<p><strong>ಹರಿಹರ:</strong> ಕೇಂದ್ರದ ಬಿಜೆಪಿ ಸರ್ಕಾರ ಜನರನ್ನು ಧರ್ಮದ ಕಾರಣವಿಟ್ಟು ಪ್ರಚೋದಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೊಂಚು ಹಾಕಿದೆ ಎಂದು ಆಮ್ ಆದ್ಮಿ ಪಾರ್ಟಿ ತಾಲ್ಲೂಕು ಘಟಕದ ಅಧ್ಯಕ್ಷ ಹಲಸಬಾಳು ಬಸವರಾಜಪ್ಪ ಟೀಕಿಸಿದರು.</p>.<p>ಪ್ರತಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಜನರನ್ನು ಧರ್ಮದ ಆಧಾರದಲ್ಲಿ ವಿಘಟಿಸಿ, ಸಂಘರ್ಷದ ವಾತಾವರಣ ನಿರ್ಮಿಸುವುದು ಬಿಜೆಪಿ ತಂತ್ರವಾಗಿದೆ. ಎರಡು ಅವಧಿಯ ಆಡಳಿತದಲ್ಲಿ ಮಹತ್ತರ ಸಾಧನೆ ಮಾಡಲಾಗದ್ದರಿಂದ ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಬಿಜೆಪಿ ಆಡಳಿತಕ್ಕೆ ಬರುವ ಮುನ್ನ ನೀಡಿದ್ದ ಸ್ವಿಸ್ ಬ್ಯಾಂಕ್ನಲ್ಲಿರುವ ಕಪ್ಪು ಹಣ ವಾಪಸ್ ತರಿಸಿ ಪ್ರತಿ ಪ್ರಜೆ ಬ್ಯಾಂಕ್ ಖಾತೆಗೆ ₹ 15 ಲಕ್ಷ ಜಮೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಸೇರಿ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬದಲಿಗೆ ಜಿಎಸ್ಟಿ ಜಾರಿ, ಅಡುಗೆ ಅನಿಲ, ಅಡುಗೆ ಎಣ್ಣೆ, ಆಹಾರ ಧಾನ್ಯದ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಲಾಗಿದೆ ಎಂದು ದೂರಿದರು.</p>.<p>ಬಿಜೆಪಿ ಮುಖಂಡರು ಸಂವಿಧಾನ ಬದಲಿಸಲೆಂದೇ ಅಧಿಕಾರಕ್ಕೆ ಬಂದಿರುವುದಾಗಿ ಹೇಳುತ್ತಾರೆ. ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ, ಅಲ್ಪಸಂಖ್ಯಾತರು, ದಲಿತರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಅದಾನಿ, ಅಂಬಾನಿಯಂತಹ ಹಣದಾಹಿ ಉದ್ಯಮಿಗಳಿಗೆ ಶ್ರೀರಕ್ಷೆ ನೀಡುವುದೇ ಕೇಂದ್ರ ಸರ್ಕಾರದ ಕಾಯಕವಾಗಿದೆ ಎಂದು ಆರೋಪಿಸಿದರು.</p>.<p>ಆಪ್ ಆಡಳಿತ ಇರುವ ದೆಹಲಿ ಮತ್ತು ಪಂಜಾಬ್ನಲ್ಲಿ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆಗಳು ಜನರಿಗೆ ಸಿಗುವಂತಾಗಿದೆ. ಭಷ್ಟಾಚಾರ ರಹಿತ ಆಡಳಿತ ನೀಡಲಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಕೇಂದ್ರದ ಬಿಜೆಪಿ ಸರ್ಕಾರ ಜನರನ್ನು ಧರ್ಮದ ಕಾರಣವಿಟ್ಟು ಪ್ರಚೋದಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೊಂಚು ಹಾಕಿದೆ ಎಂದು ಆಮ್ ಆದ್ಮಿ ಪಾರ್ಟಿ ತಾಲ್ಲೂಕು ಘಟಕದ ಅಧ್ಯಕ್ಷ ಹಲಸಬಾಳು ಬಸವರಾಜಪ್ಪ ಟೀಕಿಸಿದರು.</p>.<p>ಪ್ರತಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಜನರನ್ನು ಧರ್ಮದ ಆಧಾರದಲ್ಲಿ ವಿಘಟಿಸಿ, ಸಂಘರ್ಷದ ವಾತಾವರಣ ನಿರ್ಮಿಸುವುದು ಬಿಜೆಪಿ ತಂತ್ರವಾಗಿದೆ. ಎರಡು ಅವಧಿಯ ಆಡಳಿತದಲ್ಲಿ ಮಹತ್ತರ ಸಾಧನೆ ಮಾಡಲಾಗದ್ದರಿಂದ ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಬಿಜೆಪಿ ಆಡಳಿತಕ್ಕೆ ಬರುವ ಮುನ್ನ ನೀಡಿದ್ದ ಸ್ವಿಸ್ ಬ್ಯಾಂಕ್ನಲ್ಲಿರುವ ಕಪ್ಪು ಹಣ ವಾಪಸ್ ತರಿಸಿ ಪ್ರತಿ ಪ್ರಜೆ ಬ್ಯಾಂಕ್ ಖಾತೆಗೆ ₹ 15 ಲಕ್ಷ ಜಮೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಸೇರಿ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬದಲಿಗೆ ಜಿಎಸ್ಟಿ ಜಾರಿ, ಅಡುಗೆ ಅನಿಲ, ಅಡುಗೆ ಎಣ್ಣೆ, ಆಹಾರ ಧಾನ್ಯದ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಲಾಗಿದೆ ಎಂದು ದೂರಿದರು.</p>.<p>ಬಿಜೆಪಿ ಮುಖಂಡರು ಸಂವಿಧಾನ ಬದಲಿಸಲೆಂದೇ ಅಧಿಕಾರಕ್ಕೆ ಬಂದಿರುವುದಾಗಿ ಹೇಳುತ್ತಾರೆ. ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ, ಅಲ್ಪಸಂಖ್ಯಾತರು, ದಲಿತರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಅದಾನಿ, ಅಂಬಾನಿಯಂತಹ ಹಣದಾಹಿ ಉದ್ಯಮಿಗಳಿಗೆ ಶ್ರೀರಕ್ಷೆ ನೀಡುವುದೇ ಕೇಂದ್ರ ಸರ್ಕಾರದ ಕಾಯಕವಾಗಿದೆ ಎಂದು ಆರೋಪಿಸಿದರು.</p>.<p>ಆಪ್ ಆಡಳಿತ ಇರುವ ದೆಹಲಿ ಮತ್ತು ಪಂಜಾಬ್ನಲ್ಲಿ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆಗಳು ಜನರಿಗೆ ಸಿಗುವಂತಾಗಿದೆ. ಭಷ್ಟಾಚಾರ ರಹಿತ ಆಡಳಿತ ನೀಡಲಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>