<p>ಹರಿಹರ: ಶೋಷಣೆ ಅಥವಾ ದುರುದ್ದೇಶದಿಂದ ಮಹಿಳೆಯರು, ಮಕ್ಕಳನ್ನು ಸಾಗಿಸುವ ಮಾನವ ಕಳ್ಳ ಸಾಗಣೆ ಬಗ್ಗೆ ಎಚ್ಚರ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪದ್ಮಶ್ರೀ ಮುನ್ನೋಳಿ ಹೇಳಿದರು.</p>.<p>ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಶ್ರಯದಲ್ಲಿ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಣೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬಡವರಿಗೆ ಒಳ್ಳೆಯ ಉದ್ಯೋಗ ಕೊಡಿಸುವ ಭರವಸೆ ನೀಡಿ ಜೀತಕ್ಕೆ ಇಟ್ಟುಕೊಳ್ಳುವುದು, ಬಲವಂತವಾಗಿ ದುಡಿಸಿಕೊಳ್ಳುವುದು, ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡುವುದು, ಭಿಕ್ಷಾಟನೆಗೆ ದೂಡುವ ಕೃತ್ಯಗಳನ್ನು ಎಸಗಲಾಗುತ್ತದೆ. ಈ ಕುರಿತು ಎಚ್ಚರಿಕೆ ವಹಿಸಬೇಕು’ ಎಂದರು.</p>.<p>‘ಮೊಬೈಲ್ ಬಳಕೆ ಮಾಡುವಾಗ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸಂದೇಶಗಳಿಗೆ ಪ್ರತಿಕ್ರಿಯೆ ನೀಡದೆ ಇದ್ದರೆ ಒಳ್ಳೆಯದು. ಮೊಬೈಲ ಅನ್ನು ಹಿತ, ಮಿತವಾಗಿ ಬಳಸಬೇಕು‘ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಆನಂದ ಕುಮಾರ್ ಸಲಹೆ ನೀಡಿದರು.</p>.<p>‘ವಿದ್ಯಾರ್ಥಿಗಳು ದೇಶದೊಳಗೆ ಅಥವಾ ಹೊರ ದೇಶಗಳಲ್ಲಿ ಉದ್ಯೋಗಕ್ಕೆ ಸೇರುವ ಮುನ್ನ ಉದ್ಯೋಗ ಕೊಡಿಸುವ ಏಜೆನ್ಸಿ, ಉದ್ಯೋಗಕ್ಕೆ ಸೇರುವ ಕಂಪನಿಗಳ ಪೂರ್ವಾಪರ ಪರಿಶೀಲಿಸಬೇಕು. ತಪ್ಪಿದಲ್ಲಿ ನಾವು ಶೋಷಣೆಗೆ, ಮೋಸಕ್ಕೀಡಾಗುವ ಅಪಾಯ ಇರುತ್ತದೆ’ ಎಂದು ಸಂಪನ್ಮೂಲ ವ್ಯಕ್ತಿ ಜಿ.ಎಚ್. ಭಾಗೀರಥಿ ಹೇಳಿದರು.</p>.<p>ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಉಪ ವ್ಯವಸ್ಥಾಪಕ ಲಕ್ಷ್ಮಣನಾಯ್ಕ ಅಧ್ಯಕ್ಷತೆ ವಹಿಸಿದ್ದರು.</p>.<p>ವಕೀಲರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷೆ ಕೆ.ಎಸ್. ಶುಭಾ, ಕಾರ್ಯದರ್ಶಿ ನಾಗರಾಜ್ ಕೆ.ವಿ., ಸಂಸ್ಥೆಯ ಪ್ರಾಚಾರ್ಯ ಶಿವಕುಮಾರ್ ಕೆ.ಎಸ್. ಇದ್ದರು.</p>.<p>ವಿದ್ಯಾರ್ಥಿಗಳಾದ ಶಿವಾನಂದ್ ಬಿಜ್ಜರ್, ಪೂರ್ಣಿಮಾ, ಹನುಮಂತಪ್ಪ ಟಿ.