<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಭಾನುವಳ್ಳಿ ಗ್ರಾಮದ ಕೆಪಿಎಸ್ ಶಾಲಾ ಆವರಣದಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ ಶಾಲಾ ಆವರಣದಲ್ಲಿ ನೀರು ಸಂಗ್ರಹವಾಗಿದೆ. ಒಂದು ಕಡೆಯ ಶಾಲಾ ಕಾಂಪೌಂಡ್ ಭಾಗಶಃ ಹಾನಿಯಾದಗಿದೆ.</p>.<p>ಸಂಗ್ರಹವಾದ ನೀರು ಹರಿದು ಹೋಗಲು ಸ್ಥಳವಕಾಶವಿಲ್ಲದ ಕಾರಣ ಮಕ್ಕಳು ಶೌಚಾಲಯಕ್ಕೆ ಹೋಗದಂಥ ಪರಿಸ್ಥಿತಿ ತಲೆದೋರಿದೆ.</p>.<p>ಪ್ರೌಢಶಾಲೆ ಮತ್ತು ಪಿಯು ಕಾಲೇಜು ಆವರಣದಲ್ಲಿ ಮಳೆ ಬಂದಾಗ ನೀರು ಹರಿದು ಚರಂಡಿ ಸೇರುವಂತೆ ವ್ಯವಸ್ಥೆ ಮಾಡಬೇಕಿತ್ತು. ಈ ಬಗ್ಗೆ ಎಸ್ಡಿಎಂಸಿ ಮತ್ತು ಮುಖ್ಯೋಪಾಧ್ಯಾಯ, ಪ್ರಾಂಶುಪಾಲರು ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<p>ಈ ಭಾಗದಲ್ಲಿ ಹದ ಮಳೆ ಆಗಿದ್ದು, ತೆಂಗಿನ ತೋಟಗಳು ಮತ್ತು ಅಡಿಕೆ ತೋಟಗಳಿಗೆ ಜೀವ ಕಳೆ ಬಂದಿದೆ. ಬಿತ್ತನೆ ಮಾಡಲು ಅನುಕೂಲಕರವಾಗಿದೆ ಎಂದು ರೈತ ಮುಖಂಡ ಜಿ.ಚಂದ್ರಶೇಖರಪ್ಪ ತಿಳಿಸಿದ್ದಾರೆ.</p>.<p>‘ಭಾನುವಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ಜಾಸ್ತಿ ಮಳೆ ಬಂದ ಕಾರಣ ನೀರು ಸಂಗ್ರಹವಾಗಿದೆ. ಸದ್ಯಕ್ಕೆ ಸಂಗ್ರಹವಾದ ನೀರನ್ನು ತೆರವುಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ. ಶಾಲೆ ಆವರಣದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ ಜೆಲ್ಲಿ ಮತ್ತು ಇತರೆ ಸಲಕರಣೆಗಳು ಆವರಣದಲ್ಲಿವೆ. ಆ ಕಾರಣದಿದಲೂ ನೀರು ಸಂಗ್ರಹವಾಗಿದೆ. ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇವೆ. ಮೈದಾನ ಅಭಿವೃದ್ಧಿ ಮಾಡಲು ಗ್ರಾಮ ಪಂಚಾಯಿತಿಗೆ ಪತ್ರ ಬರೆಯಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಹನುಮಂತಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಭಾನುವಳ್ಳಿ ಗ್ರಾಮದ ಕೆಪಿಎಸ್ ಶಾಲಾ ಆವರಣದಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ ಶಾಲಾ ಆವರಣದಲ್ಲಿ ನೀರು ಸಂಗ್ರಹವಾಗಿದೆ. ಒಂದು ಕಡೆಯ ಶಾಲಾ ಕಾಂಪೌಂಡ್ ಭಾಗಶಃ ಹಾನಿಯಾದಗಿದೆ.</p>.<p>ಸಂಗ್ರಹವಾದ ನೀರು ಹರಿದು ಹೋಗಲು ಸ್ಥಳವಕಾಶವಿಲ್ಲದ ಕಾರಣ ಮಕ್ಕಳು ಶೌಚಾಲಯಕ್ಕೆ ಹೋಗದಂಥ ಪರಿಸ್ಥಿತಿ ತಲೆದೋರಿದೆ.</p>.<p>ಪ್ರೌಢಶಾಲೆ ಮತ್ತು ಪಿಯು ಕಾಲೇಜು ಆವರಣದಲ್ಲಿ ಮಳೆ ಬಂದಾಗ ನೀರು ಹರಿದು ಚರಂಡಿ ಸೇರುವಂತೆ ವ್ಯವಸ್ಥೆ ಮಾಡಬೇಕಿತ್ತು. ಈ ಬಗ್ಗೆ ಎಸ್ಡಿಎಂಸಿ ಮತ್ತು ಮುಖ್ಯೋಪಾಧ್ಯಾಯ, ಪ್ರಾಂಶುಪಾಲರು ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<p>ಈ ಭಾಗದಲ್ಲಿ ಹದ ಮಳೆ ಆಗಿದ್ದು, ತೆಂಗಿನ ತೋಟಗಳು ಮತ್ತು ಅಡಿಕೆ ತೋಟಗಳಿಗೆ ಜೀವ ಕಳೆ ಬಂದಿದೆ. ಬಿತ್ತನೆ ಮಾಡಲು ಅನುಕೂಲಕರವಾಗಿದೆ ಎಂದು ರೈತ ಮುಖಂಡ ಜಿ.ಚಂದ್ರಶೇಖರಪ್ಪ ತಿಳಿಸಿದ್ದಾರೆ.</p>.<p>‘ಭಾನುವಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ಜಾಸ್ತಿ ಮಳೆ ಬಂದ ಕಾರಣ ನೀರು ಸಂಗ್ರಹವಾಗಿದೆ. ಸದ್ಯಕ್ಕೆ ಸಂಗ್ರಹವಾದ ನೀರನ್ನು ತೆರವುಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ. ಶಾಲೆ ಆವರಣದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ ಜೆಲ್ಲಿ ಮತ್ತು ಇತರೆ ಸಲಕರಣೆಗಳು ಆವರಣದಲ್ಲಿವೆ. ಆ ಕಾರಣದಿದಲೂ ನೀರು ಸಂಗ್ರಹವಾಗಿದೆ. ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇವೆ. ಮೈದಾನ ಅಭಿವೃದ್ಧಿ ಮಾಡಲು ಗ್ರಾಮ ಪಂಚಾಯಿತಿಗೆ ಪತ್ರ ಬರೆಯಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಹನುಮಂತಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>