<p>ನ್ಯಾಮತಿ: ಪಟ್ಟಣದ ಎಚ್.ಶಿವಾನಂದಪ್ಪ ಬಡಾವಣೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊನ್ನಾಳಿ-ಚನ್ನಗಿರಿ ಉಪವಿಭಾಗಾಧಿಕಾರಿ ವಿ.ಅಭಿಷೇಕ ಈಚೆಗೆ ಭೇಟಿ ನೀಡಿದರು.</p>.<p>ವಸತಿನಿಲಯದ ವಿದ್ಯಾರ್ಥಿನಿಯರ ಸಂಖ್ಯೆ, ಊಟ-ವಸತಿ, ದಾಖಲೆಗಳ ನಿರ್ವಹಣೆ, ಆಹಾರ ಪದಾರ್ಥಗಳ ದಾಸ್ತಾನು, ಶೌಚಾಲಯ ವ್ಯವಸ್ಥೆ, ಭದ್ರತೆ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ವಸತಿನಿಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ವಸತಿ ನಿಲಯದ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು, ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗ ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.</p>.<p>ವಸತಿನಿಲಯದ ಸುತ್ತ ತಡೆಗೋಡೆ ನಿರ್ಮಾಣ ಮತ್ತು ನೇರ ರಸ್ತೆ ನಿರ್ಮಾಣ ಮಾಡಬೇಕು ಎಂದು ಹಿಂದುಳಿದ ವರ್ಗಗಳ ತಾಲ್ಲೂಕು ಕಲ್ಯಾಣ ಇಲಾಖೆ ಅಧಿಕಾರಿ ಎಂ. ಮೃತ್ಯುಂಜಯಸ್ವಾಮಿ ಮತ್ತು ನಿಲಯ ಮೇಲ್ವಿಚಾರಕಿ ಎಚ್.ಸೀಮಾ ಮನವಿ ಮಾಡಿದರು.</p>.<p>ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ಸಮಾಜ ಕಲ್ಯಾಣ ಇಲಾಖೆಯ ಎಚ್.ಎಲ್. ಉಮಾ, ಕಂದಾಯ ನಿರೀಕ್ಷಕ ವೃಷಬೇಂದ್ರಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಎಸ್.ಪಿ. ವಿಜಯಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ: ಪಟ್ಟಣದ ಎಚ್.ಶಿವಾನಂದಪ್ಪ ಬಡಾವಣೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊನ್ನಾಳಿ-ಚನ್ನಗಿರಿ ಉಪವಿಭಾಗಾಧಿಕಾರಿ ವಿ.ಅಭಿಷೇಕ ಈಚೆಗೆ ಭೇಟಿ ನೀಡಿದರು.</p>.<p>ವಸತಿನಿಲಯದ ವಿದ್ಯಾರ್ಥಿನಿಯರ ಸಂಖ್ಯೆ, ಊಟ-ವಸತಿ, ದಾಖಲೆಗಳ ನಿರ್ವಹಣೆ, ಆಹಾರ ಪದಾರ್ಥಗಳ ದಾಸ್ತಾನು, ಶೌಚಾಲಯ ವ್ಯವಸ್ಥೆ, ಭದ್ರತೆ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ವಸತಿನಿಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ವಸತಿ ನಿಲಯದ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು, ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗ ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.</p>.<p>ವಸತಿನಿಲಯದ ಸುತ್ತ ತಡೆಗೋಡೆ ನಿರ್ಮಾಣ ಮತ್ತು ನೇರ ರಸ್ತೆ ನಿರ್ಮಾಣ ಮಾಡಬೇಕು ಎಂದು ಹಿಂದುಳಿದ ವರ್ಗಗಳ ತಾಲ್ಲೂಕು ಕಲ್ಯಾಣ ಇಲಾಖೆ ಅಧಿಕಾರಿ ಎಂ. ಮೃತ್ಯುಂಜಯಸ್ವಾಮಿ ಮತ್ತು ನಿಲಯ ಮೇಲ್ವಿಚಾರಕಿ ಎಚ್.ಸೀಮಾ ಮನವಿ ಮಾಡಿದರು.</p>.<p>ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ಸಮಾಜ ಕಲ್ಯಾಣ ಇಲಾಖೆಯ ಎಚ್.ಎಲ್. ಉಮಾ, ಕಂದಾಯ ನಿರೀಕ್ಷಕ ವೃಷಬೇಂದ್ರಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಎಸ್.ಪಿ. ವಿಜಯಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>