<p><strong>ದಾವಣಗೆರೆ</strong>: ವಂಚನೆ ಪ್ರಕರಣದಲ್ಲಿ ಸೂಕ್ತ ಕಾರ್ಯ ವಿಧಾನವನ್ನು ಪಾಲಿಸದೇ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇರೆಗೆ ನಾಲ್ವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಮಾನತು ವಾರದ ಹಿಂದೆ ಅಮಾನತು ಮಾಡಿದ್ದಾರೆ.</p>.<p>ಸಂತೇಬೆನ್ನೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ಟೆಬಲ್ ಧರ್ಮಪ್ಪ, ಕಾನ್ಸ್ಟೆಬಲ್ ಕೊಟ್ರೇಶ್, ಹೊನ್ನಾಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ದೊಡ್ಡಬಸಪ್ಪ ಹಾಗೂ ಕಾನ್ಸ್ಟೆಬಲ್ ರಾಮಚಂದ್ರಪ್ಪ ಜಿ.ಕೆ. ಅಮಾನತುಗೊಂಡವರು.</p>.<p>ನ್ಯಾಮತಿ ತಾಲೂಕಿನ ದಾನಿಹಳ್ಳಿ ಗ್ರಾಮದಲ್ಲಿನ ಕೊರಚರ ಕಾಲೊನಿಯ ರೂಪಾ ಎಂಬುವರ ಮನೆಗೆ ಈ ನಾಲ್ವರು ಪೊಲೀಸರು ಸರ್ಚ್ ವಾರೆಂಟ್ ಇಲ್ಲದೇ ಮನೆಗೆ ನುಗ್ಗಿ ಹಣ ಕೇಳಿದ್ದರು. ಆಗ ರೂಪಾ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಈ ದೂರಿನ್ವಯ ತನಿಖೆ ನಡೆಸಿದ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಎಸ್ಪಿ ಅವರಿಗೆ ವರದಿ ನೀಡಿದ್ದರು. ವರದಿಯನ್ನು ಆಧರಿಸಿ ಉಮಾ ಪ್ರಶಾಂತ್ ನಾಲ್ವರನ್ನು ಅಮಾನತು ಮಾಡಿದ್ದಾರೆ.</p>.<p>ಪತಿ ಹಾಗೂ ಮಕ್ಕಳ ಜೊತೆಯಲ್ಲಿ ಒಟ್ಟಿಗೆ ವಾಸವಿದ್ದೇವೆ. ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿ, ನನ್ನ ಹಾಗೂ ನನ್ನ ಕುಟುಂಬದವರ ಮೇಲೆ ದೌರ್ಜನ್ಯವೆಸಗಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ನನ್ನ ಹಾಗೂ ಕುಟುಂಬದವರಿಗೆ ಈ ನಾಲ್ವರು ಜೀವ ಬೆದರಿಕೆ ಹಾಕಿದ್ದಾರೆ.</p>.<p>‘ನಿನ್ನ ಮಗನ ಮೇಲೆ ದೂರು ಬಂದಿದ್ದು, ಆತನನ್ನು ವಿಚಾರಣೆ ಮಾಡಬೇಕು. ಠಾಣೆಗೆ ಕಳುಹಿಸಬೇಕು’ ಎಂದು ನಾಲ್ವರು ಒತ್ತಾಯಿಸಿದರು. ಜ.13ರಂದು ಬೆಳಿಗ್ಗೆ ಪುನಃ ಮನೆಗೆ ಬಂದು ‘ನಿನ್ನ ಮಗ ವಂಚನೆ ಮಾಡಿದ್ದಾನೆ. ಅದರ ಕುರಿತು ₹30 ಲಕ್ಷ ಸೆಟಲ್ಮೆಂಟ್ ಮಾಡಬೇಕು. ಕೂಡಲೇ ಮಗನನ್ನು ಠಾಣೆಗೆ ಕರೆದುಕೊಂಡು ಹೋಗುತ್ತೇವೆ. ನಿಮ್ಮ ಮಗ ಎಲ್ಲಿದ್ದಾನೆ ತಿಳಿಸಿ ಎಂದು ಕೇಳಿದರು. ಆ ಸಮಯದಲ್ಲಿ ನನ್ನ ಮಗ ಮನೆಯಲ್ಲಿ ಇಲ್ಲದ ಕಾರಣಕ್ಕೆ ನನ್ನ ಪತಿ ನಾಗರಾಜಪ್ಪ ಅವರನ್ನು ಕಾರಿನಲ್ಲಿ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಹೊನ್ನಾಳಿಯ ವಸತಿಗೃಹವೊಂದರಲ್ಲಿ ಚಿತ್ರಹಿಂಸೆ ಮಾಡಿ, ಪ್ರಾಣ ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ವಂಚನೆ ಪ್ರಕರಣದಲ್ಲಿ ಸೂಕ್ತ ಕಾರ್ಯ ವಿಧಾನವನ್ನು ಪಾಲಿಸದೇ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇರೆಗೆ ನಾಲ್ವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಮಾನತು ವಾರದ ಹಿಂದೆ ಅಮಾನತು ಮಾಡಿದ್ದಾರೆ.