<p><strong>ದಾವಣಗೆರೆ</strong>: ದುರ್ಗಾಂಬಿಕಾ ದೇವಿ ಜಾತ್ರೆಯ ಅಂಗವಾಗಿ ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ರಾಷ್ಟ್ರಮಟ್ಟದ ಬಯಲು ಜಂಗಿ ಕುಸ್ತಿ ಸ್ಪರ್ಧೆಯ ಅಂತಿಮ ಪಂದ್ಯ ಸಮಬಲದಲ್ಲಿ ಅಂತ್ಯ ಕಂಡಿತು.</p>.<p>ಕುಸ್ತಿಪಟುಗಳಾದ ಹರಿಯಾಣದ ವಿಕ್ಕಿ ಹಾಗೂ ಪಂಜಾಬ್ನ ಗಗನ್ ಸಿಂಗ್ ನಡುವೆ 1 ಗಂಟೆಗೂ ಹೆಚ್ಚು ಕಾಲ ನಡೆದ ಫೈನಲ್ ಪಂದ್ಯವು ಫಲಿತಾಂಶವಿಲ್ಲದೇ ಕೊನೆಗೊಂಡಿತು.</p>.<p>ಅಂತಿಮವಾಗಿ ಇಬ್ಬರನ್ನೂ ‘ವಿಜಯಿ’ಗಳು ಎಂದು ಘೋಷಿಸಿ, ಇಬ್ಬರಿಗೂ ತಲಾ ₹ 1.25 ಲಕ್ಷ ನಗದು ಬಹುಮಾನ ನೀಡಲಾಯಿತು. 2 ಕೆ.ಜಿಯ ಬೆಳ್ಳಿ ಗದೆಯನ್ನು ದೇವಸ್ಥಾನದ ಅಧೀನದಲ್ಲಿ ಇರಿಸಿಲಾಯಿತು.</p>.<p>‘ಹರಿಯಾಣದ ವಿಕ್ಕಿ ಅಂತರರಾಷ್ಟ್ರೀಯ ಕುಸ್ತಿಪಟುವಾಗಿದ್ದು, 16 ಬಾರಿ ಅಂತರರಾಷ್ಟೀಯ ಪಂದ್ಯಗಳನ್ನು ಆಡಿದ್ದು, ಹಲವು ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ’ ಎಂದು ರೆಫರಿಯೊಬ್ಬರು ತಿಳಿಸಿದರು.</p>.<p>3 ದಿನ ನಡೆದ ಕುಸ್ತಿ ಸ್ಪರ್ಧೆಯಲ್ಲಿ ದೆಹಲಿ, ಪಂಜಾಬ್, ಹರಿಯಾಣ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ 400ಕ್ಕೂ ಹೆಚ್ಚು ಕುಸ್ತಿಪಟುಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಿದರು.</p>.<p>ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯ ವೀರೇಶ್ ಪೈಲ್ವಾನ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಖಂಡೋಜಿ ಪೈಲ್ವಾನ್, ಸ್ಟಾರ್ ಮಂಜು, ಸ್ಟಾರ್ ವೀರಣ್ಣ, ಬಿ.ವೀರಣ್ಣ, ಮಹಾಂತೇಶ್ ಯಾದವ್ <br>ರೆಫರಿಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ದುರ್ಗಾಂಬಿಕಾ ದೇವಿ ಜಾತ್ರೆಯ ಅಂಗವಾಗಿ ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ರಾಷ್ಟ್ರಮಟ್ಟದ ಬಯಲು ಜಂಗಿ ಕುಸ್ತಿ ಸ್ಪರ್ಧೆಯ ಅಂತಿಮ ಪಂದ್ಯ ಸಮಬಲದಲ್ಲಿ ಅಂತ್ಯ ಕಂಡಿತು.</p>.<p>ಕುಸ್ತಿಪಟುಗಳಾದ ಹರಿಯಾಣದ ವಿಕ್ಕಿ ಹಾಗೂ ಪಂಜಾಬ್ನ ಗಗನ್ ಸಿಂಗ್ ನಡುವೆ 1 ಗಂಟೆಗೂ ಹೆಚ್ಚು ಕಾಲ ನಡೆದ ಫೈನಲ್ ಪಂದ್ಯವು ಫಲಿತಾಂಶವಿಲ್ಲದೇ ಕೊನೆಗೊಂಡಿತು.</p>.<p>ಅಂತಿಮವಾಗಿ ಇಬ್ಬರನ್ನೂ ‘ವಿಜಯಿ’ಗಳು ಎಂದು ಘೋಷಿಸಿ, ಇಬ್ಬರಿಗೂ ತಲಾ ₹ 1.25 ಲಕ್ಷ ನಗದು ಬಹುಮಾನ ನೀಡಲಾಯಿತು. 2 ಕೆ.ಜಿಯ ಬೆಳ್ಳಿ ಗದೆಯನ್ನು ದೇವಸ್ಥಾನದ ಅಧೀನದಲ್ಲಿ ಇರಿಸಿಲಾಯಿತು.</p>.<p>‘ಹರಿಯಾಣದ ವಿಕ್ಕಿ ಅಂತರರಾಷ್ಟ್ರೀಯ ಕುಸ್ತಿಪಟುವಾಗಿದ್ದು, 16 ಬಾರಿ ಅಂತರರಾಷ್ಟೀಯ ಪಂದ್ಯಗಳನ್ನು ಆಡಿದ್ದು, ಹಲವು ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ’ ಎಂದು ರೆಫರಿಯೊಬ್ಬರು ತಿಳಿಸಿದರು.</p>.<p>3 ದಿನ ನಡೆದ ಕುಸ್ತಿ ಸ್ಪರ್ಧೆಯಲ್ಲಿ ದೆಹಲಿ, ಪಂಜಾಬ್, ಹರಿಯಾಣ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ 400ಕ್ಕೂ ಹೆಚ್ಚು ಕುಸ್ತಿಪಟುಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಿದರು.</p>.<p>ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯ ವೀರೇಶ್ ಪೈಲ್ವಾನ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಖಂಡೋಜಿ ಪೈಲ್ವಾನ್, ಸ್ಟಾರ್ ಮಂಜು, ಸ್ಟಾರ್ ವೀರಣ್ಣ, ಬಿ.ವೀರಣ್ಣ, ಮಹಾಂತೇಶ್ ಯಾದವ್ <br>ರೆಫರಿಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>