<p><strong>ದಾವಣಗೆರೆ</strong>: ಇನ್ನು ಒಟ್ಟಾಗಿ ಸಂಸಾರ ನಡೆಸಲು ಸಾಧ್ಯವೇ ಇಲ್ಲವೆಂದು ಜೀವನಾಂಶ ಹಾಗೂ ವಿವಾಹ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ 17 ಜೋಡಿಗಳು, ಮತ್ತೆ ಒಂದಾಗಿ ಬಾಳಲು ನಿರ್ಧರಿಸಿವೆ.</p>.<p>ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಇನ್ನೇನು ವಿಚ್ಛೇದನ ಪಡೆದು ಬೇರೆಯಾಗುವ ಹಂತದಲ್ಲಿದ್ದ ಜೋಡಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಒಂದಾದವು.</p>.<p>ಒಂದೂವರೆ ವರ್ಷದ ಹಿಂದೆ ಮದುವೆಯಾದ ಜೋಡಿಯಿಂದ ಹಿಡಿದು 25 ವರ್ಷಗಳಿಗೂ ಹೆಚ್ಚಿನ ವಿವಾಹಬಂಧ ಹೊಂದಿದ್ದ ಜೋಡಿಗಳು ಮುನಿಸು, ಮನಸ್ತಾಪ ಮರೆತು ಒಬ್ಬರಿಗೊಬ್ಬರು ಹಾರ ಬದಲಿಸಿಕೊಂಡು, ಸಿಹಿ ತಿನ್ನಿಸಿ ಸಹಜೀವನ ನಡೆಸಲು ಮತ್ತೆ ಹೆಜ್ಜೆ ಇಟ್ಟರು.</p>.<p>‘ಲೋಕ ಅದಾಲತ್ ಪ್ರಕ್ರಿಯೆ ಅತಿ ಸರಳ, ಇಲ್ಲಿ ಏನೇ ವ್ಯಾಜ್ಯ ಇದ್ದರೂ ರಾಜಿಗೆ ಮೊದಲ ಆದ್ಯತೆ. ನ್ಯಾಯಾಧೀಶರು ಮತ್ತು ನುರಿತ ವಕೀಲರು ಲೋಕ ಅದಾಲತ್ ಪೀಠದಲ್ಲಿ ಕುಳಿತು ವಾದಿ-ಪ್ರತಿವಾದಿಗಳನ್ನು ಕೂರಿಸಿಕೊಂಡು ಅವರ ಮನವೊಲಿಸಿ ವ್ಯಾಜ್ಯಕ್ಕೆ ಅವರ ಸಮಕ್ಷಮದಲ್ಲೇ ಪರಿಹಾರ ಕಂಡುಕೊಳ್ಳುತ್ತಾರೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.</p>.<p>‘ಮನುಷ್ಯನ ಬದುಕಿನಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿಂದ ವ್ಯಾಜ್ಯಗಳು ಸಂಭವಿಸುವುದು ಸಹಜ. ಸಣ್ಣ ಅವಘಡಗಳನ್ನು ದೊಡ್ಡದು ಮಾಡದೆ, ಸುಖ ಜೀವನ ನಡೆಸುವುದೇ ಜೀವನ’ ಎಂದು ತಿಳಿಸಿದರು.</p>.<p>‘ಜಿಲ್ಲೆಯಲ್ಲಿ 40,000 ಕ್ಕೂ ಹೆಚ್ಚು ಪ್ರಕರಣಗಳು ಜಾರಿಯಲ್ಲಿದ್ದು, ಇವುಗಳಲ್ಲಿ 8,000 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಬಹುದು ಎಂದು ಗುರುತಿಸಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ್ ಹೇಳಿದರು.</p>.<p>‘ತಮ್ಮಲ್ಲಿ ಬರುವಂತಹ ಜೋಡಿಗಳ ಮನವೊಲಿಸಿ ಸಂಧಾನಕ್ಕೆ ವಕೀಲರೇ ಸಜ್ಜುಗೊಳಿಸುವರು. ಈ ಲೋಕ ಅದಾಲತ್ನಲ್ಲಿ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳಲ್ಲಿ ವಕೀಲರ ಪಾತ್ರವೂ ಮುಖ್ಯವಾಗಿದೆ’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್.ಎಲ್.ಎಚ್ ಹೇಳಿದರು.</p>.<p>‘ಸಾಮಾಜಿಕ ಜವಾಬ್ದಾರಿಯಿಂದ ಮತ್ತು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ತಮ್ಮ ಪ್ರಕರಣಗಳನ್ನು ತ್ಯಾಗ ಮಾಡಿ ಜೋಡಿಗಳನ್ನು ಒಂದು ಮಾಡಿಸುವಂತಹ ಗುರುತರ ಜವಾಬ್ದಾರಿ ವಕೀಲರ ಮೇಲಿದೆ’ ಎಂದು ತಿಳಿಸಿದರು.