<p><strong>ದಾವಣಗೆರೆ:</strong> ‘ಸಮಾಜದ ಸುಧಾರಣೆಗೆ ಅಷ್ಟಾಂಗ ಮಾರ್ಗಗಳನ್ನು ಬೋಧಿಸಿದ ಬುದ್ಧನ ತತ್ವಗಳಲ್ಲಿ ಅನುಭವದ ಅಮೃತವಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಕುರ್ಕಿ ಹೇಳಿದರು.</p>.<p>ನಗರದ ಡಿಆರ್ಎಂ ವಿಜ್ಞಾನ ಕಾಲೇಜಿನಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ‘ಜ್ಞಾನ ಜ್ಯೋತಿ‘ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>’ಸಿರಿವಂತಿಕೆಯನ್ನು ತ್ಯಜಿಸಿ, ಅಲೌಕಿಕ ಜ್ಞಾನದ ಕಡೆಗೆ ಗಮನ ಹರಿಸಿ ಆಸೆಯೇ ದುಃಖಕ್ಕೆ ಮೂಲ ಕಾರಣ ಎಂದ ಬುದ್ಧನ ತತ್ವಗಳನ್ನು ಪಾಲಿಸಬೇಕು‘ ಎಂದು ಸಲಹೆ ನೀಡಿದರು.</p>.<p>‘6ನೇ ಶತಮಾನದಲ್ಲೇ ಬುದ್ಧ ಬೋಧಿಸಿದ ತತ್ವಗಳು ಇಂದಿಗೂ ಪ್ರಸ್ತುತ. ಆತನ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ನಾವೆಲ್ಲರೂ ಕಂಕಣಬದ್ಧರಾಗಬೇಕು’ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ರೂಪಶ್ರೀ ಎಂ.ಪಿ. ಕಿವಿಮಾತು ಹೇಳಿದರು.</p>.<p>ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಮೊಹಮ್ಮದ್, ಪ್ರಾಧ್ಯಾಪಕರಾದ ವಸಂತನಾಯ್ಕ್ ಟಿ. ಹಾಗೂ ಬೋಧಕ–ಬೋಧಕೇತರ ಸಿಬ್ಬಂದಿ ಇದ್ದರು.</p>.<p>ವಿದ್ಯಾರ್ಥಿಗಳಾದ ಎಂ.ಜಿ. ವಿನಯಕುಮಾರ್ ಸ್ವಾಗತಿಸಿದರು. ಎಂ.ಎಂ. ಪೂರ್ಣಿಮಾ ವಂದಿಸಿದರು. ಚಂದನಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಸಮಾಜದ ಸುಧಾರಣೆಗೆ ಅಷ್ಟಾಂಗ ಮಾರ್ಗಗಳನ್ನು ಬೋಧಿಸಿದ ಬುದ್ಧನ ತತ್ವಗಳಲ್ಲಿ ಅನುಭವದ ಅಮೃತವಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಕುರ್ಕಿ ಹೇಳಿದರು.</p>.<p>ನಗರದ ಡಿಆರ್ಎಂ ವಿಜ್ಞಾನ ಕಾಲೇಜಿನಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ‘ಜ್ಞಾನ ಜ್ಯೋತಿ‘ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>’ಸಿರಿವಂತಿಕೆಯನ್ನು ತ್ಯಜಿಸಿ, ಅಲೌಕಿಕ ಜ್ಞಾನದ ಕಡೆಗೆ ಗಮನ ಹರಿಸಿ ಆಸೆಯೇ ದುಃಖಕ್ಕೆ ಮೂಲ ಕಾರಣ ಎಂದ ಬುದ್ಧನ ತತ್ವಗಳನ್ನು ಪಾಲಿಸಬೇಕು‘ ಎಂದು ಸಲಹೆ ನೀಡಿದರು.</p>.<p>‘6ನೇ ಶತಮಾನದಲ್ಲೇ ಬುದ್ಧ ಬೋಧಿಸಿದ ತತ್ವಗಳು ಇಂದಿಗೂ ಪ್ರಸ್ತುತ. ಆತನ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ನಾವೆಲ್ಲರೂ ಕಂಕಣಬದ್ಧರಾಗಬೇಕು’ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ರೂಪಶ್ರೀ ಎಂ.ಪಿ. ಕಿವಿಮಾತು ಹೇಳಿದರು.</p>.<p>ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಮೊಹಮ್ಮದ್, ಪ್ರಾಧ್ಯಾಪಕರಾದ ವಸಂತನಾಯ್ಕ್ ಟಿ. ಹಾಗೂ ಬೋಧಕ–ಬೋಧಕೇತರ ಸಿಬ್ಬಂದಿ ಇದ್ದರು.</p>.<p>ವಿದ್ಯಾರ್ಥಿಗಳಾದ ಎಂ.ಜಿ. ವಿನಯಕುಮಾರ್ ಸ್ವಾಗತಿಸಿದರು. ಎಂ.ಎಂ. ಪೂರ್ಣಿಮಾ ವಂದಿಸಿದರು. ಚಂದನಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>