<p> ಸಾಸ್ವೆಹಳ್ಳಿ: ಸಮೀಪದ ರಾಂಪುರ ಗ್ರಾಮದ ಎ.ಕೆ. ಕಾಲೊನಿಯ ಸಮೀಪದ ತುಂಗಭದ್ರಾ ನದಿಯ ದಡದಲ್ಲಿ ಶುಕ್ರವಾರ ಮೊಸಳೆ ಕಾಣಿಸಿಕೊಂಡಿದೆ.<br><br>ಗ್ರಾಮದ ಲಕ್ಷ್ಮಣ ಎಂಬುವವರು ಬೆಳಿಗ್ಗೆ ತೋಟಕ್ಕೆ ನೀರು ಹಾಯಿಸಲು ಹೋದಾಗ ದಡದಲ್ಲಿದ್ದ ಮೊಸಳೆಯನ್ನು ನೋಡಿ ಕೂಗಿಕೊಂಡರು. ಅಕ್ಕಪಕ್ಕದ ರೈತರು ಓಡಿ ಬಂದರು. ಜನರ ಗದ್ದಲ ಹೆಚ್ಚಾದಾಗ ಮೊಸಳೆ ನದಿಗೆ ಇಳಿದು ಕಣ್ಮರೆಯಾಯಿತು.<br><br>‘ಈ ನದಿಯಲ್ಲಿ ಹಾಗೂ ಕೆಲವೊಮ್ಮೆ ಕೆಳಭಾಗದ ಮಾವಿನ ಹೋಂಡದಲ್ಲಿ ಆಗಾಗ ಮೊಸಳೆ ಕಾಣಿಸಿಕೊಳ್ಳುತ್ತಿದೆ. ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆಯವರು ಮೊಸಳೆಯನ್ನು ಹಿಡಿದು ಜನರ ಆತಂಕ ದೂರ ಮಾಡಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಸಾಸ್ವೆಹಳ್ಳಿ: ಸಮೀಪದ ರಾಂಪುರ ಗ್ರಾಮದ ಎ.ಕೆ. ಕಾಲೊನಿಯ ಸಮೀಪದ ತುಂಗಭದ್ರಾ ನದಿಯ ದಡದಲ್ಲಿ ಶುಕ್ರವಾರ ಮೊಸಳೆ ಕಾಣಿಸಿಕೊಂಡಿದೆ.<br><br>ಗ್ರಾಮದ ಲಕ್ಷ್ಮಣ ಎಂಬುವವರು ಬೆಳಿಗ್ಗೆ ತೋಟಕ್ಕೆ ನೀರು ಹಾಯಿಸಲು ಹೋದಾಗ ದಡದಲ್ಲಿದ್ದ ಮೊಸಳೆಯನ್ನು ನೋಡಿ ಕೂಗಿಕೊಂಡರು. ಅಕ್ಕಪಕ್ಕದ ರೈತರು ಓಡಿ ಬಂದರು. ಜನರ ಗದ್ದಲ ಹೆಚ್ಚಾದಾಗ ಮೊಸಳೆ ನದಿಗೆ ಇಳಿದು ಕಣ್ಮರೆಯಾಯಿತು.<br><br>‘ಈ ನದಿಯಲ್ಲಿ ಹಾಗೂ ಕೆಲವೊಮ್ಮೆ ಕೆಳಭಾಗದ ಮಾವಿನ ಹೋಂಡದಲ್ಲಿ ಆಗಾಗ ಮೊಸಳೆ ಕಾಣಿಸಿಕೊಳ್ಳುತ್ತಿದೆ. ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆಯವರು ಮೊಸಳೆಯನ್ನು ಹಿಡಿದು ಜನರ ಆತಂಕ ದೂರ ಮಾಡಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>