ಸೌಭಾಗ್ಯ ಅವರು ಬೇಲಿಮಲ್ಲೂರು ಗ್ರಾಮದ ಉಮಾ ಪ್ರಗತಿ ಪ್ರೌಢಶಾಲೆಯಲ್ಲಿ ಮುಖ್ಯ ಅಡುಗೆ ತಯಾರಕರಾಗಿ ಕೆಲಸ ಮಾಡುತ್ತಿದ್ದರು. ಅವರು ಗುರುವಾರ ಶಾಲೆಗೆ ರಜೆ ಹಾಕಿ ಬಿತ್ತನೆ ಕಾರ್ಯಕ್ಕೆ ಹೋಗಲು ಮನೆಯಲ್ಲಿಯೇ ಇದ್ದರು. ಈ ವೇಳೆ ನೀರು ತುಂಬಿಸಲೆಂದು ಮೋಟಾರ್ ಆನ್ ಮಾಡುವಾಗ ವಿದ್ಯುತ್ ಶಾಕ್ನಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.