<p><strong>ಮಂಗಳೂರು:</strong> ಪರಿಪೂರ್ಣ ಕಲೆ ಎಂದೇ ಕರೆಯಲಾಗುವ ಯಕ್ಷಗಾನಕ್ಕೆ ಅದರ ಅಂತಃಸತ್ವವೇ ಶ್ರೀರಕ್ಷೆಯಾಗಿದೆ ಎಂದು ಪುತ್ತೂರಿನ ವಕೀಲ ಮಹೇಶ್ ಕಜೆ ಅಭಿಪ್ರಾಯಪಟ್ಟರು. </p>.<p>ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಆಯೋಜಿಸಿರುವ ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ‘ಯಕ್ಷೋತ್ಸವ’ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯಕ್ಷಗಾನಕ್ಕೆ ಸ್ವಯಂ ಪ್ರಭೆ ಇದೆ. ಆದ್ದರಿಂದಲೇ ವಿದ್ಯಾರ್ಥಿಗಳ ಸ್ಪರ್ಧೆಯಾಗಿರುವ ಯಕ್ಷೋತ್ಸವ ಇನ್ನು ಕೂಡ ಮುಂದುವರಿಯುತ್ತ ಬಂದಿದೆ. ಸನಾತನತ್ವ ಇರುವುದರಿಂದ ಅದು ಎಲ್ಲ ದಾಳಿಗಳನ್ನು ಮೀರಿ ನಿಂತು ಮೂಲಅಸ್ತಿತ್ವವನ್ನು ಉಳಿಸಿಕೊಂಡು ಬೆಳೆದು ಬಂದಿದೆ ಎಂದು ಅವರು ಹೇಳಿದರು.</p>.<p>ಎಸ್ಡಿಎಂ ಕಾನೂನು ಕಾಲೇಜಿನ ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದೇವರಾಜ್ ಕೆ ಮತ್ತು ಯಕ್ಷೋತ್ಸವದ ನಿಕಟಪೂರ್ವ ಸಂಚಾಲಕ ನರೇಶ್ ಮಲ್ಲಿಗೆಮಾಡು ಮಾತನಾಡಿದರು.</p>.<p>ಎಸ್ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ತಾರಾನಾಥ ಅಧ್ಯಕ್ಷತೆ ವಹಿಸಿದ್ದರು. ಯಕ್ಷೋತ್ಸವದ ಸಂಚಾಲಕ ಪುಷ್ಪರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಲೇಖಾ ಸ್ವಾಗತಿಸಿದರು.</p>.<p>50ನೇ ವರ್ಷ ಆಚರಿಸುತ್ತಿರುವ ಯಕ್ಷೋತ್ಸವದ ಈ ಬಾರಿಯ ಸ್ಪರ್ಧೆಯಲ್ಲಿ 11 ಕಾಲೇಜುಗಳ ತಂಡಗಳು ಪಾಲ್ಗೊಂಡಿವೆ. ಇದೇ 25ರಂದು ಸ್ಪರ್ಧೆ ಮುಕ್ತಾಯಗೊಳ್ಳಿದೆ. ತೀರ್ಪುಗಾರರಾಗಿ ಜಯಪ್ರಕಾಶ್ ಶೆಟ್ಟಿ, ಉಬರಡ್ಕ ಉಮೇಶ್ ಶೆಟ್ಟಿ ಮತ್ತು ರಮೇಶ್ ಆಚಾರ್ಯ ಪಾಲ್ಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಪರಿಪೂರ್ಣ ಕಲೆ ಎಂದೇ ಕರೆಯಲಾಗುವ ಯಕ್ಷಗಾನಕ್ಕೆ ಅದರ ಅಂತಃಸತ್ವವೇ ಶ್ರೀರಕ್ಷೆಯಾಗಿದೆ ಎಂದು ಪುತ್ತೂರಿನ ವಕೀಲ ಮಹೇಶ್ ಕಜೆ ಅಭಿಪ್ರಾಯಪಟ್ಟರು. </p>.<p>ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಆಯೋಜಿಸಿರುವ ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ‘ಯಕ್ಷೋತ್ಸವ’ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯಕ್ಷಗಾನಕ್ಕೆ ಸ್ವಯಂ ಪ್ರಭೆ ಇದೆ. ಆದ್ದರಿಂದಲೇ ವಿದ್ಯಾರ್ಥಿಗಳ ಸ್ಪರ್ಧೆಯಾಗಿರುವ ಯಕ್ಷೋತ್ಸವ ಇನ್ನು ಕೂಡ ಮುಂದುವರಿಯುತ್ತ ಬಂದಿದೆ. ಸನಾತನತ್ವ ಇರುವುದರಿಂದ ಅದು ಎಲ್ಲ ದಾಳಿಗಳನ್ನು ಮೀರಿ ನಿಂತು ಮೂಲಅಸ್ತಿತ್ವವನ್ನು ಉಳಿಸಿಕೊಂಡು ಬೆಳೆದು ಬಂದಿದೆ ಎಂದು ಅವರು ಹೇಳಿದರು.</p>.<p>ಎಸ್ಡಿಎಂ ಕಾನೂನು ಕಾಲೇಜಿನ ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದೇವರಾಜ್ ಕೆ ಮತ್ತು ಯಕ್ಷೋತ್ಸವದ ನಿಕಟಪೂರ್ವ ಸಂಚಾಲಕ ನರೇಶ್ ಮಲ್ಲಿಗೆಮಾಡು ಮಾತನಾಡಿದರು.</p>.<p>ಎಸ್ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ತಾರಾನಾಥ ಅಧ್ಯಕ್ಷತೆ ವಹಿಸಿದ್ದರು. ಯಕ್ಷೋತ್ಸವದ ಸಂಚಾಲಕ ಪುಷ್ಪರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಲೇಖಾ ಸ್ವಾಗತಿಸಿದರು.</p>.<p>50ನೇ ವರ್ಷ ಆಚರಿಸುತ್ತಿರುವ ಯಕ್ಷೋತ್ಸವದ ಈ ಬಾರಿಯ ಸ್ಪರ್ಧೆಯಲ್ಲಿ 11 ಕಾಲೇಜುಗಳ ತಂಡಗಳು ಪಾಲ್ಗೊಂಡಿವೆ. ಇದೇ 25ರಂದು ಸ್ಪರ್ಧೆ ಮುಕ್ತಾಯಗೊಳ್ಳಿದೆ. ತೀರ್ಪುಗಾರರಾಗಿ ಜಯಪ್ರಕಾಶ್ ಶೆಟ್ಟಿ, ಉಬರಡ್ಕ ಉಮೇಶ್ ಶೆಟ್ಟಿ ಮತ್ತು ರಮೇಶ್ ಆಚಾರ್ಯ ಪಾಲ್ಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>