ಎನ್., ಅವರಿಗೆ ಉತ್ತಮ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ಶೋಷಣೆ ಅಥವಾ ದುರುದ್ದೇಶದಿಂದ ಮಹಿಳೆಯರು, ಮಕ್ಕಳನ್ನು ಸಾಗಿಸುವ ಮಾನವ ಕಳ್ಳ ಸಾಗಣೆ ಬಗ್ಗೆ ಎಚ್ಚರ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪದ್ಮಶ್ರೀ ಮುನ್ನೋಳಿ ಹೇಳಿದರು.</p>.<p>ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಶ್ರಯದಲ್ಲಿ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಣೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬಡವರಿಗೆ ಒಳ್ಳೆಯ ಉದ್ಯೋಗ ಕೊಡಿಸುವ ಭರವಸೆ ನೀಡಿ ಜೀತಕ್ಕೆ ಇಟ್ಟುಕೊಳ್ಳುವುದು, ಬಲವಂತವಾಗಿ ದುಡಿಸಿಕೊಳ್ಳುವುದು, ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡುವುದು, ಭಿಕ್ಷಾಟನೆಗೆ ದೂಡುವ ಕೃತ್ಯಗಳನ್ನು ಎಸಗಲಾಗುತ್ತದೆ. ಈ ಕುರಿತು ಎಚ್ಚರಿಕೆ ವಹಿಸಬೇಕು’ ಎಂದರು.</p>.<p>‘ಮೊಬೈಲ್ ಬಳಕೆ ಮಾಡುವಾಗ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸಂದೇಶಗಳಿಗೆ ಪ್ರತಿಕ್ರಿಯೆ ನೀಡದೆ ಇದ್ದರೆ ಒಳ್ಳೆಯದು. ಮೊಬೈಲ ಅನ್ನು ಹಿತ, ಮಿತವಾಗಿ ಬಳಸಬೇಕು‘ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಆನಂದ ಕುಮಾರ್ ಸಲಹೆ ನೀಡಿದರು.</p>.<p>‘ವಿದ್ಯಾರ್ಥಿಗಳು ದೇಶದೊಳಗೆ ಅಥವಾ ಹೊರ ದೇಶಗಳಲ್ಲಿ ಉದ್ಯೋಗಕ್ಕೆ ಸೇರುವ ಮುನ್ನ ಉದ್ಯೋಗ ಕೊಡಿಸುವ ಏಜೆನ್ಸಿ, ಉದ್ಯೋಗಕ್ಕೆ ಸೇರುವ ಕಂಪನಿಗಳ ಪೂರ್ವಾಪರ ಪರಿಶೀಲಿಸಬೇಕು. ತಪ್ಪಿದಲ್ಲಿ ನಾವು ಶೋಷಣೆಗೆ, ಮೋಸಕ್ಕೀಡಾಗುವ ಅಪಾಯ ಇರುತ್ತದೆ’ ಎಂದು ಸಂಪನ್ಮೂಲ ವ್ಯಕ್ತಿ ಜಿ.ಎಚ್. ಭಾಗೀರಥಿ ಹೇಳಿದರು.</p>.<p>ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಉಪ ವ್ಯವಸ್ಥಾಪಕ ಲಕ್ಷ್ಮಣನಾಯ್ಕ ಅಧ್ಯಕ್ಷತೆ ವಹಿಸಿದ್ದರು.</p>.<p>ವಕೀಲರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷೆ ಕೆ.ಎಸ್. ಶುಭಾ, ಕಾರ್ಯದರ್ಶಿ ನಾಗರಾಜ್ ಕೆ.ವಿ., ಸಂಸ್ಥೆಯ ಪ್ರಾಚಾರ್ಯ ಶಿವಕುಮಾರ್ ಕೆ.ಎಸ್. ಇದ್ದರು.</p>.<p>ವಿದ್ಯಾರ್ಥಿಗಳಾದ ಶಿವಾನಂದ್ ಬಿಜ್ಜರ್, ಪೂರ್ಣಿಮಾ, ಹನುಮಂತಪ್ಪ ಟಿ.ಎನ್., ಅವರಿಗೆ ಉತ್ತಮ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>