</p>.<p>ಒಂದನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಣ್ಣಯ್ಯನವರ್ ಎಂ.ಎಚ್., ಕೌಟುಂಬಿಕ ನ್ಯಾಯಾಧೀಶ ಶಿವಪ್ಪ ಗಂಗಪ್ಪ ಸಲಗೇರಿ, ಎರಡನೇ ಸೆಷನ್ಸ್ ಜಿಲ್ಲಾ ನ್ಯಾಯಾಧೀಶ ಪ್ರವೀಣ್ ಕುಮಾರ್ ಎನ್., ಮಕ್ಕಳ ಶಾಲೆಯ ನ್ಯಾಯಾಧೀಶ ಶ್ರೀರಾಮ್ ಹೆಗಡೆ, ವಕೀಲ ಸಂಧಾನಕಾರರಾದ ಭಾಗ್ಯಲಕ್ಷ್ಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<p> 7944 ಪ್ರಕರಣಗಳು ಇತ್ಯರ್ಥ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್ನಲ್ಲಿ ಒಟ್ಟು 7944 ಪ್ರಕರಣಗಳು ಇತ್ಯರ್ಥಗೊಂಡಿದ್ದು ₹ 18.37 ಕೋಟಿ ಹಣದ ಪರಿಹಾರ ಆಗಿದೆ. 249729 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿದ್ದು ₹ 104.20 ಕೋಟಿ ಹಣದ ಪರಿಹಾರವಾಗಿದೆ. ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ 15 ಜೋಡಿಗಳು ಹರಿಹರ ನ್ಯಾಯಾಲಯದಲ್ಲಿ 2 ಜೋಡಿಗಳು ಒಟ್ಟು 17 ಜೋಡಿಗಳು ಲೋಕ್ ಅದಾಲತ್ ಮೂಲಕ ಮತ್ತೆ ಒಂದಾದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಇನ್ನು ಒಟ್ಟಾಗಿ ಸಂಸಾರ ನಡೆಸಲು ಸಾಧ್ಯವೇ ಇಲ್ಲವೆಂದು ಜೀವನಾಂಶ ಹಾಗೂ ವಿವಾಹ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ 17 ಜೋಡಿಗಳು, ಮತ್ತೆ ಒಂದಾಗಿ ಬಾಳಲು ನಿರ್ಧರಿಸಿವೆ.</p>.<p>ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಇನ್ನೇನು ವಿಚ್ಛೇದನ ಪಡೆದು ಬೇರೆಯಾಗುವ ಹಂತದಲ್ಲಿದ್ದ ಜೋಡಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಒಂದಾದವು.</p>.<p>ಒಂದೂವರೆ ವರ್ಷದ ಹಿಂದೆ ಮದುವೆಯಾದ ಜೋಡಿಯಿಂದ ಹಿಡಿದು 25 ವರ್ಷಗಳಿಗೂ ಹೆಚ್ಚಿನ ವಿವಾಹಬಂಧ ಹೊಂದಿದ್ದ ಜೋಡಿಗಳು ಮುನಿಸು, ಮನಸ್ತಾಪ ಮರೆತು ಒಬ್ಬರಿಗೊಬ್ಬರು ಹಾರ ಬದಲಿಸಿಕೊಂಡು, ಸಿಹಿ ತಿನ್ನಿಸಿ ಸಹಜೀವನ ನಡೆಸಲು ಮತ್ತೆ ಹೆಜ್ಜೆ ಇಟ್ಟರು.</p>.<p>‘ಲೋಕ ಅದಾಲತ್ ಪ್ರಕ್ರಿಯೆ ಅತಿ ಸರಳ, ಇಲ್ಲಿ ಏನೇ ವ್ಯಾಜ್ಯ ಇದ್ದರೂ ರಾಜಿಗೆ ಮೊದಲ ಆದ್ಯತೆ. ನ್ಯಾಯಾಧೀಶರು ಮತ್ತು ನುರಿತ ವಕೀಲರು ಲೋಕ ಅದಾಲತ್ ಪೀಠದಲ್ಲಿ ಕುಳಿತು ವಾದಿ-ಪ್ರತಿವಾದಿಗಳನ್ನು ಕೂರಿಸಿಕೊಂಡು ಅವರ ಮನವೊಲಿಸಿ ವ್ಯಾಜ್ಯಕ್ಕೆ ಅವರ ಸಮಕ್ಷಮದಲ್ಲೇ ಪರಿಹಾರ ಕಂಡುಕೊಳ್ಳುತ್ತಾರೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.