<p><strong>ಹರಿಹರ:</strong> ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರದಲ್ಲಿರುವ ತಾಲ್ಲೂಕಿನ ಗುತ್ತೂರು ಗ್ರಾಮದ ಸ್ಮಶಾನ ಜಲಾವೃತವಾಗಿದ್ದು, ಗುರುವಾರ ಮೃತಪಟ್ಟ ವ್ಯಕ್ತಿಯೊಬ್ಬರು ಅಂತ್ಯಕ್ರಿಯೆಗೆ ಗ್ರಾಮಸ್ಥರು ಪರದಾಡುವಂತಾಯಿತು.</p>.<p>ಗ್ರಾಮದ ನಿವಾಸಿ ಎಚ್.ಎಂ.ಸಿ. ಮಂಜಪ್ಪ (70) ಗುರುವಾರ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ಮಾಡಬೇಕಾದ ಸ್ಮಶಾನ ಜಲಾವೃತವಾಗಿತ್ತು. ನದಿಯಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು ಪಕ್ಕದಲ್ಲಿರುವ ಸಣ್ಣ ಗುಡ್ಡದ ಮೇಲೆ ಅಂತ್ಯಕ್ರಿಯೆ ನೆರವೇರಿಸಿದರು.</p>.<p>ನದಿ ತುಂಬಿ ಹರಿಯುತ್ತಿದ್ದು, ಸ್ಮಶಾನ ಜಾಗೆಯೂ ನೀರಿನಿಂದ ಆವೃತವಾಗಿದ್ದರಿಂದ ಈಜು ಬಲ್ಲ ಕೆಲ ಯುವಕರು ಶವವನ್ನು ಹೊತ್ತುಕೊಂಡು ನದಿ ನೀರಿನಲ್ಲೇ ಸಾಗಿ ನೆರವಾದರು. ಮಹಿಳೆಯರು ಹಾಗೂ ಈಜು ಬಾರದವರು ನದಿಯ ಈ ಭಾಗದಲ್ಲಿ ನಿಂತು ಶವ ಸಂಸ್ಕಾರದ ಪ್ರಕ್ರಿಯೆ ವೀಕ್ಷಿಸಿದರು. </p>.<p><strong>ಅಕ್ರಮ ಮಣ್ಣುಗಾರಿಕೆ ಕಾರಣ:</strong></p>.<p>ಗುತ್ತೂರು ಹಾಗೂ ಸುತ್ತಲಿನ ಪ್ರದೇಶದ ನದಿ ತೀರದಲ್ಲಿ ಅಕ್ರಮವಾಗಿ ಮಣ್ಣು, ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆದಿರುವುದೇ ನದಿ ದಡದಲ್ಲಿರುವ ಸ್ಮಶಾನ ಜಲಾವೃತವಾಗಲು ಕಾರಣ. ಈಗೀಗ ನದಿ ನೀರು ಸ್ಮಶಾನಕ್ಕೇ ನುಗ್ಗುತ್ತದೆ. ಅಂತ್ಯಸಂಸ್ಕಾರಕ್ಕೆ ಬೇರೆ ಸ್ಥಳ ನಿಗದಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರದಲ್ಲಿರುವ ತಾಲ್ಲೂಕಿನ ಗುತ್ತೂರು ಗ್ರಾಮದ ಸ್ಮಶಾನ ಜಲಾವೃತವಾಗಿದ್ದು, ಗುರುವಾರ ಮೃತಪಟ್ಟ ವ್ಯಕ್ತಿಯೊಬ್ಬರು ಅಂತ್ಯಕ್ರಿಯೆಗೆ ಗ್ರಾಮಸ್ಥರು ಪರದಾಡುವಂತಾಯಿತು.</p>.<p>ಗ್ರಾಮದ ನಿವಾಸಿ ಎಚ್.ಎಂ.ಸಿ. ಮಂಜಪ್ಪ (70) ಗುರುವಾರ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ಮಾಡಬೇಕಾದ ಸ್ಮಶಾನ ಜಲಾವೃತವಾಗಿತ್ತು. ನದಿಯಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು ಪಕ್ಕದಲ್ಲಿರುವ ಸಣ್ಣ ಗುಡ್ಡದ ಮೇಲೆ ಅಂತ್ಯಕ್ರಿಯೆ ನೆರವೇರಿಸಿದರು.</p>.<p>ನದಿ ತುಂಬಿ ಹರಿಯುತ್ತಿದ್ದು, ಸ್ಮಶಾನ ಜಾಗೆಯೂ ನೀರಿನಿಂದ ಆವೃತವಾಗಿದ್ದರಿಂದ ಈಜು ಬಲ್ಲ ಕೆಲ ಯುವಕರು ಶವವನ್ನು ಹೊತ್ತುಕೊಂಡು ನದಿ ನೀರಿನಲ್ಲೇ ಸಾಗಿ ನೆರವಾದರು. ಮಹಿಳೆಯರು ಹಾಗೂ ಈಜು ಬಾರದವರು ನದಿಯ ಈ ಭಾಗದಲ್ಲಿ ನಿಂತು ಶವ ಸಂಸ್ಕಾರದ ಪ್ರಕ್ರಿಯೆ ವೀಕ್ಷಿಸಿದರು. </p>.<p><strong>ಅಕ್ರಮ ಮಣ್ಣುಗಾರಿಕೆ ಕಾರಣ:</strong></p>.<p>ಗುತ್ತೂರು ಹಾಗೂ ಸುತ್ತಲಿನ ಪ್ರದೇಶದ ನದಿ ತೀರದಲ್ಲಿ ಅಕ್ರಮವಾಗಿ ಮಣ್ಣು, ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆದಿರುವುದೇ ನದಿ ದಡದಲ್ಲಿರುವ ಸ್ಮಶಾನ ಜಲಾವೃತವಾಗಲು ಕಾರಣ. ಈಗೀಗ ನದಿ ನೀರು ಸ್ಮಶಾನಕ್ಕೇ ನುಗ್ಗುತ್ತದೆ. ಅಂತ್ಯಸಂಸ್ಕಾರಕ್ಕೆ ಬೇರೆ ಸ್ಥಳ ನಿಗದಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>