<p><strong>ಚನ್ನಗಿರಿ:</strong> ಸಾಮಾನ್ಯವಾಗಿ ಪ್ರತಿ ವರ್ಷ ಜುಲೈ ತಿಂಗಳಿನಲ್ಲಿ ತಾಲ್ಲೂಕಿನಲ್ಲಿ ಅಡಿಕೆ ಕೊಯ್ಲು ಆರಂಭವಾಗುತ್ತದೆ. ಈಗಾಗಲೇ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಅಡಿಕೆ ಕೊಯ್ಲು ಆರಂಭಿಸಿದ್ದಾರೆ. ಆದರೆ ಸುಗಮ ಅಡಿಕೆ ಕೊಯ್ಲಿಗೆ ನಿರಂತರವಾಗಿ ಬೀಳುತ್ತಿರುವ ಜಡಿಮಳೆ ಅಡ್ಡಿಯಾಗಿದೆ.</p>.<p>ತಾಲ್ಲೂಕಿನ 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆಯನ್ನು ಪ್ರಮುಖ ವಾಣಿಜ್ಯ ಬೆಳೆಯನ್ನಾಗಿ ಬೆಳೆಯಲಾಗುತ್ತಿದೆ. </p>.<p>ಕಳೆದ ಸಾಲಿನಲ್ಲಿ ತಾಲ್ಲೂಕಿನ ಅಡಿಕೆ ಬೆಳೆಗಾರರು ತಮ್ಮ ಅಡಿಕೆ ತೋಟಗಳನ್ನು ಟ್ಯಾಂಕರ್ಗಳಲ್ಲಿ ನೀರು ತಂದು ಉಳಿಸಿಕೊಂಡಿದ್ದರು. ಅಡಿಕೆ ತೋಟಗಳನ್ನು ಉಳಿಸಿಕೊಳ್ಳಲು ಕೋಟ್ಯಂತರ ರೂಪಾಯಿ ಹಣವನ್ನು ವ್ಯಯ ಮಾಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಬೀಳುತ್ತಿರುವುದು ಒಂದೆಡೆ ಅಡಿಕೆ ಬೆಳೆಗಾರರಿಗೆ ಸಂತಸ ತಂದರೆ ಇನ್ನೊಂದೆಡೆ ಅಡಿಕೆ ಕೊಯ್ಲು ಹೇಗೆ ಮಾಡುವುದು ಎಂಬ ಚಿಂತೆಯಲ್ಲಿ ಇರುವಂತಾಗಿದೆ.</p>.<p>ನಿರಂತರವಾಗಿ ಜಡಿಮಳೆಯಾಗುತ್ತಿರುವುದರಿಂದ ಅಡಿಕೆ ತೋಟಗಳಲ್ಲಿ ಕಾಲಿಡಲು ಸಾಧ್ಯವಾಗದ ರೀತಿಯಲ್ಲಿ ಭೂಮಿ ಹಸಿಯಾಗಿದೆ. ಇನ್ನು ಫಸಲಿಗೆ ಬಂದಿರುವ ಅಡಿಕೆಯನ್ನು ಸಮಯಕ್ಕೆ ಸರಿಯಾಗಿ ಕೊಯ್ಲು ಮಾಡದೇ ಹೋದರೇ ಅಡಿಕೆ ಗೋಟು ಆಗುತ್ತದೆ. ಗೋಟು ಅಡಿಕೆಗೆ ಮಾರುಕಟ್ಟೆಯಲ್ಲಿ ದರ ಕಡಿಮೆ. ಇನ್ನು ಕೊಯ್ಲು ಮಾಡಿದ ಅಡಿಕೆಯನ್ನು ಬೇಯಿಸಿ ಒಣಗಿಸಲು ಬಿಸಿಲಿನ ಅವಶ್ಯಕತೆ ಇದೆ. ಹಾಗಾಗಿ ನಿರಂತರವಾಗಿ ಬೀಳುತ್ತಿರುವ ಮಳೆ ಒಂದಿಷ್ಟು ವಿರಾಮ ನೀಡಿದರೆ ಅಡಿಕೆ ಕೊಯ್ಲಿಗೆ ಅನುಕೂಲವಾಗುತ್ತದೆ. ಮಳೆ ಹೀಗೆ ಮುಂದುವರಿದರೆ ಅಡಿಕೆ ಕೊಯ್ಲು ಕಷ್ಟವಾಗುತ್ತದೆ ಎನ್ನುತ್ತಾರೆ ರೈತರು.