ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿಯ ನಿವಾಸಿ ನಗರ ಯೋಜನೆ ಸಹಾಯಕ ನಿರ್ದೇಶಕ ಎಚ್.ಆರ್. ಕೃಷ್ಣಪ್ಪ ಅವರ ಮನೆ ಮೇಲೆ ದಾಳಿ ನಡೆಸಿದರು. ಎಚ್.ಆರ್. ಕೃಷ್ಣಪ್ಪ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಗರ ಯೋಜನೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದು, ದೇವರಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಸಂಬಂಧ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು ಅವರ ಪತ್ನಿಯ ಸಂತೇಬೆನ್ನೂರಿನ ಮನೆ ಮೇಲೂ ದಾಳಿ ನಡೆಸಿದ್ದಾರೆ.