<p><strong>ನಲ್ಲೂರು (ಚನ್ನಗಿರಿ):</strong> ‘ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅನೇಕ ಮನೆಗಳಿಗೆ ಹಾನಿಯಾಗಿದೆ. ಜನರ ಸಂಕಷ್ಟಗಳಿಗೆ ತಾಲ್ಲೂಕು ಆಡಳಿತ ಸ್ಪಂದಿಸಿ, ಅವರಿಗೆ ನೆರವು ನೀಡಬೇಕು’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಸಿದ್ಧಲಿಂಗಯ್ಯ ಗಂಗಾಧರ ಮಠ್ ಸೂಚಿಸಿದರು.</p>.<p>ತಾಲ್ಲೂಕಿನ ನಲ್ಲೂರು ಗ್ರಾಮದ ನೆರೆ ಪೀಡಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳಲ್ಲಿನ ಹೂಳನ್ನು ತೆಗೆಯಬೇಕು. ಚರಂಡಿಗಳಲ್ಲಿ ಗಿಡಗಳು ಬೆಳೆದಿದ್ದರೆ ಸ್ವಚ್ಛಗೊಳಿಸಬೇಕು. ಮಳೆಗಾಲದಲ್ಲಿ ಆಯಾ ಗ್ರಾಮ ಪಂಚಾಯಿತಿಯವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಜನರಿಗೆ ಕಷ್ಟವಾಗುವುದಿಲ್ಲ. ಯಾವುದೇ ಕಾರಣಕ್ಕೂ ಉದಾಸೀನ ಮಾಡದೇ ಗ್ರಾಮದ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ನೊಂದವರಿಗೆ ನೆರವು ನೀಡುವುದು ಮಾನವೀಯತೆ. ನೊಂದವರು ಇನ್ನಷ್ಟು ನೊಂದುಕೊಳ್ಳುವಂತೆ ಅಧಿಕಾರಿಗಳು ಕಚೇರಿಗಳಿಗೆ ಅಲೆದಾಡಿಸಬಾರದು ಎಂದರು.</p>.<p>‘ಈ ಬಾರಿಯ ಮಳೆಗೆ ಇದುವರೆಗೆ 60 ಮನೆಗಳು ಬಿದ್ದಿವೆ. ಜೂನ್ ತಿಂಗಳವರೆಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ಮೊತ್ತವನ್ನು ಸಂತ್ರಸ್ತರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ. ಜುಲೈ ತಿಂಗಳಲ್ಲಿ ಬಿದ್ದಿರುವ ಮನೆಗಳಿಗೆ ಪರಿಹಾರ ನೀಡಲಾಗುವುದು’ ಎಂದು ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ ಹೇಳಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ.ಈ. ಶಿವಕುಮಾರ್, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಅಶೋಕ್ ಕುಮಾರ್, ವಕೀಲರ ಸಂಘ ತಾಲ್ಲೂಕು ಘಟಕದ ಉಪಾಧ್ಯಕ್ಷ ಬಾಬುಜಾನ್, ಕಾರ್ಯದರ್ಶಿ ಎಂ.ಎಸ್. ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಲ್ಲೂರು (ಚನ್ನಗಿರಿ):</strong> ‘ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅನೇಕ ಮನೆಗಳಿಗೆ ಹಾನಿಯಾಗಿದೆ. ಜನರ ಸಂಕಷ್ಟಗಳಿಗೆ ತಾಲ್ಲೂಕು ಆಡಳಿತ ಸ್ಪಂದಿಸಿ, ಅವರಿಗೆ ನೆರವು ನೀಡಬೇಕು’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಸಿದ್ಧಲಿಂಗಯ್ಯ ಗಂಗಾಧರ ಮಠ್ ಸೂಚಿಸಿದರು.</p>.<p>ತಾಲ್ಲೂಕಿನ ನಲ್ಲೂರು ಗ್ರಾಮದ ನೆರೆ ಪೀಡಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳಲ್ಲಿನ ಹೂಳನ್ನು ತೆಗೆಯಬೇಕು. ಚರಂಡಿಗಳಲ್ಲಿ ಗಿಡಗಳು ಬೆಳೆದಿದ್ದರೆ ಸ್ವಚ್ಛಗೊಳಿಸಬೇಕು. ಮಳೆಗಾಲದಲ್ಲಿ ಆಯಾ ಗ್ರಾಮ ಪಂಚಾಯಿತಿಯವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಜನರಿಗೆ ಕಷ್ಟವಾಗುವುದಿಲ್ಲ. ಯಾವುದೇ ಕಾರಣಕ್ಕೂ ಉದಾಸೀನ ಮಾಡದೇ ಗ್ರಾಮದ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ನೊಂದವರಿಗೆ ನೆರವು ನೀಡುವುದು ಮಾನವೀಯತೆ. ನೊಂದವರು ಇನ್ನಷ್ಟು ನೊಂದುಕೊಳ್ಳುವಂತೆ ಅಧಿಕಾರಿಗಳು ಕಚೇರಿಗಳಿಗೆ ಅಲೆದಾಡಿಸಬಾರದು ಎಂದರು.</p>.<p>‘ಈ ಬಾರಿಯ ಮಳೆಗೆ ಇದುವರೆಗೆ 60 ಮನೆಗಳು ಬಿದ್ದಿವೆ. ಜೂನ್ ತಿಂಗಳವರೆಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ಮೊತ್ತವನ್ನು ಸಂತ್ರಸ್ತರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ. ಜುಲೈ ತಿಂಗಳಲ್ಲಿ ಬಿದ್ದಿರುವ ಮನೆಗಳಿಗೆ ಪರಿಹಾರ ನೀಡಲಾಗುವುದು’ ಎಂದು ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ ಹೇಳಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ.ಈ. ಶಿವಕುಮಾರ್, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಅಶೋಕ್ ಕುಮಾರ್, ವಕೀಲರ ಸಂಘ ತಾಲ್ಲೂಕು ಘಟಕದ ಉಪಾಧ್ಯಕ್ಷ ಬಾಬುಜಾನ್, ಕಾರ್ಯದರ್ಶಿ ಎಂ.ಎಸ್. ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>