ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಣೇಶನ ವಿಸರ್ಜನೆ; ಪೊಲೀಸ್ ಪಥ ಸಂಚಲನ

Published : 21 ಸೆಪ್ಟೆಂಬರ್ 2024, 15:33 IST
Last Updated : 21 ಸೆಪ್ಟೆಂಬರ್ 2024, 15:33 IST
ಫಾಲೋ ಮಾಡಿ
Comments

ಹೊನ್ನಾಳಿ: ಪಟ್ಟಣದ ಹಳದಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಗೌರಿ, ಗಣೇಶನ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿರುವ ಕಾರಣ ಶನಿವಾರ ಸಂಜೆ ಪೊಲೀಸ್ ಮತ್ತು ಗೃಹದಕ್ಷಕ ದಳದಿಂದ ಪಥಸಂಚಲನ ನಡೆಸಲಾಯಿತು.

‘ಭಾನುವಾರ 12 ಗಂಟೆಗೆ ಗಣೇಶನ ಮೂರ್ತಿಯ ವಿಸರ್ಜನಾ ಮೆರವಣಿಗೆ ಆರಂಭಗೊಳ್ಳಲಿದ್ದು, ಮಹಾಲಕ್ಷ್ಮಿ ಸಾಮಿಲ್ ವೃತ್ತದಿಂದ ಹಿರೇಕಲ್ಮಠ ವೃತ್ತಕ್ಕೆ ಸಾಗಿ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕೆನರಾಬ್ಯಾಂಕ್ ಪಕ್ಕದ ರಸ್ತೆ, ಪೇಟೆ ರಸ್ತೆ ಮೂಲಕ ತುಮ್ಮಿನಕಟ್ಟೆ ವೃತ್ತಕ್ಕೆ ಬಂದು ಅಲ್ಲಿಂದ ರಾಘವೇಂದ್ರ ಸ್ವಾಮಿ ಮಠದ ಸಮೀಪದ ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ’ ಎಂದು ಸಿಪಿಐ ಸುನೀಲ್‌ಕುಮಾರ್ ಹೇಳಿದರು.

ಪೊಲೀಸ್ ಪಥಸಂಚಲನದಲ್ಲಿ ಡಿವೈಎಸ್ಪಿ, ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್, ಐವರು ಸಬ್ಇನ್‌ಸ್ಪೆಕ್ಟರ್, ಐವರು ಎಎಸ್‌ಐ ಪೊಲೀಸ್‌ ವಿವಿಧ ತುಕಡಿಗಳನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹೊನ್ನಾಳಿ ಪಟ್ಟಣದ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗೌರಿ ಗಣೇಶನ ಮೂರ್ತಿಗಳನ್ನು ಭಾನುವಾರ ವಿಸರ್ಜನೆ ಮಾಡುವ ಹಿನ್ನೆಲೆಯಲ್ಲಿ ಸಿಪಿಐ ಸುನೀಲ್‌ಕುಮಾರ್ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.

ಹೊನ್ನಾಳಿ ಪಟ್ಟಣದ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗೌರಿ ಗಣೇಶನ ಮೂರ್ತಿಗಳನ್ನು ಭಾನುವಾರ ವಿಸರ್ಜನೆ ಮಾಡುವ ಹಿನ್ನೆಲೆಯಲ್ಲಿ ಸಿಪಿಐ ಸುನೀಲ್‌ಕುಮಾರ್ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT