<p><strong>ಪುತ್ತೂರು:</strong> ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಸರ್ವೆ ಸೇತುವೆ ಬಳಿ ಮಂಜೇಶ್ವರ-ಸುಬ್ರಹ್ಮಣ್ಯ ರಸ್ತೆಯ ಪಕ್ಕದಲ್ಲಿ ಹರಿಯುವ ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾದ ಕುದ್ಮಾರು ಗ್ರಾಮದ ಯುವಕನ ಶವ ಭಾನುವಾರ ಪತ್ತೆಯಾಗಿದೆ.</p>.<p>ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಕೈಗಾರಿಕಾ ಪ್ರದೇಶದ ಮಹಿಂದ್ರಾ ಶೋರೂಮ್ ಉದ್ಯೋಗಿ, ಕಡಬ ತಾಲ್ಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡ್ಕ ನಿವಾಸಿ ಚಂದ್ರ ಗೌಡ ಅವರ ಪುತ್ರ ಸನ್ಮಿತ್ (21) ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಸೇತುವೆಯ ಪಕ್ಕದಲ್ಲಿಯೇ ಹೊಳೆಯ ತಳಭಾಗದಲ್ಲಿ ಪತ್ತೆಯಾಗಿದೆ.</p>.<p>ಭಾನುವಾರ ಬೆಳಿಗ್ಗೆ ಅಗ್ನಿ ಶಾಮಕ ಸಿಬ್ಬಂದಿ ಸನ್ಮಿತ್ಗಾಗಿ ಶೋಧ ಮುಂದುವರಿಸಿದ್ದರು. ಸಾರ್ವಜನಿಕರೂ ನದಿಭಾಗದಲ್ಲಿ ಹುಡುಕಾಟ ಆರಂಭಿಸಿದ್ದರು. ಸನ್ಮಿತ್ ಪತ್ತೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ಘಟಕದವರನ್ನೂ ಭಾನುವಾರ ಕರೆಸಿಕೊಳ್ಳಲಾಗಿತ್ತು. ರಾಜ್ಯ ವಿಪತ್ತು ನಿರ್ವಹಣಾ ಘಟಕ ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸನ್ಮಿತ್ ಅವರ ಮೃತದೇಹವನ್ನು ಪತ್ತೆ ಹಚ್ಚಿದರು.</p>.<p>ಸನ್ಮಿತ್ ಅವರು ಸೇತುವೆಯಿಂದ ಹೊಳೆಗೆ ಹಾರಿದ ಭಾಗದಲ್ಲೇ ಹೊಳೆಯ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.</p>.<p>ಅಕ್ಟೋಬರ್ನಲ್ಲಿ ಬಿದ್ದು ಸನ್ಮಿತ್ ತಲೆಗೆ ಏಟಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಆ ಬಳಿಕ ಮರೆವಿನ ಸಮಸ್ಯೆ ಎದುರಾಗಿತ್ತು. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಸರ್ವೆ ಸೇತುವೆ ಬಳಿ ಮಂಜೇಶ್ವರ-ಸುಬ್ರಹ್ಮಣ್ಯ ರಸ್ತೆಯ ಪಕ್ಕದಲ್ಲಿ ಹರಿಯುವ ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾದ ಕುದ್ಮಾರು ಗ್ರಾಮದ ಯುವಕನ ಶವ ಭಾನುವಾರ ಪತ್ತೆಯಾಗಿದೆ.</p>.<p>ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಕೈಗಾರಿಕಾ ಪ್ರದೇಶದ ಮಹಿಂದ್ರಾ ಶೋರೂಮ್ ಉದ್ಯೋಗಿ, ಕಡಬ ತಾಲ್ಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡ್ಕ ನಿವಾಸಿ ಚಂದ್ರ ಗೌಡ ಅವರ ಪುತ್ರ ಸನ್ಮಿತ್ (21) ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಸೇತುವೆಯ ಪಕ್ಕದಲ್ಲಿಯೇ ಹೊಳೆಯ ತಳಭಾಗದಲ್ಲಿ ಪತ್ತೆಯಾಗಿದೆ.</p>.<p>ಭಾನುವಾರ ಬೆಳಿಗ್ಗೆ ಅಗ್ನಿ ಶಾಮಕ ಸಿಬ್ಬಂದಿ ಸನ್ಮಿತ್ಗಾಗಿ ಶೋಧ ಮುಂದುವರಿಸಿದ್ದರು. ಸಾರ್ವಜನಿಕರೂ ನದಿಭಾಗದಲ್ಲಿ ಹುಡುಕಾಟ ಆರಂಭಿಸಿದ್ದರು. ಸನ್ಮಿತ್ ಪತ್ತೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ಘಟಕದವರನ್ನೂ ಭಾನುವಾರ ಕರೆಸಿಕೊಳ್ಳಲಾಗಿತ್ತು. ರಾಜ್ಯ ವಿಪತ್ತು ನಿರ್ವಹಣಾ ಘಟಕ ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸನ್ಮಿತ್ ಅವರ ಮೃತದೇಹವನ್ನು ಪತ್ತೆ ಹಚ್ಚಿದರು.</p>.<p>ಸನ್ಮಿತ್ ಅವರು ಸೇತುವೆಯಿಂದ ಹೊಳೆಗೆ ಹಾರಿದ ಭಾಗದಲ್ಲೇ ಹೊಳೆಯ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.</p>.<p>ಅಕ್ಟೋಬರ್ನಲ್ಲಿ ಬಿದ್ದು ಸನ್ಮಿತ್ ತಲೆಗೆ ಏಟಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಆ ಬಳಿಕ ಮರೆವಿನ ಸಮಸ್ಯೆ ಎದುರಾಗಿತ್ತು. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>