<p><strong>ದಾವಣಗೆರೆ:</strong> ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೇ ‘ಮತ್ತೊಮ್ಮೆ ಮೋದಿ’ ಘೋಷವಾಕ್ಯದಡಿ ಬಿಜೆಪಿಯ ಕಾರ್ಯಕರ್ತರು ಸೇನಾನಿಗಳಂತೆ ಕಾರ್ಯ ನಿರ್ವಹಿಸಲು ಸಜ್ಜಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷ ಆರ್.ರಘು ಕೌಟಿಲ್ಯ ತಿಳಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಶ್ರಮಿಕ ವರ್ಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರದ ಕೊಡುಗೆಗಳ ಬಗ್ಗೆ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.</p>.<p>‘ಕೇಂದ್ರ ಸರ್ಕಾರ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಮುದ್ರಾ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಶ್ರಮಿಕ ವರ್ಗಕ್ಕೆ ಔದ್ಯೋಗಿಕ, ಆರ್ಥಿಕ ಶಕ್ತಿ ನೀಡುತ್ತಿದೆ. ಹೀಗಾಗಿ ಸೂಕ್ಷ್ಮ, ಅತಿ ಸೂಕ್ಷ್ಮ ಸಮುದಾಯಗಳಿಗೆ ರಾಜಕೀಯ ಪ್ರಜ್ಞೆ ಮೂಡಿಸಬೇಕಿದೆ’ ಎಂದರು.</p>.<p>‘ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ನೇತೃತ್ವ ವಹಿಸಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ದೊರೆತಿದೆ. ರಾಜ್ಯದಲ್ಲಿ ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸ ಇದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.</p>.<p>‘ದೇಶದ್ರೋಹಿಗಳನ್ನು ಕಾಂಗ್ರೆಸ್ ಮಡಿಲಲ್ಲಿ ಇಟ್ಟುಕೊಂಡಿದೆ’ ಎಂದು ಆರೋಪಿಸಿದರು.</p>.<p>ಬಿಜೆಪಿ ಮುಖಂಡರಾದ ಸೋಮಶೇಖರ್, ಸತೀಶ್, ಕುಬೇಂದ್ರಪ್ಪ, ರಘುನಂದನ್ ಅಂಬರಕರ್, ಬಿ.ಎಂ.ಸತೀಶ್ ಕೊಳೇನಹಳ್ಳಿ, ರಾಜನಹಳ್ಳಿ ಶಿವಕುಮಾರ್, ವಿಶ್ವಾಸ್, ಗುರುನಾಥ, ಮಂಜುನಾಥ, ಇನ್ನಿತರರು ಇದ್ದರು.</p>.<p>ಪತ್ರಿಕಾಗೋಷ್ಠಿ ಬಳಿಕ ದಾವಣಗೆರೆ– ಹರಿಹರ ಅರ್ಬನ್ ಕೋಅಪರೇಟಿವ್ ಸಮುದಾಯ ಭವನದಲ್ಲಿ ಬಿಜೆಪಿ ಒಬಿಸಿ ಸಮಾವೇಶ ನಡೆಯಿತು. ಪಕ್ಷದ ಹಲವು ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೇ ‘ಮತ್ತೊಮ್ಮೆ ಮೋದಿ’ ಘೋಷವಾಕ್ಯದಡಿ ಬಿಜೆಪಿಯ ಕಾರ್ಯಕರ್ತರು ಸೇನಾನಿಗಳಂತೆ ಕಾರ್ಯ ನಿರ್ವಹಿಸಲು ಸಜ್ಜಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷ ಆರ್.ರಘು ಕೌಟಿಲ್ಯ ತಿಳಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಶ್ರಮಿಕ ವರ್ಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರದ ಕೊಡುಗೆಗಳ ಬಗ್ಗೆ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.</p>.<p>‘ಕೇಂದ್ರ ಸರ್ಕಾರ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಮುದ್ರಾ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಶ್ರಮಿಕ ವರ್ಗಕ್ಕೆ ಔದ್ಯೋಗಿಕ, ಆರ್ಥಿಕ ಶಕ್ತಿ ನೀಡುತ್ತಿದೆ. ಹೀಗಾಗಿ ಸೂಕ್ಷ್ಮ, ಅತಿ ಸೂಕ್ಷ್ಮ ಸಮುದಾಯಗಳಿಗೆ ರಾಜಕೀಯ ಪ್ರಜ್ಞೆ ಮೂಡಿಸಬೇಕಿದೆ’ ಎಂದರು.</p>.<p>‘ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ನೇತೃತ್ವ ವಹಿಸಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ದೊರೆತಿದೆ. ರಾಜ್ಯದಲ್ಲಿ ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸ ಇದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.</p>.<p>‘ದೇಶದ್ರೋಹಿಗಳನ್ನು ಕಾಂಗ್ರೆಸ್ ಮಡಿಲಲ್ಲಿ ಇಟ್ಟುಕೊಂಡಿದೆ’ ಎಂದು ಆರೋಪಿಸಿದರು.</p>.<p>ಬಿಜೆಪಿ ಮುಖಂಡರಾದ ಸೋಮಶೇಖರ್, ಸತೀಶ್, ಕುಬೇಂದ್ರಪ್ಪ, ರಘುನಂದನ್ ಅಂಬರಕರ್, ಬಿ.ಎಂ.ಸತೀಶ್ ಕೊಳೇನಹಳ್ಳಿ, ರಾಜನಹಳ್ಳಿ ಶಿವಕುಮಾರ್, ವಿಶ್ವಾಸ್, ಗುರುನಾಥ, ಮಂಜುನಾಥ, ಇನ್ನಿತರರು ಇದ್ದರು.</p>.<p>ಪತ್ರಿಕಾಗೋಷ್ಠಿ ಬಳಿಕ ದಾವಣಗೆರೆ– ಹರಿಹರ ಅರ್ಬನ್ ಕೋಅಪರೇಟಿವ್ ಸಮುದಾಯ ಭವನದಲ್ಲಿ ಬಿಜೆಪಿ ಒಬಿಸಿ ಸಮಾವೇಶ ನಡೆಯಿತು. ಪಕ್ಷದ ಹಲವು ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>