಟ ಗಮನಾರ್ಹವಾಗಿ ಇಳಿಕೆಯಾಗಿದೆ.</p>.<p>ಭಾನುವಾರ ಸಂಜೆ ವೇಳೆಗೆ ದೇವಸ್ಥಾನ ಸ್ನಾನಘಟ್ಟದ 36 ಮೆಟ್ಟಿಲುಗಳ ಪೈಕಿ 14 ಮೆಟ್ಟಿಲು ಕಾಣುತ್ತಿತ್ತು. ನದಿ ನೀರಿನ ಮಟ್ಟ 27.5 ಮೀಟರ್ ಎತ್ತರದಲ್ಲಿ ಇತ್ತು.</p>.<p>ಗ್ರಾಮದ ಕೆಲವಡೆ ಅಪಾಯಕಾರಿ ಮರಗಳ ತೆರವು ಕಾರ್ಯ ನಡೆದಿಲ್ಲ ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು ಅವರು ಉಪ್ಪಿನಂಗಡಿಗೆ ಶುಕ್ರವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಲ್ಲಿ ದೂರಿದ್ದರು. ಈ ಬಗ್ಗೆ ಸ್ಥಳದಲ್ಲಿಯೇ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದ ಜಿಲ್ಲಾಧಿಕಾರಿ ತೆರವು ಕಾರ್ಯಚರಣೆಯ ವರದಿಯನ್ನು ಶನಿವಾರ ಒಪ್ಪಿಸಬೇಕೆಂದು ನಿರ್ದೇಶನ ನೀಡಿದ್ದರು. ಅದರಂತೆ ಪಂಚಾಯಿತಿ ಆಡಳಿತ ಸೂಚಿಸಿದ್ದ ಮರಗಳನ್ನು ಮತ್ತು ಅವುಗಳ ಗೆಲ್ಲುಗಳನ್ನು ಅರಣ್ಯ ಇಲಾಖೆ ವತಿಯಿಂದ ತೆರವು ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>