<p><strong>ದಾವಣಗೆರೆ</strong>: ನಗರದ ಎವಿಕೆ ಕಾಲೇಜು ರಸ್ತೆಯಲ್ಲಿನ ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.</p>.<p>ಸಂಘದ ಆವರಣದಲ್ಲಿ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯಕ್ಕೂ ಪೂರ್ವದಲ್ಲೇ ಗಾಂಧೀಜಿಯವರು ದಾವಣಗೆರೆಗೆ ಭೇಟಿ ನೀಡಿದಾಗ ಈ ಶಾಲೆಗೆ ಅವರು ಅಡಿಗಲ್ಲು ಹಾಕಿದ್ದರು. ಇಂತಹ ಇತಿಹಾಸವಿರುವ ಶಾಲೆಗೆ ₹92 ಲಕ್ಷವನ್ನು ಮೊದಲ ಅನುದಾನವಾಗಿ ನೀಡಿದ್ದೇನೆ. ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನಕ್ಕಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿದ್ದು, ಮಾರ್ಚ್ ಮುಗಿದ ಬಳಿಕ ಅವರನ್ನು ಭೇಟಿ ಮಾಡೋಣ’ ಎಂದು ವಿದ್ಯಾಸಂಸ್ಥೆಯ ಮುಖಂಡರಿಗೆ ತಿಳಿಸಿದರು.</p>.<p>‘ಈ ಸಂಸ್ಥೆಯಲ್ಲಿ ಕಾಲೇಜು ಆಗಬೇಕಿತ್ತು ಆದರೆ ಆಗಿಲ್ಲ. ಶಾಲಾ–ಕಾಲೇಜುಗಳಲ್ಲಿ ಶೇ 80ರಷ್ಟು ಸಿಬ್ಬಂದಿ ಕೊರತೆಯಾಗಿದೆ. ಶಿಕ್ಷಕರು, ಸಿಬ್ಬಂದಿ ಕ್ಲರ್ಕ್ ಸಹ ಇಲ್ಲ. ಈ ನಿಟ್ಟಿನಲ್ಲಿ ನೇಮಕ ಮಾಡಲು ಮುಖ್ಯಮಂತ್ರಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸಚಿವ ಸಂಪುಟದಲ್ಲೂ ಚರ್ಚೆ ಆಗಿದೆ. ರಾಜ್ಯವ್ಯಾಪಿ ನೇಮಕವಾದಾಗ ಈ ಶಾಲೆಗೂ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>‘1934ರಲ್ಲಿ ಗಾಂಧೀಜಿ ಅವರು ದಾವಣಗೆರೆಗೆ ಭೇಟಿ ನೀಡಿದ್ದ ಸಂದರ್ಭ ಗಾಂಧೀಜಿಯವರು ಪೌರಾಯುಕ್ತರನ್ನು ಕರೆಸಿ ಜಾಗವನ್ನು ಗುರುತಿಸಿ ಅಂದು ಶಾಲೆಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು. ಶಾಲೆಯಲ್ಲಿ 5 ಕೊಠಡಿ ಹಾಗೂ ಒಂದು ಅಡುಗೆ ಕೊಠಡಿ ನಿರ್ಮಾಣಕ್ಕೆ ₹ 92 ಲಕ್ಷವನ್ನು ಶಾಸಕರ ಅನುದಾನದಿಂದ ನೀಡಲಾಗಿದೆ. ಹಾಸ್ಟೆಲ್ ನಿರ್ಮಾಣಕ್ಕೆ ₹ 3 ಕೋಟಿ ಅಗತ್ಯವಿದ್ದು, ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಲಾಗುವುದು’ ಎಂದು ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಮಿತಿ ಅಧ್ಯಕ್ಷ ಎಲ್.ಎಂ. ಹನುಮಂತಪ್ಪ ಹಾಗೂ ಕಾರ್ಯದರ್ಶಿ ಬಿ.ಎಚ್. ವೀರಭದ್ರಪ್ಪ ತಿಳಿಸಿದರು.</p>.<p>ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಸದಸ್ಯರಾದ ಎ.ನಾಗರಾಜ್, ಗಡಿಗುಡಾಳ್ ಮಂಜುನಾಥ್, ಮುಖಂಡರಾದ ಎಲ್.ಎಂ.ಎಚ್. ಸಾಗರ್, ಕೆ.