</p>.<p>ಸಂತೇಬೆನ್ನೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ಟೆಬಲ್ ಧರ್ಮಪ್ಪ, ಕಾನ್ಸ್ಟೆಬಲ್ ಕೊಟ್ರೇಶ್, ಹೊನ್ನಾಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ದೊಡ್ಡಬಸಪ್ಪ ಹಾಗೂ ಕಾನ್ಸ್ಟೆಬಲ್ ರಾಮಚಂದ್ರಪ್ಪ ಜಿ.ಕೆ. ಅಮಾನತುಗೊಂಡವರು.</p>.<p>ನ್ಯಾಮತಿ ತಾಲೂಕಿನ ದಾನಿಹಳ್ಳಿ ಗ್ರಾಮದಲ್ಲಿನ ಕೊರಚರ ಕಾಲೊನಿಯ ರೂಪಾ ಎಂಬುವರ ಮನೆಗೆ ಈ ನಾಲ್ವರು ಪೊಲೀಸರು ಸರ್ಚ್ ವಾರೆಂಟ್ ಇಲ್ಲದೇ ಮನೆಗೆ ನುಗ್ಗಿ ಹಣ ಕೇಳಿದ್ದರು. ಆಗ ರೂಪಾ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಈ ದೂರಿನ್ವಯ ತನಿಖೆ ನಡೆಸಿದ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಎಸ್ಪಿ ಅವರಿಗೆ ವರದಿ ನೀಡಿದ್ದರು. ವರದಿಯನ್ನು ಆಧರಿಸಿ ಉಮಾ ಪ್ರಶಾಂತ್ ನಾಲ್ವರನ್ನು ಅಮಾನತು ಮಾಡಿದ್ದಾರೆ.</p>.<p>ಪತಿ ಹಾಗೂ ಮಕ್ಕಳ ಜೊತೆಯಲ್ಲಿ ಒಟ್ಟಿಗೆ ವಾಸವಿದ್ದೇವೆ. ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿ, ನನ್ನ ಹಾಗೂ ನನ್ನ ಕುಟುಂಬದವರ ಮೇಲೆ ದೌರ್ಜನ್ಯವೆಸಗಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ನನ್ನ ಹಾಗೂ ಕುಟುಂಬದವರಿಗೆ ಈ ನಾಲ್ವರು ಜೀವ ಬೆದರಿಕೆ ಹಾಕಿದ್ದಾರೆ.</p>.<p>‘ನಿನ್ನ ಮಗನ ಮೇಲೆ ದೂರು ಬಂದಿದ್ದು, ಆತನನ್ನು ವಿಚಾರಣೆ ಮಾಡಬೇಕು. ಠಾಣೆಗೆ ಕಳುಹಿಸಬೇಕು’ ಎಂದು ನಾಲ್ವರು ಒತ್ತಾಯಿಸಿದರು. ಜ.13ರಂದು ಬೆಳಿಗ್ಗೆ ಪುನಃ ಮನೆಗೆ ಬಂದು ‘ನಿನ್ನ ಮಗ ವಂಚನೆ ಮಾಡಿದ್ದಾನೆ. ಅದರ ಕುರಿತು ₹30 ಲಕ್ಷ ಸೆಟಲ್ಮೆಂಟ್ ಮಾಡಬೇಕು. ಕೂಡಲೇ ಮಗನನ್ನು ಠಾಣೆಗೆ ಕರೆದುಕೊಂಡು ಹೋಗುತ್ತೇವೆ. ನಿಮ್ಮ ಮಗ ಎಲ್ಲಿದ್ದಾನೆ ತಿಳಿಸಿ ಎಂದು ಕೇಳಿದರು. ಆ ಸಮಯದಲ್ಲಿ ನನ್ನ ಮಗ ಮನೆಯಲ್ಲಿ ಇಲ್ಲದ ಕಾರಣಕ್ಕೆ ನನ್ನ ಪತಿ ನಾಗರಾಜಪ್ಪ ಅವರನ್ನು ಕಾರಿನಲ್ಲಿ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಹೊನ್ನಾಳಿಯ ವಸತಿಗೃಹವೊಂದರಲ್ಲಿ ಚಿತ್ರಹಿಂಸೆ ಮಾಡಿ, ಪ್ರಾಣ ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>