<p><strong>ಮಂಗಳೂರು</strong>: ನಗರದ ಸನಾತನ ನಾಟ್ಯಾಲಯ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಆಯೋಜಿಸಿದ್ದ ‘ಸನಾತನ ಗುರುಪರಂಪರ’ ಕಾರ್ಯಕ್ರಮದಲ್ಲಿ ಕಲಾ ವಿಮರ್ಶಕಿ, ವಿದುಷಿ ಪ್ರತಿಭಾ ಎಂ.ಎಲ್.ಸಾಮಗ ಅವರಿಗೆ ಗುರು ನಮನ ಸಲ್ಲಿಸಲಾಯಿತು.</p>.<p>ಉಳ್ಳಾಲ ನೃತ್ಯಸೌರಭ ನಾಟ್ಯಾಲಯದ ಗುರು, ವಿದ್ವಾನ್ ಪ್ರಮೋದ್ ಉಳ್ಳಾಲ್ ಅವರಿಗೆ ಗುರುಪ್ರೇರಣ ಗೌರವ ಸಲ್ಲಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರತಿಭಾ ಅವರು ‘ಹಿರಿಯರ ಪರಂಪರೆ ಅನುಸರಿಸಿಕೊಂಡು ಬರುವ ಸನಾತನ ನಾಟ್ಯಾಲಯದ ನಡೆ ಶ್ಲಾಘನೀಯ. ಹೊಸ ತಲೆಮಾರಿನ ಮಕ್ಕಳು ಪ್ರತಿಭಾವಂತರಿದ್ದು ಸಾಧನೆಯ ಪಥದಲ್ಲಿ ನಡೆಯುವಂತಾಗಲಿ’ ಎಂದರು.</p>.<p>ಉಡುಪಿಯ ಸಮೂಹದ ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಉದ್ಯಾವರ ಮಾಧವ ಆಚಾರ್ಯ ಅವರ ಗುರುಸಂಸ್ಮರಣೆಯನ್ನು ಧಾರ್ಮಿಕ ಚಿಂತಕ ಎನ್.ಆರ್. ದಾಮೋದರ ಶರ್ಮಾ ಬಾರ್ಕೂರು ನಡೆಸಿಕೊಟ್ಟರು. ವಿದುಷಿ ಭ್ರಮರಿ ಶಿವಪ್ರಕಾಶ್ ಇದ್ದರು. ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು. </p>.<p>ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶೀಲತಾ ನಾಗರಾಜ್ ಅವರ ಶಿಷ್ಯೆಯರಾದ ಸಂಜನಾ ಭರತ್, ವೈಶ್ಮ ಶೆಟ್ಟಿ, ಕಾವ್ಯಶ್ರೀ, ದೀಪ್ತಿ ಐ, ಅಂಕಿತ ಬದಿಯಡ್ಕ ಮತ್ತು ಸಾಹಿತ್ಯ ಸುರೇಶ್ ಭರತನಾಟ್ಯ ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದ ಸನಾತನ ನಾಟ್ಯಾಲಯ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಆಯೋಜಿಸಿದ್ದ ‘ಸನಾತನ ಗುರುಪರಂಪರ’ ಕಾರ್ಯಕ್ರಮದಲ್ಲಿ ಕಲಾ ವಿಮರ್ಶಕಿ, ವಿದುಷಿ ಪ್ರತಿಭಾ ಎಂ.ಎಲ್.ಸಾಮಗ ಅವರಿಗೆ ಗುರು ನಮನ ಸಲ್ಲಿಸಲಾಯಿತು.</p>.<p>ಉಳ್ಳಾಲ ನೃತ್ಯಸೌರಭ ನಾಟ್ಯಾಲಯದ ಗುರು, ವಿದ್ವಾನ್ ಪ್ರಮೋದ್ ಉಳ್ಳಾಲ್ ಅವರಿಗೆ ಗುರುಪ್ರೇರಣ ಗೌರವ ಸಲ್ಲಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರತಿಭಾ ಅವರು ‘ಹಿರಿಯರ ಪರಂಪರೆ ಅನುಸರಿಸಿಕೊಂಡು ಬರುವ ಸನಾತನ ನಾಟ್ಯಾಲಯದ ನಡೆ ಶ್ಲಾಘನೀಯ. ಹೊಸ ತಲೆಮಾರಿನ ಮಕ್ಕಳು ಪ್ರತಿಭಾವಂತರಿದ್ದು ಸಾಧನೆಯ ಪಥದಲ್ಲಿ ನಡೆಯುವಂತಾಗಲಿ’ ಎಂದರು.</p>.<p>ಉಡುಪಿಯ ಸಮೂಹದ ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಉದ್ಯಾವರ ಮಾಧವ ಆಚಾರ್ಯ ಅವರ ಗುರುಸಂಸ್ಮರಣೆಯನ್ನು ಧಾರ್ಮಿಕ ಚಿಂತಕ ಎನ್.ಆರ್. ದಾಮೋದರ ಶರ್ಮಾ ಬಾರ್ಕೂರು ನಡೆಸಿಕೊಟ್ಟರು. ವಿದುಷಿ ಭ್ರಮರಿ ಶಿವಪ್ರಕಾಶ್ ಇದ್ದರು. ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು. </p>.<p>ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶೀಲತಾ ನಾಗರಾಜ್ ಅವರ ಶಿಷ್ಯೆಯರಾದ ಸಂಜನಾ ಭರತ್, ವೈಶ್ಮ ಶೆಟ್ಟಿ, ಕಾವ್ಯಶ್ರೀ, ದೀಪ್ತಿ ಐ, ಅಂಕಿತ ಬದಿಯಡ್ಕ ಮತ್ತು ಸಾಹಿತ್ಯ ಸುರೇಶ್ ಭರತನಾಟ್ಯ ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>