</p>.<p>‘ಮನುಷ್ಯನ ಬದುಕಿನಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿಂದ ವ್ಯಾಜ್ಯಗಳು ಸಂಭವಿಸುವುದು ಸಹಜ. ಸಣ್ಣ ಅವಘಡಗಳನ್ನು ದೊಡ್ಡದು ಮಾಡದೆ, ಸುಖ ಜೀವನ ನಡೆಸುವುದೇ ಜೀವನ’ ಎಂದು ತಿಳಿಸಿದರು.</p>.<p>‘ಜಿಲ್ಲೆಯಲ್ಲಿ 40,000 ಕ್ಕೂ ಹೆಚ್ಚು ಪ್ರಕರಣಗಳು ಜಾರಿಯಲ್ಲಿದ್ದು, ಇವುಗಳಲ್ಲಿ 8,000 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಬಹುದು ಎಂದು ಗುರುತಿಸಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ್ ಹೇಳಿದರು.</p>.<p>‘ತಮ್ಮಲ್ಲಿ ಬರುವಂತಹ ಜೋಡಿಗಳ ಮನವೊಲಿಸಿ ಸಂಧಾನಕ್ಕೆ ವಕೀಲರೇ ಸಜ್ಜುಗೊಳಿಸುವರು. ಈ ಲೋಕ ಅದಾಲತ್ನಲ್ಲಿ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳಲ್ಲಿ ವಕೀಲರ ಪಾತ್ರವೂ ಮುಖ್ಯವಾಗಿದೆ’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್.ಎಲ್.ಎಚ್ ಹೇಳಿದರು.</p>.<p>‘ಸಾಮಾಜಿಕ ಜವಾಬ್ದಾರಿಯಿಂದ ಮತ್ತು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ತಮ್ಮ ಪ್ರಕರಣಗಳನ್ನು ತ್ಯಾಗ ಮಾಡಿ ಜೋಡಿಗಳನ್ನು ಒಂದು ಮಾಡಿಸುವಂತಹ ಗುರುತರ ಜವಾಬ್ದಾರಿ ವಕೀಲರ ಮೇಲಿದೆ’ ಎಂದು ತಿಳಿಸಿದರು.</p>.<p>ಒಂದನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಣ್ಣಯ್ಯನವರ್ ಎಂ.ಎಚ್., ಕೌಟುಂಬಿಕ ನ್ಯಾಯಾಧೀಶ ಶಿವಪ್ಪ ಗಂಗಪ್ಪ ಸಲಗೇರಿ, ಎರಡನೇ ಸೆಷನ್ಸ್ ಜಿಲ್ಲಾ ನ್ಯಾಯಾಧೀಶ ಪ್ರವೀಣ್ ಕುಮಾರ್ ಎನ್., ಮಕ್ಕಳ ಶಾಲೆಯ ನ್ಯಾಯಾಧೀಶ ಶ್ರೀರಾಮ್ ಹೆಗಡೆ, ವಕೀಲ ಸಂಧಾನಕಾರರಾದ ಭಾಗ್ಯಲಕ್ಷ್ಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<p> 7944 ಪ್ರಕರಣಗಳು ಇತ್ಯರ್ಥ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್ನಲ್ಲಿ ಒಟ್ಟು 7944 ಪ್ರಕರಣಗಳು ಇತ್ಯರ್ಥಗೊಂಡಿದ್ದು ₹ 18.37 ಕೋಟಿ ಹಣದ ಪರಿಹಾರ ಆಗಿದೆ. 249729 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿದ್ದು ₹ 104.20 ಕೋಟಿ ಹಣದ ಪರಿಹಾರವಾಗಿದೆ. ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ 15 ಜೋಡಿಗಳು ಹರಿಹರ ನ್ಯಾಯಾಲಯದಲ್ಲಿ 2 ಜೋಡಿಗಳು ಒಟ್ಟು 17 ಜೋಡಿಗಳು ಲೋಕ್ ಅದಾಲತ್ ಮೂಲಕ ಮತ್ತೆ ಒಂದಾದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>