<p>ಮಾಯಕೊಂಡ: ಇಲ್ಲಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ದಿನೇ ದಿನೇ ಜನಸಂದಣಿ ಹೆಚ್ಚುತ್ತಿದ್ದು, ಗ್ರಾಹಕರಿಗೆ ಬ್ಯಾಂಕ್ ವ್ಯವಹಾರ ಕಷ್ಟವಾಗುತ್ತಿದೆ. ಶೀಘ್ರ ಸುಗಮ ವ್ಯವಹಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಉಳ್ಳಾಗಡ್ಡೆ ಲಕ್ಷ್ಮಣ್ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p>‘ಗ್ರಾಮದಲ್ಲಿನ ಕೆನರಾ ಬ್ಯಾಂಕ್ ಶಾಖೆಗೆ ಗ್ರಾಹಕರು ಬಂದರೆ ಆ ದಿನದ ಬೇರೆ ಕೆಲಸಗಳನ್ನು ಸಂಪೂರ್ಣ ಬದಿಗಿಟ್ಟು ಬರಬೇಕಿದೆ. ಈ ಭಾಗದಲ್ಲಿ ಬಹುತೇಕ ಕೂಲಿಕಾರರೇ ಇರುವುದರಿಂದ ಬ್ಯಾಂಕ್ನ ವ್ಯವಹಾರಕ್ಕಾಗಿ ತಮ್ಮ ಕೂಲಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಜನಸಂದಣಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಬ್ಯಾಂಕ್ನ ಸಿಬ್ಬಂದಿ ವಿಫಲರಾಗಿದ್ದಾರೆ. ನಿತ್ಯವೂ ಗ್ರಾಹಕರು ಹಾಗೂ ಸಿಬ್ಬಂದಿ ನಡುವೆ ಜಗಳ ತಪ್ಪಿದ್ದಲ್ಲ’ ಎಂದು ದೂರಿದರು.</p>.<p>‘ಶಾಖೆಯಲ್ಲಿದ್ದ ವ್ಯವಸ್ಥಾಪಕರು ವರ್ಗಾವಣೆಯಾಗಿದ್ದು, ಆ ಸ್ಥಾನಕ್ಕೆ ಬೇರೊಬ್ಬರನ್ನು ಶೀಘ್ರ ನೇಮಿಸಬೇಕು. ಜೊತೆಗೆ ಹಣ ಪಾವತಿ ಹಾಗೂ ಹಣ ಬಿಡಿಸಿಕೊಳ್ಳಲು ಒಂದೇ ಕೌಂಟರ್ ಬಳಸಲಾಗುತ್ತಿದೆ. ಶಾಖೆಯಲ್ಲಿ ತ್ವರಿತವಾಗಿ ಎರಡು ಕೌಂಟರ್ ತೆರೆಯಬೇಕು. ಆಗ ಜನಸಂದಣಿ ಕೊಂಚ ತಗ್ಗಲಿದೆ. ಶೀಘ್ರ ಈ ಕೆಲಸಗಳನ್ನು ಮಾಡುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕಿದೆ’ ಎಂದು ಲಕ್ಷ್ಮಣ್ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಯಕೊಂಡ: ಇಲ್ಲಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ದಿನೇ ದಿನೇ ಜನಸಂದಣಿ ಹೆಚ್ಚುತ್ತಿದ್ದು, ಗ್ರಾಹಕರಿಗೆ ಬ್ಯಾಂಕ್ ವ್ಯವಹಾರ ಕಷ್ಟವಾಗುತ್ತಿದೆ. ಶೀಘ್ರ ಸುಗಮ ವ್ಯವಹಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಉಳ್ಳಾಗಡ್ಡೆ ಲಕ್ಷ್ಮಣ್ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p>‘ಗ್ರಾಮದಲ್ಲಿನ ಕೆನರಾ ಬ್ಯಾಂಕ್ ಶಾಖೆಗೆ ಗ್ರಾಹಕರು ಬಂದರೆ ಆ ದಿನದ ಬೇರೆ ಕೆಲಸಗಳನ್ನು ಸಂಪೂರ್ಣ ಬದಿಗಿಟ್ಟು ಬರಬೇಕಿದೆ. ಈ ಭಾಗದಲ್ಲಿ ಬಹುತೇಕ ಕೂಲಿಕಾರರೇ ಇರುವುದರಿಂದ ಬ್ಯಾಂಕ್ನ ವ್ಯವಹಾರಕ್ಕಾಗಿ ತಮ್ಮ ಕೂಲಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಜನಸಂದಣಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಬ್ಯಾಂಕ್ನ ಸಿಬ್ಬಂದಿ ವಿಫಲರಾಗಿದ್ದಾರೆ. ನಿತ್ಯವೂ ಗ್ರಾಹಕರು ಹಾಗೂ ಸಿಬ್ಬಂದಿ ನಡುವೆ ಜಗಳ ತಪ್ಪಿದ್ದಲ್ಲ’ ಎಂದು ದೂರಿದರು.</p>.<p>‘ಶಾಖೆಯಲ್ಲಿದ್ದ ವ್ಯವಸ್ಥಾಪಕರು ವರ್ಗಾವಣೆಯಾಗಿದ್ದು, ಆ ಸ್ಥಾನಕ್ಕೆ ಬೇರೊಬ್ಬರನ್ನು ಶೀಘ್ರ ನೇಮಿಸಬೇಕು. ಜೊತೆಗೆ ಹಣ ಪಾವತಿ ಹಾಗೂ ಹಣ ಬಿಡಿಸಿಕೊಳ್ಳಲು ಒಂದೇ ಕೌಂಟರ್ ಬಳಸಲಾಗುತ್ತಿದೆ. ಶಾಖೆಯಲ್ಲಿ ತ್ವರಿತವಾಗಿ ಎರಡು ಕೌಂಟರ್ ತೆರೆಯಬೇಕು. ಆಗ ಜನಸಂದಣಿ ಕೊಂಚ ತಗ್ಗಲಿದೆ. ಶೀಘ್ರ ಈ ಕೆಲಸಗಳನ್ನು ಮಾಡುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕಿದೆ’ ಎಂದು ಲಕ್ಷ್ಮಣ್ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>