<p><strong>ಹೊನ್ನಾಳಿ</strong>: ಇತ್ತೀಚಿನ ದಿನಗಳಲ್ಲಿ ನದಿಗಳು ಅತ್ಯಂತ ಕಲುಷಿತವಾಗುತ್ತಿದ್ದು, ಕುಡಿಯಲೂ ಯೋಗ್ಯವಲ್ಲದ ಸ್ಥಿತಿಗೆ ತಲುಪಿವೆ. ‘ನಿರ್ಮಲ ತುಂಗಭದ್ರಾ’ ಎಂಬ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ನವೆಂಬರ್ ಮೊದಲ ವಾರದಲ್ಲಿ ಶೃಂಗೇರಿಯಿಂದ ಕಿಷ್ಕಿಂಧೆವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಡಿವಿಎಸ್ ಕಾಲೇಜಿನ ನಿವೃತ್ತ ಪಾಂಶುಪಾಲ, ಆರ್ಥಿಕ ತಜ್ಞ ಬಿ.ಎಂ. ಕುಮಾರಸ್ವಾಮಿ ಹೇಳಿದರು.</p>.<p>ಬುಧವಾರ ಹೊನ್ನಾಳಿಯ ಚನ್ನಪ್ಪಸ್ವಾಮಿ ಮಠಕ್ಕೆ ಹಾಗೂ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಗಂಗಾನದಿ ಶುದ್ಧೀಕರಣ ಕಾರ್ಯದಿಂದ ಸ್ಫೂರ್ತಿ ಪಡೆದು ನಿರ್ಮಲ ತುಂಗಭದ್ರಾ ಅಭಿಯಾನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ತುಂಗಭದ್ರಾ ನದಿ ಪಾತ್ರದ ಪರಿಸರಾಸಕ್ತರು, ಸಾಧು ಸಂತರು, ವಿದ್ಯಾರ್ಥಿಗಳು, ರೈತರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು. ಅದಕ್ಕಾಗಿ ತಾಲ್ಲೂಕಿನ ಕೇಂದ್ರಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ಧಾರವಾಡದ ಐಐಟಿ ಪ್ರಾಧ್ಯಾಪಕ ಶ್ರೀಪತಿ, ಶಿವಮೊಗ್ಗ ನಗರಸಭೆಯ ಮಾಜಿ ಸದಸ್ಯ ಎಂ. ಶಂಕರ್, ಬಾಲಕೃಷ್ಣನಾಯ್ಡು, ನಿವೃತ್ತ ಉಪನ್ಯಾಸಕ ವರದರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ಇತ್ತೀಚಿನ ದಿನಗಳಲ್ಲಿ ನದಿಗಳು ಅತ್ಯಂತ ಕಲುಷಿತವಾಗುತ್ತಿದ್ದು, ಕುಡಿಯಲೂ ಯೋಗ್ಯವಲ್ಲದ ಸ್ಥಿತಿಗೆ ತಲುಪಿವೆ. ‘ನಿರ್ಮಲ ತುಂಗಭದ್ರಾ’ ಎಂಬ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ನವೆಂಬರ್ ಮೊದಲ ವಾರದಲ್ಲಿ ಶೃಂಗೇರಿಯಿಂದ ಕಿಷ್ಕಿಂಧೆವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಡಿವಿಎಸ್ ಕಾಲೇಜಿನ ನಿವೃತ್ತ ಪಾಂಶುಪಾಲ, ಆರ್ಥಿಕ ತಜ್ಞ ಬಿ.ಎಂ. ಕುಮಾರಸ್ವಾಮಿ ಹೇಳಿದರು.</p>.<p>ಬುಧವಾರ ಹೊನ್ನಾಳಿಯ ಚನ್ನಪ್ಪಸ್ವಾಮಿ ಮಠಕ್ಕೆ ಹಾಗೂ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಗಂಗಾನದಿ ಶುದ್ಧೀಕರಣ ಕಾರ್ಯದಿಂದ ಸ್ಫೂರ್ತಿ ಪಡೆದು ನಿರ್ಮಲ ತುಂಗಭದ್ರಾ ಅಭಿಯಾನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ತುಂಗಭದ್ರಾ ನದಿ ಪಾತ್ರದ ಪರಿಸರಾಸಕ್ತರು, ಸಾಧು ಸಂತರು, ವಿದ್ಯಾರ್ಥಿಗಳು, ರೈತರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು. ಅದಕ್ಕಾಗಿ ತಾಲ್ಲೂಕಿನ ಕೇಂದ್ರಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ಧಾರವಾಡದ ಐಐಟಿ ಪ್ರಾಧ್ಯಾಪಕ ಶ್ರೀಪತಿ, ಶಿವಮೊಗ್ಗ ನಗರಸಭೆಯ ಮಾಜಿ ಸದಸ್ಯ ಎಂ. ಶಂಕರ್, ಬಾಲಕೃಷ್ಣನಾಯ್ಡು, ನಿವೃತ್ತ ಉಪನ್ಯಾಸಕ ವರದರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>