</p>.<p>‘ಜುಲೈ ತಿಂಗಳಲ್ಲಿ ಅಲ್ಪ ಪ್ರಮಾಣದಲ್ಲಿ ಅಡಿಕೆ ಕೊಯ್ಲಿಗೆ ಬರುತ್ತದೆ. ಆಗಸ್ಟ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಅಡಿಕೆ ಕೊಯ್ಲಿಗೆ ಬರುತ್ತದೆ. ಪ್ರಸ್ತುತ ರಾಶಿ ಅಡಿಕೆ ಕ್ವಿಂಟಲ್ಗೆ ಕನಿಷ್ಠ ₹ 39,199 ಇದ್ದು, ಗರಿಷ್ಠ ₹ 51,600 ಇದೆ. ಮಳೆ ಒಂದಿಷ್ಟು ಬಿಡುವುದು ನೀಡಿದರೆ ಅಡಿಕೆಗೆ ಉತ್ತಮ ದರ ಇರುವುದರಿಂದ ಅಡಿಕೆ ಬೇಯಿಸಿ, ಒಣಗಿಸಿ ಮಾರಾಟ ಮಾಡಿದರೆ ಅಡಿಕೆ ಬೆಳೆಗಾರರಿಗೆ ಅನುಕೂಲವಾಗುತ್ತದೆ’ ಎನ್ನುತ್ತಾರೆ ದಿಗ್ಗೇನಹಳ್ಳಿಯ ಅಡಿಕೆ ಬೆಳೆಗಾರ ಸಿದ್ದೇಶ್ವರ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಸಾಮಾನ್ಯವಾಗಿ ಪ್ರತಿ ವರ್ಷ ಜುಲೈ ತಿಂಗಳಿನಲ್ಲಿ ತಾಲ್ಲೂಕಿನಲ್ಲಿ ಅಡಿಕೆ ಕೊಯ್ಲು ಆರಂಭವಾಗುತ್ತದೆ. ಈಗಾಗಲೇ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಅಡಿಕೆ ಕೊಯ್ಲು ಆರಂಭಿಸಿದ್ದಾರೆ. ಆದರೆ ಸುಗಮ ಅಡಿಕೆ ಕೊಯ್ಲಿಗೆ ನಿರಂತರವಾಗಿ ಬೀಳುತ್ತಿರುವ ಜಡಿಮಳೆ ಅಡ್ಡಿಯಾಗಿದೆ.</p>.<p>ತಾಲ್ಲೂಕಿನ 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆಯನ್ನು ಪ್ರಮುಖ ವಾಣಿಜ್ಯ ಬೆಳೆಯನ್ನಾಗಿ ಬೆಳೆಯಲಾಗುತ್ತಿದೆ. </p>.<p>ಕಳೆದ ಸಾಲಿನಲ್ಲಿ ತಾಲ್ಲೂಕಿನ ಅಡಿಕೆ ಬೆಳೆಗಾರರು ತಮ್ಮ ಅಡಿಕೆ ತೋಟಗಳನ್ನು ಟ್ಯಾಂಕರ್ಗಳಲ್ಲಿ ನೀರು ತಂದು ಉಳಿಸಿಕೊಂಡಿದ್ದರು. ಅಡಿಕೆ ತೋಟಗಳನ್ನು ಉಳಿಸಿಕೊಳ್ಳಲು ಕೋಟ್ಯಂತರ ರೂಪಾಯಿ ಹಣವನ್ನು ವ್ಯಯ ಮಾಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಬೀಳುತ್ತಿರುವುದು ಒಂದೆಡೆ ಅಡಿಕೆ ಬೆಳೆಗಾರರಿಗೆ ಸಂತಸ ತಂದರೆ ಇನ್ನೊಂದೆಡೆ ಅಡಿಕೆ ಕೊಯ್ಲು ಹೇಗೆ ಮಾಡುವುದು ಎಂಬ ಚಿಂತೆಯಲ್ಲಿ ಇರುವಂತಾಗಿದೆ.</p>.<p>ನಿರಂತರವಾಗಿ ಜಡಿಮಳೆಯಾಗುತ್ತಿರುವುದರಿಂದ ಅಡಿಕೆ ತೋಟಗಳಲ್ಲಿ ಕಾಲಿಡಲು ಸಾಧ್ಯವಾಗದ ರೀತಿಯಲ್ಲಿ ಭೂಮಿ ಹಸಿಯಾಗಿದೆ. ಇನ್ನು ಫಸಲಿಗೆ ಬಂದಿರುವ ಅಡಿಕೆಯನ್ನು ಸಮಯಕ್ಕೆ ಸರಿಯಾಗಿ ಕೊಯ್ಲು ಮಾಡದೇ ಹೋದರೇ ಅಡಿಕೆ ಗೋಟು ಆಗುತ್ತದೆ. ಗೋಟು ಅಡಿಕೆಗೆ ಮಾರುಕಟ್ಟೆಯಲ್ಲಿ ದರ ಕಡಿಮೆ. ಇನ್ನು ಕೊಯ್ಲು ಮಾಡಿದ ಅಡಿಕೆಯನ್ನು ಬೇಯಿಸಿ ಒಣಗಿಸಲು ಬಿಸಿಲಿನ ಅವಶ್ಯಕತೆ ಇದೆ. ಹಾಗಾಗಿ ನಿರಂತರವಾಗಿ ಬೀಳುತ್ತಿರುವ ಮಳೆ ಒಂದಿಷ್ಟು ವಿರಾಮ ನೀಡಿದರೆ ಅಡಿಕೆ ಕೊಯ್ಲಿಗೆ ಅನುಕೂಲವಾಗುತ್ತದೆ. ಮಳೆ ಹೀಗೆ ಮುಂದುವರಿದರೆ ಅಡಿಕೆ ಕೊಯ್ಲು ಕಷ್ಟವಾಗುತ್ತದೆ ಎನ್ನುತ್ತಾರೆ ರೈತರು.</p>.<p>‘ಜುಲೈ ತಿಂಗಳಲ್ಲಿ ಅಲ್ಪ ಪ್ರಮಾಣದಲ್ಲಿ ಅಡಿಕೆ ಕೊಯ್ಲಿಗೆ ಬರುತ್ತದೆ. ಆಗಸ್ಟ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಅಡಿಕೆ ಕೊಯ್ಲಿಗೆ ಬರುತ್ತದೆ. ಪ್ರಸ್ತುತ ರಾಶಿ ಅಡಿಕೆ ಕ್ವಿಂಟಲ್ಗೆ ಕನಿಷ್ಠ ₹ 39,199 ಇದ್ದು, ಗರಿಷ್ಠ ₹ 51,600 ಇದೆ. ಮಳೆ ಒಂದಿಷ್ಟು ಬಿಡುವುದು ನೀಡಿದರೆ ಅಡಿಕೆಗೆ ಉತ್ತಮ ದರ ಇರುವುದರಿಂದ ಅಡಿಕೆ ಬೇಯಿಸಿ, ಒಣಗಿಸಿ ಮಾರಾಟ ಮಾಡಿದರೆ ಅಡಿಕೆ ಬೆಳೆಗಾರರಿಗೆ ಅನುಕೂಲವಾಗುತ್ತದೆ’ ಎನ್ನುತ್ತಾರೆ ದಿಗ್ಗೇನಹಳ್ಳಿಯ ಅಡಿಕೆ ಬೆಳೆಗಾರ ಸಿದ್ದೇಶ್ವರ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>