<p><strong>ಚನ್ನಗಿರಿ: ‘</strong>ಪಟ್ಟಣದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ತಪ್ಪಿತಸ್ಥರನ್ನು ಯಾವ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ತಿಳಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಗೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೆ 29 ಜನರನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವವರೆಗೂ ಕಾರ್ಯಾಚರಣೆ ನಡೆಯಲಿದೆ ಎಂದರು. </p>.<p>‘ಯಾವುದೇ ವ್ಯಕ್ತಿಯನ್ನು ಬಂಧಿಸಿ ಠಾಣೆಗೆ ವಿಚಾರಣೆಗೆಂದು ಕರೆತಂದ ಸಮಯದಲ್ಲಿ ಆ ವ್ಯಕ್ತಿ ಮೃತಪಟ್ಟರೆ, ಇಲಾಖೆಯ ಮೇಲೆ ಸಂಶಯ ಬಂದು ಕುಟುಂಬದವರು ಸಿಟ್ಟಿಗೇಳುವುದು ಸಹಜ. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿ ಕಾನೂನು ಮೀರಿ ನಡೆಯುವುದು ಅಪರಾಧವಾಗಿರುತ್ತದೆ. ಆದರೆ, ನಿರಪರಾಧಿಗಳನ್ನು ಬಂಧಿಸುವುದಿಲ್ಲ’ ಎಂದರು.</p>.<p>‘ಇಸ್ಪೀಟ್, ಮಟ್ಕಾ, ಗಾಂಜಾ, ಕ್ರಿಕೆಟ್ ಬೆಟ್ಟಿಂಗ್ ಮುಂತಾದವುಗಳನ್ನು ಮಟ್ಟ ಹಾಕಲಾಗುವುದು. ಈ ಘಟನೆಗೆ ಸಂಬಂಧಪಟ್ಟಂತೆ ಸಿಐಡಿ ತನಿಖಾ ತಂಡ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸತ್ಯ ಹೊರಬೀಳಲಿದೆ. ಘಟನೆ ನಡೆದ ಸಂದರ್ಭದಲ್ಲಿ ನಾನು ರಜೆಯಲ್ಲಿದ್ದೆ. ಹಾಗಾಗಿ ಈಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ’ ಎಂದು ಹೇಳಿದರು.</p>.<p>ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಡಿವೈಎಸ್ ಪಿ ಕೆ. ಉಜ್ಜನಕೊಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ: ‘</strong>ಪಟ್ಟಣದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ತಪ್ಪಿತಸ್ಥರನ್ನು ಯಾವ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ತಿಳಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಗೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೆ 29 ಜನರನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವವರೆಗೂ ಕಾರ್ಯಾಚರಣೆ ನಡೆಯಲಿದೆ ಎಂದರು. </p>.<p>‘ಯಾವುದೇ ವ್ಯಕ್ತಿಯನ್ನು ಬಂಧಿಸಿ ಠಾಣೆಗೆ ವಿಚಾರಣೆಗೆಂದು ಕರೆತಂದ ಸಮಯದಲ್ಲಿ ಆ ವ್ಯಕ್ತಿ ಮೃತಪಟ್ಟರೆ, ಇಲಾಖೆಯ ಮೇಲೆ ಸಂಶಯ ಬಂದು ಕುಟುಂಬದವರು ಸಿಟ್ಟಿಗೇಳುವುದು ಸಹಜ. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿ ಕಾನೂನು ಮೀರಿ ನಡೆಯುವುದು ಅಪರಾಧವಾಗಿರುತ್ತದೆ. ಆದರೆ, ನಿರಪರಾಧಿಗಳನ್ನು ಬಂಧಿಸುವುದಿಲ್ಲ’ ಎಂದರು.</p>.<p>‘ಇಸ್ಪೀಟ್, ಮಟ್ಕಾ, ಗಾಂಜಾ, ಕ್ರಿಕೆಟ್ ಬೆಟ್ಟಿಂಗ್ ಮುಂತಾದವುಗಳನ್ನು ಮಟ್ಟ ಹಾಕಲಾಗುವುದು. ಈ ಘಟನೆಗೆ ಸಂಬಂಧಪಟ್ಟಂತೆ ಸಿಐಡಿ ತನಿಖಾ ತಂಡ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸತ್ಯ ಹೊರಬೀಳಲಿದೆ. ಘಟನೆ ನಡೆದ ಸಂದರ್ಭದಲ್ಲಿ ನಾನು ರಜೆಯಲ್ಲಿದ್ದೆ. ಹಾಗಾಗಿ ಈಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ’ ಎಂದು ಹೇಳಿದರು.</p>.<p>ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಡಿವೈಎಸ್ ಪಿ ಕೆ. ಉಜ್ಜನಕೊಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>