<p><strong>ಜಗಳೂರು:</strong> ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಎರಡು ಮೇವಿನ ಬಣವೆಗಳಿಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಭಸ್ಮವಾಗಿವೆ.</p>.<p>ರೈತರಾದ ಮರುಳಸಿದ್ದಪ್ಪ ಮತ್ತು ಚಂದ್ರಯ್ಯ ಎಂಬುವರಿಗೆ ಸೇರಿದ ಬೃಹತ್ ರಾಗಿ ಬಣವೆ ಮತ್ತು ಮೆಕ್ಕೆಜೋಳದ ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮಂಗಳವಾರ ರಥೋತ್ಸವ ಇದ್ದು ಭಕ್ತರು ತೇರು ಎಳೆಯುವ ಸಂದರ್ಭದಲ್ಲಿ ಬಣವೆಗಳು ಹೊತ್ತಿ ಉರಿಯತೊಡಗಿವೆ.</p>.<p>ಬೆಂಕಿಯ ಕೆನ್ನಾಲಿಗೆ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ವೇಳೆಗೆ ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.</p>.<p>ಬೆಂಕಿ ಬಿದ್ದಿದ್ದರಿಂದಾಗಿ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದೆ ಎಂದು ರೈತರಾದ ಮರುಳಸಿದ್ದಪ್ಪ ಮತ್ತು ಚಂದ್ರಯ್ಯ ತಮ್ಮ ನೋವನ್ನು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು:</strong> ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಎರಡು ಮೇವಿನ ಬಣವೆಗಳಿಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಭಸ್ಮವಾಗಿವೆ.</p>.<p>ರೈತರಾದ ಮರುಳಸಿದ್ದಪ್ಪ ಮತ್ತು ಚಂದ್ರಯ್ಯ ಎಂಬುವರಿಗೆ ಸೇರಿದ ಬೃಹತ್ ರಾಗಿ ಬಣವೆ ಮತ್ತು ಮೆಕ್ಕೆಜೋಳದ ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮಂಗಳವಾರ ರಥೋತ್ಸವ ಇದ್ದು ಭಕ್ತರು ತೇರು ಎಳೆಯುವ ಸಂದರ್ಭದಲ್ಲಿ ಬಣವೆಗಳು ಹೊತ್ತಿ ಉರಿಯತೊಡಗಿವೆ.</p>.<p>ಬೆಂಕಿಯ ಕೆನ್ನಾಲಿಗೆ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ವೇಳೆಗೆ ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.</p>.<p>ಬೆಂಕಿ ಬಿದ್ದಿದ್ದರಿಂದಾಗಿ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದೆ ಎಂದು ರೈತರಾದ ಮರುಳಸಿದ್ದಪ್ಪ ಮತ್ತು ಚಂದ್ರಯ್ಯ ತಮ್ಮ ನೋವನ್ನು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>