<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಉಕ್ಕಡಗಾತ್ರಿ- ಪತ್ತೇಪುರ ರಸ್ತೆ ಮತ್ತು ತೋಟ ಗದ್ದೆಗಳ ಜಲಾವೃತ ಪ್ರದೇಶಕ್ಕೆ ಹರಿಹರ ತಾಲ್ಲೂಕು ತಹಶೀಲ್ದಾರ್ ಕೆ.ಎಂ.ಗುರುಬಸವರಾಜ್ ಭೇಟಿ ನೀಡಿ ವೀಕ್ಷಿಸಿದರು.</p>.<p>ಉಕ್ಕಡಗಾತ್ರಿ ಅಜ್ಜಯ್ಯನ ದೇವಸ್ಥಾನದ ಸ್ನಾನಘಟ್ಟ ಮತ್ತು ಪ್ರತಿಷ್ಠಾಪಿತ ಗಣೇಶ ವಿಗ್ರಹ ಮುಳುಗಡೆ ಪ್ರದೇಶಗಳನ್ನು ಪರಿಶೀಲಿಸಿದರು.</p>.<p>ಜಲಾವೃತ ಪ್ರದೇಶದಲ್ಲಿನ ರಸ್ತೆಯನ್ನು ಎತ್ತರಗೊಳಿಸಿ ಸೇತುವೆ ನಿರ್ಮಿಸಿದರೆ ಯಾವುದೇ ಅನಾಹುತ ಸಂಭವಿಸುವುದಿಲ್ಲ. ಬರ ಪರಿಹಾರ ಯೋಜನೆ ಅಡಿ ಅನುದಾನ ಬಿಡುಗಡೆಗೆ ಜಿಲ್ಲಾಧಿಕಾರಿ ಅವರಿಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ತಿಳಿಸಿದರು.</p>.<p>ದೇವಸ್ಥಾನಕ್ಕೆ ಬಂದ ಭಕ್ತರು, ಗ್ರಾಮಸ್ಥರು ನದಿಗೆ ಇಳಿಯದಂತೆ ಗೇಟ್ ಅಳವಡಿಸಿ ಬೀಗ ಹಾಕಲಾಗಿದೆ. ನದಿಯ ನೀರು ಕಡಿಮೆ ಆಗುವವರೆಗೆ ಜನರಾಗಲೀ, ಜಾನುವಾರಗಳಾಗಲೀ ನದಿಯ ಕಡೆಗೆ ತೆರಳದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಆರ್ಐ ಆನಂದ್, ವಿಎ ಆನಂದತೀರ್ಥ, ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಉಕ್ಕಡಗಾತ್ರಿ- ಪತ್ತೇಪುರ ರಸ್ತೆ ಮತ್ತು ತೋಟ ಗದ್ದೆಗಳ ಜಲಾವೃತ ಪ್ರದೇಶಕ್ಕೆ ಹರಿಹರ ತಾಲ್ಲೂಕು ತಹಶೀಲ್ದಾರ್ ಕೆ.ಎಂ.ಗುರುಬಸವರಾಜ್ ಭೇಟಿ ನೀಡಿ ವೀಕ್ಷಿಸಿದರು.</p>.<p>ಉಕ್ಕಡಗಾತ್ರಿ ಅಜ್ಜಯ್ಯನ ದೇವಸ್ಥಾನದ ಸ್ನಾನಘಟ್ಟ ಮತ್ತು ಪ್ರತಿಷ್ಠಾಪಿತ ಗಣೇಶ ವಿಗ್ರಹ ಮುಳುಗಡೆ ಪ್ರದೇಶಗಳನ್ನು ಪರಿಶೀಲಿಸಿದರು.</p>.<p>ಜಲಾವೃತ ಪ್ರದೇಶದಲ್ಲಿನ ರಸ್ತೆಯನ್ನು ಎತ್ತರಗೊಳಿಸಿ ಸೇತುವೆ ನಿರ್ಮಿಸಿದರೆ ಯಾವುದೇ ಅನಾಹುತ ಸಂಭವಿಸುವುದಿಲ್ಲ. ಬರ ಪರಿಹಾರ ಯೋಜನೆ ಅಡಿ ಅನುದಾನ ಬಿಡುಗಡೆಗೆ ಜಿಲ್ಲಾಧಿಕಾರಿ ಅವರಿಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ತಿಳಿಸಿದರು.</p>.<p>ದೇವಸ್ಥಾನಕ್ಕೆ ಬಂದ ಭಕ್ತರು, ಗ್ರಾಮಸ್ಥರು ನದಿಗೆ ಇಳಿಯದಂತೆ ಗೇಟ್ ಅಳವಡಿಸಿ ಬೀಗ ಹಾಕಲಾಗಿದೆ. ನದಿಯ ನೀರು ಕಡಿಮೆ ಆಗುವವರೆಗೆ ಜನರಾಗಲೀ, ಜಾನುವಾರಗಳಾಗಲೀ ನದಿಯ ಕಡೆಗೆ ತೆರಳದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಆರ್ಐ ಆನಂದ್, ವಿಎ ಆನಂದತೀರ್ಥ, ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>