<p><strong>ಬಿಲ್ಲಹಳ್ಳಿ</strong> (ಚನ್ನಗಿರಿ): ‘ರಾಜ್ಯ ಸರ್ಕಾರ ಬಸವಣ್ಣ ಅವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವು ಸ್ವಾಗತಾರ್ಹವಾಗಿದೆ. ಈ ನಿಟ್ಟಿನಲ್ಲಿ ಘೋಷಣೆಯನ್ನು ಆಚರಣೆಗೆ ತರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀ ತಿಳಿಸಿದರು.</p>.<p>ತಾಲ್ಲೂಕಿನ ಬಿಲ್ಲಹಳ್ಳಿ ಗ್ರಾಮದ ಶಿವಬಸವೇಶ್ವರ ಸ್ವಾಮಿ ಗದ್ದಿಗೆ ಮಠದಲ್ಲಿ ಸೋಮವಾರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ನಿಂದ ನಡೆದ ಲಿಂ. ಶಿವಬಸವೇಶ್ವರ ಹಾಗೂ ಚನ್ನಬಸವ ಸ್ವಾಮೀಜಿಯ 12ನೇ ವರ್ಷದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. </p>.<p>‘ಇಂದಿನ ದಿನಗಳಲ್ಲಿ ಎಲ್ಲರೂ ಮನೆಯಲ್ಲಿ ಸ್ನಾನ ಮಾಡಿ ನಂತರ ದೇವಾಲಯಗಳಿಗೆ ಹೋಗಿ ದೇವರ ದರ್ಶನ ಮಾಡುತ್ತಾರೆ. ನಾವು ದೇವಾಲಯಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಏಕೆಂದರೆ ದೇಹವೇ ಒಂದು ದೇಗುಲವಾಗಿದೆ. ನಮ್ಮಲ್ಲಿರುವ ಇಷ್ಟಲಿಂಗವನ್ನು ಭಕ್ತಿಯಿಂದ ಪೂಜಿಸಿದರೆ ಸಾಕು, ದೇವರ ದರ್ಶನ ಆದಂತೆ’ ಎಂದರು. </p>.<p>‘ಬೂಟಾಟಿಕೆಯ ಪೂಜೆ– ಪುನಸ್ಕಾರ ಮಾಡಬಾರದು. ದೇಹ ನಿರ್ಮಲವಾದರೆ ಸಾಲದು, ನಮ್ಮ ಮನಸ್ಸು ನಿರ್ಮಲವಾಗಿರಬೇಕು. ಆಧ್ಮಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಉತ್ತಮ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಕಾಗ್ಮ ಸಂಸ್ಥೆ ಮಾಜಿ ಅಧ್ಯಕ್ಷ ಎಚ್.ಎಸ್. ಮಲ್ಲಿಕಾರ್ಜುನಪ್ಪ, ಪಂಕಜಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಕೆ.ಜಿ. ಸರೋಜ ನಾಗರಾಜ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಎಂ.ಯು. ಚನ್ನಬಸಪ್ಪ, ದತ್ತಿ ದಾನಿಗಳಾದ ಎಲ್.ಬಿ. ಕುಮಾರಪ್ಪ ಉಪಸ್ಥಿತರಿದ್ದರು. </p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮಲ್ಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು. ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಲ್ಲಹಳ್ಳಿ</strong> (ಚನ್ನಗಿರಿ): ‘ರಾಜ್ಯ ಸರ್ಕಾರ ಬಸವಣ್ಣ ಅವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವು ಸ್ವಾಗತಾರ್ಹವಾಗಿದೆ. ಈ ನಿಟ್ಟಿನಲ್ಲಿ ಘೋಷಣೆಯನ್ನು ಆಚರಣೆಗೆ ತರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀ ತಿಳಿಸಿದರು.</p>.<p>ತಾಲ್ಲೂಕಿನ ಬಿಲ್ಲಹಳ್ಳಿ ಗ್ರಾಮದ ಶಿವಬಸವೇಶ್ವರ ಸ್ವಾಮಿ ಗದ್ದಿಗೆ ಮಠದಲ್ಲಿ ಸೋಮವಾರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ನಿಂದ ನಡೆದ ಲಿಂ. ಶಿವಬಸವೇಶ್ವರ ಹಾಗೂ ಚನ್ನಬಸವ ಸ್ವಾಮೀಜಿಯ 12ನೇ ವರ್ಷದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. </p>.<p>‘ಇಂದಿನ ದಿನಗಳಲ್ಲಿ ಎಲ್ಲರೂ ಮನೆಯಲ್ಲಿ ಸ್ನಾನ ಮಾಡಿ ನಂತರ ದೇವಾಲಯಗಳಿಗೆ ಹೋಗಿ ದೇವರ ದರ್ಶನ ಮಾಡುತ್ತಾರೆ. ನಾವು ದೇವಾಲಯಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಏಕೆಂದರೆ ದೇಹವೇ ಒಂದು ದೇಗುಲವಾಗಿದೆ. ನಮ್ಮಲ್ಲಿರುವ ಇಷ್ಟಲಿಂಗವನ್ನು ಭಕ್ತಿಯಿಂದ ಪೂಜಿಸಿದರೆ ಸಾಕು, ದೇವರ ದರ್ಶನ ಆದಂತೆ’ ಎಂದರು. </p>.<p>‘ಬೂಟಾಟಿಕೆಯ ಪೂಜೆ– ಪುನಸ್ಕಾರ ಮಾಡಬಾರದು. ದೇಹ ನಿರ್ಮಲವಾದರೆ ಸಾಲದು, ನಮ್ಮ ಮನಸ್ಸು ನಿರ್ಮಲವಾಗಿರಬೇಕು. ಆಧ್ಮಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಉತ್ತಮ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಕಾಗ್ಮ ಸಂಸ್ಥೆ ಮಾಜಿ ಅಧ್ಯಕ್ಷ ಎಚ್.ಎಸ್. ಮಲ್ಲಿಕಾರ್ಜುನಪ್ಪ, ಪಂಕಜಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಕೆ.ಜಿ. ಸರೋಜ ನಾಗರಾಜ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಎಂ.ಯು. ಚನ್ನಬಸಪ್ಪ, ದತ್ತಿ ದಾನಿಗಳಾದ ಎಲ್.ಬಿ. ಕುಮಾರಪ್ಪ ಉಪಸ್ಥಿತರಿದ್ದರು. </p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮಲ್ಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು. ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>