ಚಂದ್ರಣ್ಣ, ಈಶ್ವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರದ ಎವಿಕೆ ಕಾಲೇಜು ರಸ್ತೆಯಲ್ಲಿನ ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.</p>.<p>ಸಂಘದ ಆವರಣದಲ್ಲಿ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯಕ್ಕೂ ಪೂರ್ವದಲ್ಲೇ ಗಾಂಧೀಜಿಯವರು ದಾವಣಗೆರೆಗೆ ಭೇಟಿ ನೀಡಿದಾಗ ಈ ಶಾಲೆಗೆ ಅವರು ಅಡಿಗಲ್ಲು ಹಾಕಿದ್ದರು. ಇಂತಹ ಇತಿಹಾಸವಿರುವ ಶಾಲೆಗೆ ₹92 ಲಕ್ಷವನ್ನು ಮೊದಲ ಅನುದಾನವಾಗಿ ನೀಡಿದ್ದೇನೆ. ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನಕ್ಕಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿದ್ದು, ಮಾರ್ಚ್ ಮುಗಿದ ಬಳಿಕ ಅವರನ್ನು ಭೇಟಿ ಮಾಡೋಣ’ ಎಂದು ವಿದ್ಯಾಸಂಸ್ಥೆಯ ಮುಖಂಡರಿಗೆ ತಿಳಿಸಿದರು.</p>.<p>‘ಈ ಸಂಸ್ಥೆಯಲ್ಲಿ ಕಾಲೇಜು ಆಗಬೇಕಿತ್ತು ಆದರೆ ಆಗಿಲ್ಲ. ಶಾಲಾ–ಕಾಲೇಜುಗಳಲ್ಲಿ ಶೇ 80ರಷ್ಟು ಸಿಬ್ಬಂದಿ ಕೊರತೆಯಾಗಿದೆ. ಶಿಕ್ಷಕರು, ಸಿಬ್ಬಂದಿ ಕ್ಲರ್ಕ್ ಸಹ ಇಲ್ಲ. ಈ ನಿಟ್ಟಿನಲ್ಲಿ ನೇಮಕ ಮಾಡಲು ಮುಖ್ಯಮಂತ್ರಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸಚಿವ ಸಂಪುಟದಲ್ಲೂ ಚರ್ಚೆ ಆಗಿದೆ. ರಾಜ್ಯವ್ಯಾಪಿ ನೇಮಕವಾದಾಗ ಈ ಶಾಲೆಗೂ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>‘1934ರಲ್ಲಿ ಗಾಂಧೀಜಿ ಅವರು ದಾವಣಗೆರೆಗೆ ಭೇಟಿ ನೀಡಿದ್ದ ಸಂದರ್ಭ ಗಾಂಧೀಜಿಯವರು ಪೌರಾಯುಕ್ತರನ್ನು ಕರೆಸಿ ಜಾಗವನ್ನು ಗುರುತಿಸಿ ಅಂದು ಶಾಲೆಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು. ಶಾಲೆಯಲ್ಲಿ 5 ಕೊಠಡಿ ಹಾಗೂ ಒಂದು ಅಡುಗೆ ಕೊಠಡಿ ನಿರ್ಮಾಣಕ್ಕೆ ₹ 92 ಲಕ್ಷವನ್ನು ಶಾಸಕರ ಅನುದಾನದಿಂದ ನೀಡಲಾಗಿದೆ. ಹಾಸ್ಟೆಲ್ ನಿರ್ಮಾಣಕ್ಕೆ ₹ 3 ಕೋಟಿ ಅಗತ್ಯವಿದ್ದು, ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಲಾಗುವುದು’ ಎಂದು ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಮಿತಿ ಅಧ್ಯಕ್ಷ ಎಲ್.ಎಂ. ಹನುಮಂತಪ್ಪ ಹಾಗೂ ಕಾರ್ಯದರ್ಶಿ ಬಿ.ಎಚ್. ವೀರಭದ್ರಪ್ಪ ತಿಳಿಸಿದರು.</p>.<p>ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಸದಸ್ಯರಾದ ಎ.ನಾಗರಾಜ್, ಗಡಿಗುಡಾಳ್ ಮಂಜುನಾಥ್, ಮುಖಂಡರಾದ ಎಲ್.ಎಂ.ಎಚ್. ಸಾಗರ್, ಕೆ.ಚಂದ್ರಣ್ಣ, ಈಶ್ವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>