<p><strong>ಬಂಟ್ವಾಳ</strong>: ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ ಅವರು ‘108 ದಿನ 108 ಕ್ಷೇತ್ರ ಪ್ರದಕ್ಷಿಣೆ’ ಕಾರ್ಯಕ್ರಮ ಪ್ರಯುಕ್ತ ಸೋಮವಾರ ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಳಕ್ಕೆ ಔಷಧೀಯ ಗಿಡ ವಿತರಿಸಿದರು.</p>.<p>ದೇಶದಲ್ಲಿ ಮತಾಂತರಕ್ಕೆ ತಡೆ ಮತ್ತು ಸೈನಿಕರಿಗೆ ಶಕ್ತಿ ನೀಡುವುದಕ್ಕಾಗಿ ಶಂಕರಪುರ ದ್ವಾರಕಾಮಯಿ ಮಠವು ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.</p>.<p>ಜುಲೈ 19ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಈಗಾಗಲೇ 38 ಕ್ಷೇತ್ರಗಳ ಪ್ರದಕ್ಷಿಣೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.</p>.<p>ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಪ್ರಮುಖರಾದ ಯಶವಂತ ಪೊಳಲಿ, ವೀಣಾ ಶೆಟ್ಟಿ, ಸತೀಶ್, ನಾಗೇಶ ಆದ್ಯಪಾಡಿ, ಭಾಸ್ಕರ ಎಸ್.ಎಡಪದವು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ ಅವರು ‘108 ದಿನ 108 ಕ್ಷೇತ್ರ ಪ್ರದಕ್ಷಿಣೆ’ ಕಾರ್ಯಕ್ರಮ ಪ್ರಯುಕ್ತ ಸೋಮವಾರ ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಳಕ್ಕೆ ಔಷಧೀಯ ಗಿಡ ವಿತರಿಸಿದರು.</p>.<p>ದೇಶದಲ್ಲಿ ಮತಾಂತರಕ್ಕೆ ತಡೆ ಮತ್ತು ಸೈನಿಕರಿಗೆ ಶಕ್ತಿ ನೀಡುವುದಕ್ಕಾಗಿ ಶಂಕರಪುರ ದ್ವಾರಕಾಮಯಿ ಮಠವು ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.</p>.<p>ಜುಲೈ 19ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಈಗಾಗಲೇ 38 ಕ್ಷೇತ್ರಗಳ ಪ್ರದಕ್ಷಿಣೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.</p>.<p>ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಪ್ರಮುಖರಾದ ಯಶವಂತ ಪೊಳಲಿ, ವೀಣಾ ಶೆಟ್ಟಿ, ಸತೀಶ್, ನಾಗೇಶ ಆದ್ಯಪಾಡಿ, ಭಾಸ್ಕರ ಎಸ್.ಎಡಪದವು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>