<p><strong>ಮಂಗಳೂರು</strong>: ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಲು ಪಾಲಿಕೆಯು ‘ಟೈಗರ್’ ಕಾರ್ಯಾಚರಣೆ ನಡೆಸುವ ಹೇಳಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘ ಖಂಡನೆ ವ್ಯಕ್ತಪಡಿಸಿದೆ.</p>.<p>‘ಪಾಲಿಕೆಯವರೇ ಪ್ರಧಾನಮಂತ್ರಿ ಸ್ವ–ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ವಿತರಿಸಿ, ಈಗ ಅಂಗಡಿ ತೆರವು ಗೊಳಿಸಲು ಹೊರಟಿರುವುದು ಯಾವ ನ್ಯಾಯ‘ ಎಂದು ಸಂಘವು ಪ್ರಶ್ನಿಸಿದೆ.</p>.<p>‘2014ರ ಬೀದಿ ಬದಿ ವ್ಯಾಪಾರಸ್ಥರ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆಯನ್ವಯ ಬೀದಿ ಬದಿ ವ್ಯಾಪಾರಿಗಳಿಗೆ ಪಾಲಿಕೆ ಸವಲತ್ತು ನೀಡಿಲ್ಲ. ಪಟ್ಟಣ ವ್ಯಾಪಾರ ಸಮಿತಿಯನ್ನು ರಚಿಸಿದ್ದರೂ ಅದು ಮೂರು ತಿಂಗಳಿಗೊಮ್ಮೆ ಸಭೆ ನಡೆಸುತ್ತಿಲ್ಲ. ನಗರದಲ್ಲಿ 667 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣಪತ್ರ ನೀಡಬೇಕೆಂದು ತೀರ್ಮಾನವಾಗಿದ್ದರೂ ಜಾರಿಯಾಗಿಲ್ಲ. ಬೀದಿ ಬದಿ ವ್ಯಾಪಾರ ವಲಯವನ್ನೂ ನಿರ್ಮಿಸಿಲ್ಲ.’</p>.<p>‘ಬೀದಿ ಬದಿ ಅಂಗಡಿಗಳ ತೆರವಿಗೆ ಮುನ್ನ ಪಟ್ಟಣ ವ್ಯಾಪಾರ ಸಮಿತಿ ಮುಂದೆ ಈ ಬಗ್ಗೆ ಪ್ರಸ್ತಾಪವನ್ನು ಇಡಬೇಕು. ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳುವ ಹಕ್ಕು ಪಾಲಿಕೆಗಿಲ್ಲ. ಇಂತಹ ದುಸ್ಸಾಹಸಕ್ಕೆ ಕೈ ಹಾಕಿದರೆ ನಾವು ಪ್ರತಿಭಟಿಸುತ್ತೇವೆ’ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಮುಸ್ತಾಫ ಹಾಗೂ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಲು ಪಾಲಿಕೆಯು ‘ಟೈಗರ್’ ಕಾರ್ಯಾಚರಣೆ ನಡೆಸುವ ಹೇಳಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘ ಖಂಡನೆ ವ್ಯಕ್ತಪಡಿಸಿದೆ.</p>.<p>‘ಪಾಲಿಕೆಯವರೇ ಪ್ರಧಾನಮಂತ್ರಿ ಸ್ವ–ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ವಿತರಿಸಿ, ಈಗ ಅಂಗಡಿ ತೆರವು ಗೊಳಿಸಲು ಹೊರಟಿರುವುದು ಯಾವ ನ್ಯಾಯ‘ ಎಂದು ಸಂಘವು ಪ್ರಶ್ನಿಸಿದೆ.</p>.<p>‘2014ರ ಬೀದಿ ಬದಿ ವ್ಯಾಪಾರಸ್ಥರ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆಯನ್ವಯ ಬೀದಿ ಬದಿ ವ್ಯಾಪಾರಿಗಳಿಗೆ ಪಾಲಿಕೆ ಸವಲತ್ತು ನೀಡಿಲ್ಲ. ಪಟ್ಟಣ ವ್ಯಾಪಾರ ಸಮಿತಿಯನ್ನು ರಚಿಸಿದ್ದರೂ ಅದು ಮೂರು ತಿಂಗಳಿಗೊಮ್ಮೆ ಸಭೆ ನಡೆಸುತ್ತಿಲ್ಲ. ನಗರದಲ್ಲಿ 667 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣಪತ್ರ ನೀಡಬೇಕೆಂದು ತೀರ್ಮಾನವಾಗಿದ್ದರೂ ಜಾರಿಯಾಗಿಲ್ಲ. ಬೀದಿ ಬದಿ ವ್ಯಾಪಾರ ವಲಯವನ್ನೂ ನಿರ್ಮಿಸಿಲ್ಲ.’</p>.<p>‘ಬೀದಿ ಬದಿ ಅಂಗಡಿಗಳ ತೆರವಿಗೆ ಮುನ್ನ ಪಟ್ಟಣ ವ್ಯಾಪಾರ ಸಮಿತಿ ಮುಂದೆ ಈ ಬಗ್ಗೆ ಪ್ರಸ್ತಾಪವನ್ನು ಇಡಬೇಕು. ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳುವ ಹಕ್ಕು ಪಾಲಿಕೆಗಿಲ್ಲ. ಇಂತಹ ದುಸ್ಸಾಹಸಕ್ಕೆ ಕೈ ಹಾಕಿದರೆ ನಾವು ಪ್ರತಿಭಟಿಸುತ್ತೇವೆ’ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಮುಸ್ತಾಫ ಹಾಗೂ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>