ರೈತರ ಆತ್ಮಹತ್ಯೆ ಪ್ರಕರಣಗಳು ಉಪವಿಭಾಗಾಧಿಕಾರಿ ಅಧ್ಯಕ್ಷತೆಯ ಸಮಿತಿ ಎದುರು ಬರುತ್ತವೆ. ಸಮಿತಿ ತೀರ್ಮಾನ ಕೈಗೊಂಡು ಪರಿಹಾರಕ್ಕೆ ಶಿಫಾರಸು ಮಾಡುತ್ತದೆ. ಬಹುತೇಕ ಪ್ರಕರಣಗಳಲ್ಲಿ ಪರಿಹಾರ ಮಂಜೂರಾಗಿದೆ.
ಶ್ರೀನಿವಾಸ್ ಚಿಂತಾಲ್ ಜಂಟಿ ಕೃಷಿ ನಿರ್ದೇಶಕ
ದಾವಣಗೆರೆ ಹರಿಹರ ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ದಾಖಲಾದ 15 ಪ್ರಕರಣಗಳಲ್ಲಿ 13ರಲ್ಲಿ ಪರಿಹಾರ ಸಿಕ್ಕಿದೆ. 2 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಸರ್ಕಾರದ ಮಾನದಂಡದ ಆಧಾರದ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ.
ದುರ್ಗಶ್ರೀ ಉಪವಿಭಾಗಾಧಿಕಾರಿ ದಾವಣಗೆರೆ
ಸರ್ಕಾರದ ಆದ್ಯತೆ ಬದಲಾಗಿದೆ. ಕೃಷಿಗೆ ಒತ್ತು ಕಡಿಮೆಯಾಗಿದೆ. ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸಿದರೆ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗುತ್ತದೆ. ಆಗ ರೈತರ ಬದುಕು ಹಸನವಾಗಲಿದ್ದು ಆತ್ಮಹತ್ಯೆ ಪ್ರಕರಣಗಳು ಕಡಿಮೆ ಆಗಲಿವೆ.
ಬಲ್ಲೂರು ರವಿಕುಮಾರ್ ರೈತ ಮುಖಂಡ
ನಿಲ್ಲದ ಕಿರುಕುಳ
ಸಾಲದ ಶೂಲಕ್ಕೆ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಸರ್ಕಾರ ನಡೆಸಿದ ಅಧ್ಯಯನಗಳಿಂದಲೇ ಬೆಳಕಿಗೆ ಬಂದಿದೆ. ಬೆಳೆ ಸಾಲ ಅಭಿವೃದ್ಧಿ ಸಾಲವನ್ನು ಬ್ಯಾಂಕ್ಗಳಿಂದ ಹೆಚ್ಚುವರಿ ಸಾಲವನ್ನು ಲೇವಾದೇವಿದಾರರಿಂದ ರೈತರು ಪಡೆಯುತ್ತಿದ್ದಾರೆ. ಸಾಲ ಮರುಪಾವತಿಗೆ ರೈತರ ಮೇಲಿನ ಒತ್ತಡ ಕಡಿಮೆಯಾಗುತ್ತಿಲ್ಲ ಎಂಬುದು ರೈತ ಸಂಘಟನೆಗೆ ಆಕ್ರೋಶ. ಬರ ಪರಿಸ್ಥಿತಿಯ ಕಾರಣಕ್ಕೆ ಸಾಲ ಮರುಪಾವತಿಗೆ ರೈತರನ್ನು ಪೀಡಿಸದಂತೆ ರಾಜ್ಯ ಸರ್ಕಾರ ಬ್ಯಾಂಕ್ಗಳಿಗೆ ಸೂಚನೆ ನೀಡಿತ್ತು. ಕಿಸಾನ್ ಸಮ್ಮಾನ್ ಬೆಳೆ ಪರಿಹಾರ ಹಾಗೂ ವಿಮೆ ಪರಿಹಾರದ ಮೊತ್ತವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದರು. ಬಹುತೇಕ ಬ್ಯಾಂಕ್ಗಳು ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡಿಲ್ಲ. ಸಾಲ ಅಥವಾ ಬಡ್ಡಿ ಪಾವತಿಗೆ ನೋಟಿಸ್ ನೀಡುವುದು ಇನ್ನೂ ಮುಂದುವರಿದಿದೆ ಎಂಬುದು ರೈತ ಸಂಘಟನೆಗಳ ಆರೋಪ.