<p><strong>ಶಿವಮೊಗ್ಗ:</strong> ಕೆಪಿಎಸ್ಸಿ ಹಗರಣದಲ್ಲಿ ಭಾಗಿಯಾಗಿರುವ ಸಂಸದ ಡಿ.ಕೆ.ಸುರೇಶ್ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಯಿತು.</p>.<p>ಕೆಪಿಎಸ್ಸಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಲಂಚವನ್ನು ಸಂಸದ ಡಿ.ಕೆ. ಸುರೇಶ್ ಪಡೆದಿದ್ದಾರೆ. ₹ 25 ಲಕ್ಷ ಪಡೆದಿರುವ ಬಗ್ಗೆ ಈಗಾಗಲೇ ಅಭ್ಯರ್ಥಿ ಟಿ.ಎಸ್. ಲೋಕೇಶ್ ಎಂಬುವವರು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಅವರ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಿಂದಲೇ ಆರಂಭಗೊಂಡಿದೆ ಎಂದು ಪ್ರತಿಭಟನಕಾರರು ದೂರಿದರು.</p>.<p>ಈ ಇಬ್ಬರು ಸಹೋದರರು ₹ 800 ಕೋಟಿಗೂ ಹೆಚ್ಚು ಬೇನಾಮಿ ಆಸ್ತಿ ಮಾಡಿದ್ದಾರೆ. ಐಟಿ ಮತ್ತು ಇಡಿ ದಾಳಿಯಲ್ಲಿ ₹ 200 ಕೋಟಿಗೂ ಹೆಚ್ಚು ಬೇನಾಮಿ ಆಸ್ತಿ ಪತ್ತೆಯಾಗಿದೆ ಎಂದು ದೂರಿದರು.</p>.<p>2017ರಲ್ಲಿ ಕೆಪಿಎಸ್ಸಿ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿತ್ತು. 2018ರಲ್ಲಿ ಪರೀಕ್ಷೆ ಬರೆದು 2019ರಲ್ಲಿ ಸಂದರ್ಶನ ನಿಗದಿಯಾಗಿತ್ತು. ಈ ಎಲ್ಲಾ ಪ್ರಕ್ರಿಯೆಗಳಲ್ಲಿಯೂ ಡಿ.ಕೆ. ಸುರೇಶ್ ಭಾಗಿಯಾಗಿದ್ದಾರೆ. ಲೋಕೇಶ್ ಅವರಿಗೆ ಉದ್ಯೋಗ ನೀಡುವ ಭರವಸೆ ಕೂಡ ಕೊಡಲಾಗಿತ್ತು. ಡಿ.ಕೆ. ಸುರೇಶ್ ಅವರ ಈ ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು. ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಪ್ರಮುಖರಾದ ಮೋಹನ್ ರಾವ್ ಜಾಧವ್, ಚೇತನ್, ವಿಕ್ರಂ, ಇ. ವಿಶ್ವಾಸ್, ಮುರುಗೇಶ್, ರಾಧಾ ಗುರುದತ್ತ, ಸೋಮೇಶ್ ಶೇಟ್, ಪುರುಷೋತ್ತಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕೆಪಿಎಸ್ಸಿ ಹಗರಣದಲ್ಲಿ ಭಾಗಿಯಾಗಿರುವ ಸಂಸದ ಡಿ.ಕೆ.ಸುರೇಶ್ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಯಿತು.</p>.<p>ಕೆಪಿಎಸ್ಸಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಲಂಚವನ್ನು ಸಂಸದ ಡಿ.ಕೆ. ಸುರೇಶ್ ಪಡೆದಿದ್ದಾರೆ. ₹ 25 ಲಕ್ಷ ಪಡೆದಿರುವ ಬಗ್ಗೆ ಈಗಾಗಲೇ ಅಭ್ಯರ್ಥಿ ಟಿ.ಎಸ್. ಲೋಕೇಶ್ ಎಂಬುವವರು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಅವರ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಿಂದಲೇ ಆರಂಭಗೊಂಡಿದೆ ಎಂದು ಪ್ರತಿಭಟನಕಾರರು ದೂರಿದರು.</p>.<p>ಈ ಇಬ್ಬರು ಸಹೋದರರು ₹ 800 ಕೋಟಿಗೂ ಹೆಚ್ಚು ಬೇನಾಮಿ ಆಸ್ತಿ ಮಾಡಿದ್ದಾರೆ. ಐಟಿ ಮತ್ತು ಇಡಿ ದಾಳಿಯಲ್ಲಿ ₹ 200 ಕೋಟಿಗೂ ಹೆಚ್ಚು ಬೇನಾಮಿ ಆಸ್ತಿ ಪತ್ತೆಯಾಗಿದೆ ಎಂದು ದೂರಿದರು.</p>.<p>2017ರಲ್ಲಿ ಕೆಪಿಎಸ್ಸಿ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿತ್ತು. 2018ರಲ್ಲಿ ಪರೀಕ್ಷೆ ಬರೆದು 2019ರಲ್ಲಿ ಸಂದರ್ಶನ ನಿಗದಿಯಾಗಿತ್ತು. ಈ ಎಲ್ಲಾ ಪ್ರಕ್ರಿಯೆಗಳಲ್ಲಿಯೂ ಡಿ.ಕೆ. ಸುರೇಶ್ ಭಾಗಿಯಾಗಿದ್ದಾರೆ. ಲೋಕೇಶ್ ಅವರಿಗೆ ಉದ್ಯೋಗ ನೀಡುವ ಭರವಸೆ ಕೂಡ ಕೊಡಲಾಗಿತ್ತು. ಡಿ.ಕೆ. ಸುರೇಶ್ ಅವರ ಈ ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು. ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಪ್ರಮುಖರಾದ ಮೋಹನ್ ರಾವ್ ಜಾಧವ್, ಚೇತನ್, ವಿಕ್ರಂ, ಇ. ವಿಶ್ವಾಸ್, ಮುರುಗೇಶ್, ರಾಧಾ ಗುರುದತ್ತ, ಸೋಮೇಶ್ ಶೇಟ್, ಪುರುಷೋತ್ತಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>