<p><strong>ದಾವಣಗೆರೆ:</strong> ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.</p>.<p>15 ದಿನಗಳಿಂದ ನ್ಯುಮೊನಿಯಾದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸಮಸ್ಯೆಯಿಂದ ಶನಿವಾರ ಮಧ್ಯಾಹ್ನ ನಿಧನರಾದರು.</p><p>ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಜೂನ್ 2ರಂದು ಭಾನುವಾರ ದಾವಣಗೆರೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>ರಂಗಭೂಮಿ, ಜಾನಪದ, ಸಂಶೋಧನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು ‘ಈಶ್ವರಪ್ಪ ಮೇಷ್ಟ್ರು‘ ಎಂದೇ ಹೆಸರಾಗಿದ್ದರು. 38 ವರ್ಷ ಅಧ್ಯಾಪಕರಾಗಿ ದುಡಿದಿರುವ ಇವರು ಈ ಕ್ಷೇತ್ರಗಳ ಅನುಭವವನ್ನು ಪಾಠಕ್ಕೆ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಧಾರೆ ಎರೆದಿದ್ದರು. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.</p><p>1950ರಂದು ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಜನಿಸಿದ ಇವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಸಹ್ಯಾದ್ರಿ ಕಾಲೇಜಿನಲ್ಲಿ ಪದವಿ ಪಡೆದು ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ. ಪಿಎಚ್.ಡಿ ಮುಗಿಸಿದರು. ಹುಟ್ಟಿದ್ದು, ಶಿವಮೊಗ್ಗ ಜಿಲ್ಲೆಯಾದರೂ ದಾವಣಗೆರೆ ಈಶ್ವರಪ್ಪ ಅವರ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದ್ದರು.</p><p>1987ರಿಂದ 90ರವರೆಗೆ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದರು. 2003ರಿಂದ 2006ರವರೆಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ 2007ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಮೆಂಬರ್ ಆಗಿ ಕೆಲಸ ನಿರ್ವಹಿಸಿ ಅಪಾರ ಅನುಭವಗಳಿಸಿದ್ದರು.</p><p>ಆರಂಭದಲ್ಲಿ ಡಿ.ಆರ್.ಎಂ ಕಾಲೇಜು ಆನಂತರ ಎಂ.ಎಸ್.ಬಿ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಬಳಿಕ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ‘ಪ್ರಜಾವಾಣಿ’ ಯುವ ಸಾಧಕ–2020’ಗಾಗಿ ಸಾಧಕರ ಆಯ್ಕೆಯ ತೀರ್ಪುಗಾರರಲ್ಲಿ ಒಬ್ಬರಾಗಿದ್ದರು.</p><p>ಕರ್ನಾಟಕ ನಾಟಕ ಅಕಾಡೆಮಿಯ ಗೌರವ ಫೆಲೋಶಿಪ್, ಕರ್ನಾಟಕ ಜಾನಪದ ಅಕಾಡೆಮಿಯ`ತಜ್ಞ ಪ್ರಶಸ್ತಿ’, ಕು.ಶಿ. ಹರಿದಾಸ ಭಟ್ಟ ಜಾನಪದ ಪ್ರಶಸ್ತಿ, ದಾವಣಗೆರೆ ಜಿಲ್ಲೆಯ ‘ಮಹಲಿಂಗರಂಗ’ ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘದ ‘ಶಿವಕುಮಾರ ರಂಗ ಪ್ರಶಸ್ತಿ’ಗಳು ಇವರಿಗೆ ಲಭಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.</p>.<p>15 ದಿನಗಳಿಂದ ನ್ಯುಮೊನಿಯಾದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸಮಸ್ಯೆಯಿಂದ ಶನಿವಾರ ಮಧ್ಯಾಹ್ನ ನಿಧನರಾದರು.</p><p>ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಜೂನ್ 2ರಂದು ಭಾನುವಾರ ದಾವಣಗೆರೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>ರಂಗಭೂಮಿ, ಜಾನಪದ, ಸಂಶೋಧನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು ‘ಈಶ್ವರಪ್ಪ ಮೇಷ್ಟ್ರು‘ ಎಂದೇ ಹೆಸರಾಗಿದ್ದರು. 38 ವರ್ಷ ಅಧ್ಯಾಪಕರಾಗಿ ದುಡಿದಿರುವ ಇವರು ಈ ಕ್ಷೇತ್ರಗಳ ಅನುಭವವನ್ನು ಪಾಠಕ್ಕೆ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಧಾರೆ ಎರೆದಿದ್ದರು. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.</p><p>1950ರಂದು ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಜನಿಸಿದ ಇವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಸಹ್ಯಾದ್ರಿ ಕಾಲೇಜಿನಲ್ಲಿ ಪದವಿ ಪಡೆದು ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ. ಪಿಎಚ್.ಡಿ ಮುಗಿಸಿದರು. ಹುಟ್ಟಿದ್ದು, ಶಿವಮೊಗ್ಗ ಜಿಲ್ಲೆಯಾದರೂ ದಾವಣಗೆರೆ ಈಶ್ವರಪ್ಪ ಅವರ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದ್ದರು.</p><p>1987ರಿಂದ 90ರವರೆಗೆ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದರು. 2003ರಿಂದ 2006ರವರೆಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ 2007ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಮೆಂಬರ್ ಆಗಿ ಕೆಲಸ ನಿರ್ವಹಿಸಿ ಅಪಾರ ಅನುಭವಗಳಿಸಿದ್ದರು.</p><p>ಆರಂಭದಲ್ಲಿ ಡಿ.ಆರ್.ಎಂ ಕಾಲೇಜು ಆನಂತರ ಎಂ.ಎಸ್.ಬಿ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಬಳಿಕ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ‘ಪ್ರಜಾವಾಣಿ’ ಯುವ ಸಾಧಕ–2020’ಗಾಗಿ ಸಾಧಕರ ಆಯ್ಕೆಯ ತೀರ್ಪುಗಾರರಲ್ಲಿ ಒಬ್ಬರಾಗಿದ್ದರು.</p><p>ಕರ್ನಾಟಕ ನಾಟಕ ಅಕಾಡೆಮಿಯ ಗೌರವ ಫೆಲೋಶಿಪ್, ಕರ್ನಾಟಕ ಜಾನಪದ ಅಕಾಡೆಮಿಯ`ತಜ್ಞ ಪ್ರಶಸ್ತಿ’, ಕು.ಶಿ. ಹರಿದಾಸ ಭಟ್ಟ ಜಾನಪದ ಪ್ರಶಸ್ತಿ, ದಾವಣಗೆರೆ ಜಿಲ್ಲೆಯ ‘ಮಹಲಿಂಗರಂಗ’ ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘದ ‘ಶಿವಕುಮಾರ ರಂಗ ಪ್ರಶಸ್ತಿ’ಗಳು ಇವರಿಗೆ ಲಭಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>