<p>ಮಂಗಳೂರು: ಅವಕಾಶ ವಂಚಿತ ಮಹಿಳೆಯರ ಪ್ರೋತ್ಸಾಹಕ್ಕಾಗಿ ಮಹಿಳಾ ದಿನ ಆಚರಣೆ ಮಾಡುವ ಅಗತ್ಯವಿದೆ. ಇದೇ ಸಂದರ್ಭದಲ್ಲಿ ಪ್ರತಿ ಮಹಿಳೆಯೂ ತನಗೆ ತಾನೇ ಪ್ರೋತ್ಸಾಹಕಿ ಆಗಬೇಕು ಎಂದು ಯೆನೆಪೋಯ ವಿಶ್ವವಿದ್ಯಾನಿಲಯ ಸಂಶೋಧನಾ ಕೇಂದ್ರದ ನಿರ್ದೇಶಕಿ ರೇಖಾ ಸಲಹೆ ನೀಡಿದರು.</p>.<p>ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಹಿಳಾ ವೇದಿಕೆ, ಮಹಿಳಾ ಘಟಕ, ಸ್ಪರ್ಶ್ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಅಸುರಕ್ಷತೆ, ಪೂರ್ವಾಗ್ರಹ, ಸಮಾಜದ ಬಗೆಗಿನ ಭಯದಿಂದ ಮಹಿಳೆ ಮುಖ್ಯವಾಹಿನಿಗೆ ಬರಲು ಹಿಂದೇಟು ಹಾಕುತ್ತಾಳೆ. ಆದ್ದರಿಂದ ಆತ್ಮಶಕ್ತಿಯನ್ನು ಅರಿಯಲು ಪ್ರತಿ ಮಹಿಳೆ ಮುಂದಾಗಬೇಕು. ಭಾವನಾತ್ಮಕ ಶಾಂತತೆ ಕಾಯ್ದುಕೊಂಡು ಅಬಲೆ ಎಂಬ ಭಾವನೆಯಿಂದ ಹೊರಬರಬೇಕು ಎಂದು ಅವರು ಹೇಳಿದರು.</p>.<p>ಸಾಹಿತಿ ಭುವನೇಶ್ವರಿ ಹೆಗ್ಡೆ, ಮಹಿಳೆ ತನ್ನಷ್ಟಕ್ಕೆ ತಾನು ಸಂತೋಷವಾಗಿರಬೇಕು. ತನ್ನ ಪಾಲಿನ ಕರ್ತವ್ಯವನ್ನು ಪಾಲಿಸಿಕೊಂಡು ಬದುಕು ನಡೆಸಿದಾಗ ಸಂಕಟ ಸಮೀಪ ಸುಳಿಯುವುದಿಲ್ಲ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ, ಮಹಿಳಾ ಘಟಕದ ಸಂಚಾಲಕಿ ಶೋಭಾ, ಮಹಿಳಾ ವೇದಿಕೆಯ ಸಂಚಾಲಕಿ ಭಾರತಿ ಪ್ರಕಾಶ್ ಇದ್ದರು. ಭುವನೇಶ್ವರಿ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಅವಕಾಶ ವಂಚಿತ ಮಹಿಳೆಯರ ಪ್ರೋತ್ಸಾಹಕ್ಕಾಗಿ ಮಹಿಳಾ ದಿನ ಆಚರಣೆ ಮಾಡುವ ಅಗತ್ಯವಿದೆ. ಇದೇ ಸಂದರ್ಭದಲ್ಲಿ ಪ್ರತಿ ಮಹಿಳೆಯೂ ತನಗೆ ತಾನೇ ಪ್ರೋತ್ಸಾಹಕಿ ಆಗಬೇಕು ಎಂದು ಯೆನೆಪೋಯ ವಿಶ್ವವಿದ್ಯಾನಿಲಯ ಸಂಶೋಧನಾ ಕೇಂದ್ರದ ನಿರ್ದೇಶಕಿ ರೇಖಾ ಸಲಹೆ ನೀಡಿದರು.</p>.<p>ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಹಿಳಾ ವೇದಿಕೆ, ಮಹಿಳಾ ಘಟಕ, ಸ್ಪರ್ಶ್ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಅಸುರಕ್ಷತೆ, ಪೂರ್ವಾಗ್ರಹ, ಸಮಾಜದ ಬಗೆಗಿನ ಭಯದಿಂದ ಮಹಿಳೆ ಮುಖ್ಯವಾಹಿನಿಗೆ ಬರಲು ಹಿಂದೇಟು ಹಾಕುತ್ತಾಳೆ. ಆದ್ದರಿಂದ ಆತ್ಮಶಕ್ತಿಯನ್ನು ಅರಿಯಲು ಪ್ರತಿ ಮಹಿಳೆ ಮುಂದಾಗಬೇಕು. ಭಾವನಾತ್ಮಕ ಶಾಂತತೆ ಕಾಯ್ದುಕೊಂಡು ಅಬಲೆ ಎಂಬ ಭಾವನೆಯಿಂದ ಹೊರಬರಬೇಕು ಎಂದು ಅವರು ಹೇಳಿದರು.</p>.<p>ಸಾಹಿತಿ ಭುವನೇಶ್ವರಿ ಹೆಗ್ಡೆ, ಮಹಿಳೆ ತನ್ನಷ್ಟಕ್ಕೆ ತಾನು ಸಂತೋಷವಾಗಿರಬೇಕು. ತನ್ನ ಪಾಲಿನ ಕರ್ತವ್ಯವನ್ನು ಪಾಲಿಸಿಕೊಂಡು ಬದುಕು ನಡೆಸಿದಾಗ ಸಂಕಟ ಸಮೀಪ ಸುಳಿಯುವುದಿಲ್ಲ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ, ಮಹಿಳಾ ಘಟಕದ ಸಂಚಾಲಕಿ ಶೋಭಾ, ಮಹಿಳಾ ವೇದಿಕೆಯ ಸಂಚಾಲಕಿ ಭಾರತಿ ಪ್ರಕಾಶ್ ಇದ್ದರು. ಭುವನೇಶ್ವರಿ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>