ನ್ಯಾಮತಿ (ದಾವಣಗೆರೆ ಜಿಲ್ಲೆ): ಮರಳು ಗಣಿಗಾರಿಕೆ ಸಂಬಂಧ ತಾಲ್ಲೂಕಿನ ಚೀಲೂರು ಕಡದಕಟ್ಟೆ ಹಾಗೂ ಮರಿಗೊಂಡನಹಳ್ಳಿ ಗ್ರಾಮಸ್ಥರ ನಡುವೆ ಬುಧವಾರ ಘರ್ಷಣೆ ನಡೆದಿದೆ. ಘಟನೆಯನ್ನು ವೀಕ್ಷಿಸುತ್ತಿದ್ದ ವ್ಯಕ್ತಿಯೊಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದ ಪರಿಣಾಮ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.